AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮುಂಬೈ ಇಂಡಿಯನ್ಸ್​​ಗೆ ಪ್ಲೇಆಫ್​ ಸಂ-ಕಷ್ಟ..!

mumbai indians playoff chances: ಐದು ಬಾರಿಯ ಐಪಿಎಲ್ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ಹಲವು ಬಾರಿ ಕಂಬ್ಯಾಕ್ ಮಾಡಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಇತಿಹಾಸವಿದೆ.

IPL 2021: ಮುಂಬೈ ಇಂಡಿಯನ್ಸ್​​ಗೆ ಪ್ಲೇಆಫ್​ ಸಂ-ಕಷ್ಟ..!
Rohit sharma
TV9 Web
| Edited By: |

Updated on:Sep 28, 2021 | 2:24 PM

Share

ಐಪಿಎಲ್​ನ (IPL 2021) ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ​ ಸತತ ಸೋಲಿನಿಂದ ಕಂಗೆಟ್ಟಿದೆ. ದ್ವಿತಿಯಾರ್ಧದಲ್ಲಿ ಆಡಿದ 3 ಪಂದ್ಯಗಳಲ್ಲಿ ಸೋಲನುಭವಿಸುವಾಗ ಸಂಕಷ್ಟಕ್ಕೆ ಸಿಲುಕಿದೆ. ಅಷ್ಟೇ ಅಲ್ಲದೆ ಮೊದಲಾರ್ಧದಲ್ಲಿ 4ನೇ ಸ್ಥಾನದಲ್ಲಿದ್ದ ತಂಡವು ಇದೀಗ 7ನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ 10 ಪಂದ್ಯಗಳಲ್ಲಿ ನಾಲ್ಕರಲ್ಲಿ ಮಾತ್ರ ಗೆದ್ದಿರುವ ರೋಹಿತ್​ ಪಡೆಗೆ ಇನ್ನು ಉಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಹೀಗಾಗಿಯೇ ಮುಂಬೈಗೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಏಕೆಂದರೆ ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಸೋತರೆ ಪ್ಲೇ ಆಫ್​ ಕನಸು ಭಗ್ನಗೊಳ್ಳುವ ಸಾಧ್ಯತೆಯಿದೆ.

ಈಗಾಗಲೇ ಸಿಎಸ್​ಕೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇ ಆಫ್​ ಪ್ರವೇಶವನ್ನು ಬಹುತೇಕ ಖಚಿತಪಡಿಸಿದೆ. ಇನ್ನು ಆರ್​ಸಿಬಿ 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನುಳಿದ 4 ಪಂದ್ಯಗಳಲ್ಲಿ ಆರ್​ಸಿಬಿ 2 ಗೆದ್ದರೆ ಪ್ಲೇ ಆಫ್​ ಪ್ರವೇಶಿಸಬಹುದು. ಇತ್ತ ಕೆಕೆಆರ್, ಪಂಜಾಬ್ ಕಿಂಗ್ಸ್​​ ತಂಡಗಳು ಕೂಡ 4 ಪಂದ್ಯಗಳನ್ನು ಆಡಬೇಕಿದೆ. ರಾಜಸ್ಥಾನ್, ಪಂಜಾಬ್ ಹಾಗೂ ಕೆಕೆಆರ್​ ತಂಡಗಳಿಗೂ ಪ್ಲೇ ಆಫ್​ ಪ್ರವೇಶಿಸಲು ಅವಕಾಶವಿದ್ದು, ಹೀಗಾಗಿ ಈ ತಂಡಗಳ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಜಯಿಸಲೇಬೇಕಾದ ಅನಿವಾರ್ಯತೆ ಇದೆ. ಒಂದು ವೇಳೆ ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ಮುಂಬೈ ಸೋತರೆ ಕೆಎಲ್ ರಾಹುಲ್​ ಪಡೆಗೆ ಪ್ಲೇ ಆಫ್​ ಪ್ರವೇಶಿಸುವ ಹಾದಿ ಸುಗಮವಾಗಲಿದೆ. ಹೀಗಾಗಿ ಪಂಜಾಬ್ ಕಿಂಗ್ಸ್​ ವಿರುದ್ದ ಪಂದ್ಯವು ಮುಂಬೈ ಪಾಲಿಗೆ ಮಹತ್ವದ್ದು.

ಇನ್ನು ಪಂಜಾಬ್ ವಿರುದ್ದ ಮುಂಬೈ ಗೆದ್ದರೆ, ಉಳಿದ ಮೂರು ಪಂದ್ಯಗಳನ್ನು ಗೆಲ್ಲಬೇಕು. ಅಂದರೆ ಮುಂಬೈ ಇಂಡಿಯನ್ಸ್​ ಮುಂದಿನ 4 ಪಂದ್ಯಗಳನ್ನು ಗೆದ್ದರೆ ಸುಲಭವಾಗಿ ಪ್ಲೇ ಆಫ್​ ಪ್ರವೇಶಿಸುವ ಅವಕಾಶ ಇರಲಿದೆ. ಒಂದು ವೇಳೆ ನಾಲ್ಕರಲ್ಲಿ ಒಂದು ಸೋತು ಉಳಿದ ಮೂರು ಪಂದ್ಯಗಳನ್ನು ಗೆದ್ದುಕೊಂಡರೆ ಪ್ಲೇ ಆಫ್​ನಲ್ಲಿ ನಾಲ್ಕನೇ ಸ್ಥಾನ ಪಡೆಯಲು ರನ್​ ರೇಟ್ ಮೊರೆ ಹೋಗಬೇಕಾಗುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಮುಂಬೈ ಉತ್ತಮ ರನ್​ ರೇಟ್​ನೊಂದಿಗೆ ಗೆಲ್ಲುವುದು ಸಹ ಅನಿವಾರ್ಯ. ಒಟ್ಟಿನಲ್ಲಿ ಐದು ಬಾರಿಯ ಐಪಿಎಲ್ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ಹಲವು ಬಾರಿ ಕಂಬ್ಯಾಕ್ ಮಾಡಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಇತಿಹಾಸವಿದೆ. ಹೀಗಾಗಿ ಮುಂದಿನ ನಾಲ್ಕು ಪಂದ್ಯಗಳಲ್ಲಿ ರೋಹಿತ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

ಇದನ್ನೂ ಓದಿ: IPL 2021: ಇದು ಅಂತಿಂಥ ಗೆಲುವಲ್ಲ…ಮುಂಬೈ ದಾಖಲೆಯನ್ನು ಅಳಿಸಿ ಹಾಕಿದ RCB

ಇದನ್ನೂ ಓದಿ: IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

ಇದನ್ನೂ ಓದಿ: Crime News: ತಾಯಿಗೆ ಅನೈತಿಕ ಸಂಬಂಧ: ಅದನ್ನೇ ಬಂಡವಾಳ ಮಾಡಿಕೊಂಡ ಮಗಳು

(IPL 2021: mumbai indians playoff scenarios)

Published On - 2:23 pm, Tue, 28 September 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ