IPL 2021: 56 ಲೀಗ್ ಪಂದ್ಯಗಳಿಗೆ ತೆರೆ: ಡೆಲ್ಲಿ-ಚೆನ್ನೈ ಕ್ವಾಲಿಫೈಯರ್​ಗೆ, ಆರ್​ಸಿಬಿ-ಕೆಕೆಆರ್ ಎಲಿಮಿನೇಟರ್​ನಲ್ಲಿ ಮುಖಾಮುಖಿ

ಅಂತಿಮ ಹಂತಕ್ಕೆ ತಲುಪಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2021 ಸಾಕಷ್ಟು ರೋಚಕತೆಯಿಂದ ಕೂಡಿದೆ. ಈ ಬಾರಿ ಯಾರ ಮಡಿಲಿಗೆ ಟ್ರೋಫಿ ಎಂಬುದು ಇನ್ನೇನು ಕೆಲವೇ ದಿನಗಳಲ್ಲಿ ಬಹಿರಂಗವಾಗಲಿದೆ.

IPL 2021: 56 ಲೀಗ್ ಪಂದ್ಯಗಳಿಗೆ ತೆರೆ: ಡೆಲ್ಲಿ-ಚೆನ್ನೈ ಕ್ವಾಲಿಫೈಯರ್​ಗೆ, ಆರ್​ಸಿಬಿ-ಕೆಕೆಆರ್ ಎಲಿಮಿನೇಟರ್​ನಲ್ಲಿ ಮುಖಾಮುಖಿ
DC vs CSK and RCB vs KKR
Follow us
| Updated By: Vinay Bhat

Updated on: Oct 09, 2021 | 7:34 AM

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2021) ಅಂತಿಮ ಹಂತಕ್ಕೆ ಬಂದು ನಿಂತಿದೆ. 56 ಲೀಗ್ ಪಂದ್ಯಗಳಿಗೆ ಶುಕ್ರವಾರ ತೆರೆಬಿದ್ದಿದ್ದು, ಇನ್ನುಂದೆ ಕ್ವಾಲಿಫೈಯರ್ ಪಂದ್ಯಗಳು ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ (Delhi Capitals), ಚೆನ್ನೈ ಸೂಪರ್ ಕಿಂಗ್ಸ್ (Chennai Super Kings), ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡ ಈ ಬಾರಿ ಕಪ್ ಗೆಲ್ಲುವ ರೇಸ್​ನಲ್ಲಿದೆ. ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಪ್ಲೇ ಆಫ್ ಪ್ರವೇಶಿಸುವ ಕೊನೇಯ ಕಠಿಣ ಅವಕಾಶ ಇತ್ತಾದರು ನಿನ್ನೆ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ವಿಫಲವಾಗಿ ಟೂರ್ನಿಯಿಂದ ಹೊರಬಿತ್ತು. ಸದ್ಯ ಪ್ಲೇ ಆಫ್ ಪಂದ್ಯಗಳ ಮೇಲೆ ಎಲ್ಲರ ಕಣ್ಣಿದೆ.

ಮೊದಲ ಕ್ವಾಲಿಫೈಯರ್​ನಲ್ಲಿ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿದೆ. ಇಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಡಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ಸೆಣೆಸಾಟ ನಡೆಸಲಿದ್ದು, ಇಲ್ಲಿ ಸೋತ ತಂಡ ನೇರವಾಗಿ ಟೂರ್ನಿಯಿಂದ ಹೊರಬಿದ್ದರೆ ಗೆದ್ದ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡದೊಂದಿಗೆ ಫೈನಲ್​ಗೇರಲು ಹೋರಾಟ ನಡೆಸಬೇಕಿದೆ.

ಡೆಲ್ಲಿ ಮತ್ತು ಚೆನ್ನೈ ತಂಡಗಳು ಮೊದಲ ಕ್ವಾಲಿಫೈಯರ್​ನಲ್ಲಿ ಅಕ್ಟೋಬರ್ 10 ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿ ಆಗಲಿದೆ. ಆರ್​​ಸಿಬಿ ಮತ್ತು ಕೆಕೆಆರ್ ಅಕ್ಟೋಬಬರ್ 11 ರಂದು ಎಲಿಮಿನೇಟರ್ ಪಂದ್ಯದಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಣೆಸಾಟ ನಡೆಸಲಿದೆ. ಕ್ವಾಲಿಫೈಯರ್ 2 ಪಂದ್ಯ ಅ. 13 ರಂದು ನಡೆದರೆ ಅಂತಿಮ ಫೈನಲ್ ಕದನ ಅ. 15 ರಂದು ಜರುಗಲಿದೆ.

ಈ ಬಾರಿಯ ಮೊದಲ ಕ್ವಾಲಿಫೈಯರ್ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಯಾಕಂದ್ರೆ ಐಪಿಎಲ್ 2021 ರಲ್ಲಿ ಡೆಲ್ಲಿ-ಚೆನ್ನೈ ಎರಡು ಬಾರಿ ಮುಖಾಮಖಿ ಆಗಿತ್ತು. ಈ ಎರಡೂ ಪಂದ್ಯದಲ್ಲಿ ಧೋನಿ ಪಡೆ ಪಂತ್ ವಿರುದ್ಧ ಸೋಲು ಕಂಡಿದೆ. ಇತ್ತ ಚೊಚ್ಚಲ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಆರ್​ಸಿಬಿ ಪಾಸಿಟಿವ್ ಆಗಿದೆ. ನಾಯಕನಾಗಿ ವಿರಾಟ್ ಕೊಹ್ಲಿಗೆ ಇದು ಕೊನೇಯ ಐಪಿಎಲ್ ಕೂಡ ಹೌದು. ಈ ಬಾರಿಯ ಲೀಗ್ ಪಂದ್ಯಗಳ ಮುಖಾಮುಖಿಯಲ್ಲಿ ಒಮ್ಮೆ ಕೆಕೆಆರ್ ಗೆದ್ದರೆ, ಮತ್ತೊಮ್ಮೆ ಆರ್​ಸಿಬಿ ಗೆದ್ದಿದೆ.

ಒಟ್ಟಾರೆ ಅಂತಿಮ ಹಂತಕ್ಕೆ ತಲುಪಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2021 ಸಾಕಷ್ಟು ರೋಚಕತೆಯಿಂದ ಕೂಡಿದೆ. ಈ ಬಾರಿ ಯಾರ ಮಡಿಲಿಗೆ ಟ್ರೋಫಿ ಎಂಬುದು ಇನ್ನೇನು ಕೆಲವೇ ದಿನಗಳಲ್ಲಿ ಬಹಿರಂಗವಾಗಲಿದೆ.

SRH vs MI: ಮನೀಶ್ ಪಾಂಡೆ ಏಕಾಂಗಿ ಹೋರಾಟ ವ್ಯರ್ಥ; ಗೆಲುವಿನೊಂದಿಗೆ ಐಪಿಎಲ್ ಪಯಣ ಮುಗಿಸಿದ ಮುಂಬೈ

RCB vs DC, IPL 2021: ಕೊನೆಯ ಎಸೆತದಲ್ಲಿ ಸಿಕ್ಸ್​: ಡೆಲ್ಲಿ ವಿರುದ್ದ ಆರ್​ಸಿಬಿಗೆ ರೋಚಕ ಜಯ

(IPL 2021 league matches Ended DC vs CSK in Qualifier 1 and RCB vs KKR in eliminator Match)

 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ