AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಅಂಬಟಿ ರಾಯುಡು ಈ ಐಪಿಎಲ್​ನ ಕಳಪೆ ಆಟಗಾರ: ಸೆಹ್ವಾಗ್ ಪ್ರಶ್ನೆಗೆ ನೆಟ್ಟಿಗರ ಉತ್ತರ

IPL 2021: ಪೋಲ್​ನಲ್ಲಿ , ಸುನೀಲ್ ನಾರೈನ್, ಅಮಿತ್ ಮಿಶ್ರ, ಶಿಖರ್ ಧವನ್ ಮತ್ತು ರಾಯುಡು ಎಂಬ ನಾಲ್ಕು ಆಯ್ಕೆಗಳನ್ನು ಸೆಹ್ವಾಗ್ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ರಾಯುಡುವನ್ನು ಆಯ್ಕೆ ಮಾಡಿದ್ದಾರೆ.

IPL 2021: ಅಂಬಟಿ ರಾಯುಡು ಈ ಐಪಿಎಲ್​ನ ಕಳಪೆ ಆಟಗಾರ: ಸೆಹ್ವಾಗ್ ಪ್ರಶ್ನೆಗೆ ನೆಟ್ಟಿಗರ ಉತ್ತರ
ಅಂಬಾಟಿ ರಾಯುಡು
TV9 Web
| Edited By: |

Updated on: Oct 07, 2021 | 5:34 PM

Share

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಟೂರ್ನಿ ಅಂತಿಮ ಹಂತಕ್ಕೆ ತಲುಪುತ್ತಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings), ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದಿದೆ. ಹೀಗೆ ಉತ್ತಮ ಫಾರ್ಮ್​ನಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ಗೆ ಕ್ರಿಕೆಟ್ ಅಭಿಮಾನಿಗಳು ನೀಡಿರುವ ಉತ್ತರ ಮುಖಭಂಗ ಉಂಟು ಮಾಡಿದೆ.

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ‘ಕೂ’ ವೇದಿಕೆಯಲ್ಲಿ ಪೋಲ್ ಮೂಲಕ ‘ಈ ಬಾರಿಯ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರ ಯಾರು ?’ ಎಂದು ಕೇಳಿದ್ದ ಪ್ರಶ್ನೆಗೆ ನೆಟ್ಟಿಗರು ಈ ಉತ್ತರ ನೀಡಿದ್ದಾರೆ. ಪೋಲ್​ನಲ್ಲಿ , ಸುನೀಲ್ ನಾರೈನ್, ಅಮಿತ್ ಮಿಶ್ರ, ಶಿಖರ್ ಧವನ್ ಮತ್ತು ರಾಯುಡು ಎಂಬ ನಾಲ್ಕು ಆಯ್ಕೆಗಳನ್ನು ಸೆಹ್ವಾಗ್ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ರಾಯುಡುವನ್ನು ಆಯ್ಕೆ ಮಾಡಿದ್ದಾರೆ. ರಾಯುಡು ನಂತರದ ಸ್ಥಾನದಲ್ಲಿ ಶಿಖರ್ ಧವನ್, ಅಮಿತ್ ಮಿಶ್ರ, ಸುನಿಲ್ ಕ್ರಮವಾಗಿ ಇದ್ದಾರೆ. ಇತ್ತೀಚೆಗಷ್ಟೇ ಕೂ ಕುಟುಂಬವನ್ನು ಸೇರಿದ್ದ ಸೆಹ್ವಾಗ್ ಅವರಿಗೆ ಅಭಿಮಾನಿಗಳಿಂದ ಅದ್ಭುತ ಪ್ರತಿಕ್ರಿಯೆ ಲಭಿಸಿತ್ತು.

ಸಿಎಸ್​ಕೆ ಪ್ರದರ್ಶನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಆಟ ಪ್ರದರ್ಶಿಸುತ್ತಿದೆ. ಈವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದ್ದು 10 ಪಂದ್ಯಗಳಲ್ಲಿ ಗೆದ್ದಿದೆ. ಮೂರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.739 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಧೋನಿ ಪಡೆ ಇಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೆ. ಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?