AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮುಂಬೈ ಇಂಡಿಯನ್ಸ್​ ಅಭಿಮಾನಿಗಳಿಗೆ ಸಿಹಿ ಸುದ್ದಿ: ಸ್ಟಾರ್ ಆಟಗಾರ ಮೊದಲ ಪಂದ್ಯಕ್ಕೆ ಲಭ್ಯ

IPL 2021 ಮೊದಲಾರ್ಧದಲ್ಲಿ ಸಿಎಸ್​ಕೆ ತಂಡವನ್ನು ಸೋಲಿನ ರುಚಿ ತೋರಿಸಿದ್ದೇ ಪೊಲಾರ್ಡ್​. ಏಕೆಂದರೆ ಏಕಾಂಗಿಯಾಗಿ ಹೋರಾಡಿದ್ದ ಪೊಲಾರ್ಡ್​ ಕೇವಲ 34 ಎಸೆತಗಳಲ್ಲಿ 87 ರನ್ ಬಾರಿಸುವ ಮೂಲಕ ಸಿಎಸ್​ಕೆ ನೀಡಿದ್ದ 219 ರನ್​ಗಳನ್ನು ಚೇಸ್ ಮಾಡಿದ್ದರು. ಇದೀಗ ದ್ವಿತೀಯಾ ಪಂದ್ಯಕ್ಕೂ ಪೊಲಾರ್ಡ್​ ಲಭ್ಯರಿರುವುದು ಮುಂಬೈ ಬಲವನ್ನು ಹೆಚ್ಚಿಸಿದೆ.

IPL 2021: ಮುಂಬೈ ಇಂಡಿಯನ್ಸ್​ ಅಭಿಮಾನಿಗಳಿಗೆ ಸಿಹಿ ಸುದ್ದಿ: ಸ್ಟಾರ್ ಆಟಗಾರ ಮೊದಲ ಪಂದ್ಯಕ್ಕೆ ಲಭ್ಯ
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
TV9 Web
| Edited By: |

Updated on:Sep 18, 2021 | 2:43 PM

Share

ಐಪಿಎಲ್ (IPL 2021) ದ್ವಿತಿಯಾರ್ಧ ಭಾನುವಾರದಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಸಿಎಸ್​ಕೆ (CSK) ಮುಖಾಮುಖಿಯಾಗಲಿದೆ. ಉಭಯ ತಂಡಗಳು ಬಲಿಷ್ಠ ಪಡೆಯನ್ನು ಒಳಗೊಂಡಿದ್ದರೂ ಮೊದಲ ಪಂದ್ಯಕ್ಕೆ ಕೆಲ ಆಟಗಾರರು ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಅದರಂತೆ ಇಂಗ್ಲೆಂಡ್​ನಿಂದ ಆಗಮಿಸಿರುವ ಸಿಎಸ್​ಕೆ ಆಲ್​ರೌಂಡರ್ ಸ್ಯಾಮ್ ಕರನ್ ಕ್ವಾರಂಟೈನ್​ನಲ್ಲಿದ್ದು, ಹೀಗಾಗಿ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಾಗುವುದಿಲ್ಲ. ಇದರ ಬೆನ್ನಲ್ಲೇ ಸಿಪಿಎಲ್​ ಮುಗಿದರೂ ಕೀರನ್ ಪೊಲಾರ್ಡ್ ಆಗಮಿಸಿದಿದ್ದ ಕಾರಣ ಅವರು ಕೂಡ ಮೊದಲ ಪಂದ್ಯಕ್ಕೆ ಅಲಭ್ಯ ಎನ್ನಲಾಗಿತ್ತು. ಆದರೀಗ ಮೊದಲ ಪಂದ್ಯಕ್ಕೆ ಕೇವಲ 2 ದಿನಗಳಿರುವಾಗ ಪೊಲಾರ್ಡ್ ದುಬೈಗೆ ಬಂದಿಳಿದಿದ್ದಾರೆ.

ಅಂದರೆ ಯುಎಇ ಕ್ವಾರಂಟೈನ್ ನಿಯಮದಲ್ಲಿ ಬಯೋ ಬಬಲ್ ಟು ಬಯೋ ಬಬಲ್ ಅವಕಾಶವಿದೆ. ಅದರಂತೆ ಸಿಪಿಎಲ್​ ಮುಗಿಸಿ ಬಂದಿರುವ ಆಟಗಾರರು ಕೇವಲ​ 2 ದಿನ ಕ್ವಾರಂಟೈನ್​ ಇದ್ದರೆ ಸಾಕು. ಇತ್ತ ಸೆಪ್ಟೆಂಬರ್ 17ಕ್ಕೆ ಆಗಮಿಸಿರುವ ಕೀರನ್ ಪೊಲಾರ್ಡ್​ ಸೆಪ್ಟೆಂಬರ್ 19 ರ ವೇಳೆಗೆ ಕ್ವಾರಂಟೈನ್​ನಿಂದ ಹೊರಬರಲಿದ್ದಾರೆ. ಹಾಗಾಗಿ ಭಾನುವಾರ ನಡೆಯಲಿರುವ ಸಿಎಸ್​ಕೆ ವಿರುದ್ದದ ಪಂದ್ಯಕ್ಕೆ ಲಭ್ಯರಿರಲಿದ್ದಾರೆ.

ಇನ್ನು ಮೊದಲಾರ್ಧದಲ್ಲಿ ಸಿಎಸ್​ಕೆ ತಂಡವನ್ನು ಸೋಲಿನ ರುಚಿ ತೋರಿಸಿದ್ದೇ ಪೊಲಾರ್ಡ್​. ಏಕೆಂದರೆ ಏಕಾಂಗಿಯಾಗಿ ಹೋರಾಡಿದ್ದ ಪೊಲಾರ್ಡ್​ ಕೇವಲ 34 ಎಸೆತಗಳಲ್ಲಿ 87 ರನ್ ಬಾರಿಸುವ ಮೂಲಕ ಸಿಎಸ್​ಕೆ ನೀಡಿದ್ದ 219 ರನ್​ಗಳನ್ನು ಚೇಸ್ ಮಾಡಿದ್ದರು. ಇದೀಗ ದ್ವಿತೀಯಾ ಪಂದ್ಯಕ್ಕೂ ಪೊಲಾರ್ಡ್​ ಲಭ್ಯರಿರುವುದು ಮುಂಬೈ ಬಲವನ್ನು ಹೆಚ್ಚಿಸಿದೆ.

ಮುಂಬೈ ಇಂಡಿಯನ್ಸ್ ತಂಡ : ರೋಹಿತ್ ಶರ್ಮಾ (ನಾಯಕ), ಆಡಮ್ ಮಿಲ್ನೆ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅನುಕುಲ್ ರಾಯ್, ಅರ್ಜುನ್ ತೆಂಡೂಲ್ಕರ್, ಕ್ರಿಸ್ ಲಿನ್, ಧವಳ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜೇಮ್ಸ್ ನೀಶಮ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸೆನ್, ಮೊಹ್ಸಿನ್ ಖಾನ್, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಸೌರಭ್ ತಿವಾರಿ, ಸೂರ್ಯಕುಮಾರ್ ಯಾದವ್, ಟ್ರೆಂಟ್ ಬೌಲ್ಟ್, ಯುಧ್ವೀರ್ ಸಿಂಗ್.

ಇದನ್ನೂ ಓದಿ: IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಭಾಗ್ಯ ಕೊಹ್ಲಿ, ಗೇಲ್, ಎಬಿಡಿಗೆ ಇನ್ನೂ ಸಿಕ್ಕಿಲ್ಲ

ಇದನ್ನೂ ಓದಿ: Crime News: ಅಕ್ಕನಿಗೆ ಯುವಕನೊಂದಿಗೆ ಸಂಬಂಧ: ಕಥೆ ಮುಗಿಸಿ ನಗುತ್ತಾ ನಿಂತಿದ್ದ ತಮ್ಮ..!

ಇದನ್ನೂ ಓದಿ: IPL 2021: ಐಪಿಎಲ್ ದ್ವಿತಿಯಾರ್ಧದಲ್ಲಿ ಸೃಷ್ಟಿಯಾಗಲಿದೆ ಹೊಸ ದಾಖಲೆ

Published On - 2:19 pm, Sat, 18 September 21

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ