AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮೈದಾನಕ್ಕಿಳಿದು ತಂಡದ ಯುವ ಆಟಗಾರರಿಗೆ ಖುದ್ದು ಧೋನಿಯಿಂದಲೇ ಬ್ಯಾಟಿಂಗ್ ಪ್ರ್ಯಾಕ್ಟೀಸ್

ಸಿಎಸ್ ಕೆ ತಂಡದ ಪ್ರಮುಖ ಸದಸ್ಯರಾದ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ದೀಪಕ್ ಚಾಹರ್, ಋತುರಾಜ್ ಗಾಯಕ್ವಾಡ್ ಮುಂತಾದವರು ದುಬೈನ ಐಸಿಸಿ ಕ್ರಿಕೆಟ್ ಅಕಾಡಮೆ ಮೈದಾನದಲ್ಲಿ ಅಭ್ಯಾಸದಲ್ಲಿ ತೊಡಗಿದರು.

IPL 2021: ಮೈದಾನಕ್ಕಿಳಿದು ತಂಡದ ಯುವ ಆಟಗಾರರಿಗೆ ಖುದ್ದು ಧೋನಿಯಿಂದಲೇ ಬ್ಯಾಟಿಂಗ್ ಪ್ರ್ಯಾಕ್ಟೀಸ್
MS Dhoni
TV9 Web
| Edited By: |

Updated on: Aug 21, 2021 | 8:20 AM

Share

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಕೂಟದ ಯುಎಇ ಚರಣಕ್ಕೆ ಇನ್ನೊಂದು ತಿಂಗಳಷ್ಟೆ ಬಾಕಿಯಿದೆ. ಸೆಪ್ಟೆಂಬರ್ 19ರಿಂದ ದುಬೈನಲ್ಲಿ ಐಪಿಎಲ್ ಮುಂದುವರಿದ ಭಾಗ ಆರಂಭವಾಗಲಿದೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಹಲವು ಸದಸ್ಯರು ಈಗಾಗಲೇ ದುಬೈ ತಲುಪಿ ಕ್ವಾರಂಟೈನ್ ಕೂಡ ಪೂರ್ಣಗೊಳಿಸಿದ್ದು ಅಭ್ಯಾಸಕ್ಕಿಳಿದಿದೆ.

ಎಲ್ಲರಿಗಿಂತ ಮೊದಲೇ ಐಪಿಎಲ್‌ ಭಾಗ-2ಕ್ಕೆ ಸಿದ್ದತೆ ನಡೆಸಿರುವ ಧೋನಿ ತಂಡವು ಇದೀಗ ಒಟ್ಟಾಗಿ ಮೈದಾನಕ್ಕಿಳಿದಿದೆ. ಧೋನಿ ಬ್ಯಾಟ್‌ ಹಿಡಿದು ಮೈದಾನಕ್ಕಿಳಿದ ಫೋಟೋಗಳು ಹಾಗೂ ಇತರ ಆಟಗಾರರೊಂದಿಗೆ ಸಮಾಲೋಚಿಸುತ್ತಿರುವ ಫೋಟೋಗಳನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ಫ್ರಾಂಚೈಸಿ ತನ್ನ ಅಧಿಕೃತ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಯುವ ಆಟಗಾರರಿಗೆ ಧೋನಿ ಬ್ಯಾಟಿಂಗ್ ಟ್ರಿಕ್ಸ್ ಹೇಳಿಕೊಡುತ್ತಿದ್ದಾರೆ.

ಸಿಎಸ್ ಕೆ ತಂಡದ ಪ್ರಮುಖ ಸದಸ್ಯರಾದ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ದೀಪಕ್ ಚಾಹರ್, ಋತುರಾಜ್ ಗಾಯಕ್ವಾಡ್ ಮುಂತಾದವರು ದುಬೈನ ಐಸಿಸಿ ಕ್ರಿಕೆಟ್ ಅಕಾಡಮೆ ಮೈದಾನದಲ್ಲಿ ಅಭ್ಯಾಸದಲ್ಲಿ ತೊಡಗಿದರು.

ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್‌ 7 ಪಂದ್ಯಗಳನ್ನಾಡಿ 5 ಗೆಲುವು ಹಾಗೂ 2 ಸೋಲಿನೊಂದಿಗೆ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ಐಪಿಎಲ್‌ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಕಳೆದ ಮೇ ತಿಂಗಳಿನಲ್ಲಿ ಟೂರ್ನಿಯ ಮಧ್ಯ ಭಾಗದಲ್ಲಿದ್ದಾಗ ಕೊರೊನಾವೈರಸ್‌ನ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಹೀಗಾಗಿ ಟೂರ್ನಮೆಂಟ್‌ನ ಉಳಿದ ಪಂದ್ಯಗಳನ್ನು ಯುಎಇನಲ್ಲಿ ಸೆಪ್ಟೆಂಬರ್ 19ರಿಂದ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಎರಡನೇ ಚರಣದ ಈ ಪಂದ್ಯಾವಳಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಕದನದ ಮೂಲಕ ಆರಂಭವಾಗಲಿದೆ.

ಒಟ್ಟು ಮೂರು ತಾಣಗಳಲ್ಲಿ ಇನ್ನುಳಿದ ಪಂದ್ಯಗಳು ನಡೆಯಲಿದೆ. ದುಬೈ, ಅಬುದಾಬಿ ಹಾಗೂ ಶಾರ್ಜಾ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತವೆ. ಅಬುದಾಬಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪಂದ್ಯಗಳಿಗೆ ಚಾಲನೆ ನೀಡಲಿದೆ. 13 ಪಂದ್ಯಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜನೆಯಾದರೆ ಶಾರ್ಜಾ ಕ್ರೀಡಾಂಗಣದಲ್ಲಿ 10 ಪಂದ್ಯಗಳು ನಡೆಯುತ್ತವೆ. 8 ಪಂದ್ಯಗಳಿಗೆ ಅಬುದಾಬಿ ಆತಿಥ್ಯ ವಹಿಸಲಿದೆ.

Nathan Ellis: ಪಂಜಾಬ್ ಕಿಂಗ್ಸ್​ನಲ್ಲಿ ದೊಡ್ಡ ಬದಲಾವಣೆ: ರಾಹುಲ್ ತಂಡ ಸೇರಿದ ಹೊಸ ಸ್ಟಾರ್ ಆಟಗಾರ

8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್.. 9 ಸಿಕ್ಸರ್, 12 ಎಸೆತಗಳಲ್ಲಿ 66 ರನ್ ಸಿಡಿಸಿದ ಜಿಂಬಾಬ್ವೆ ತಂಡದ ಬೌಲರ್ ಕಾರ್ಲ್ ಮುಂಬಾ!

(IPL 2021 MS Dhoni gives special batting advice to CSK opener Ruturaj Gaikwad Viral video)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ