AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ

IPL 2021 New Schedule: ಇನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಮ್ಮ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದು, ಹೀಗಾಗಿ ರಾಷ್ಟ್ರೀಯ ತಂಡದಲ್ಲಿರುವ ಪ್ರಮುಖ ಪ್ಲೇಯರ್ಸ್ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ
ರಾಯಲ್ ಚಾಲೆಂಜರ್ಸ್ ಬೆಂಗಳೂರು
TV9 Web
| Edited By: |

Updated on: Aug 01, 2021 | 8:49 PM

Share

ಐಪಿಎಲ್ 2021 (IPL 2021) ರ ಎರಡನೇ ಹಂತದ ಪಂದ್ಯಗಳು ಯುಎಇಯಲ್ಲಿ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ನಡೆಯಲಿವೆ. ಏಪ್ರಿಲ್​ನಲ್ಲಿ ಶುರುವಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಕೊರೋನಾ ಕಾರಣದಿಂದ ಮೇ 4 ರಂದು ಮುಂದೂಡಲಾಯಿತು. ಇದೀಗ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಿ ಬಿಸಿಸಿಐ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಅಬುಧಾಬಿ, ಶಾರ್ಜಾ ಹಾಗೂ ದುಬೈನ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ಐಪಿಎಲ್​ನ 31 ಪಂದ್ಯಗಳು ಜರುಗಲಿವೆ. ಆದರೆ ಅತ್ತ ಇಂಗ್ಲೆಂಡ್​ ಆಟಗಾರರು ಟೂರ್ನಿಯ ದ್ವಿತಿಯಾರ್ಧದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಇತ್ತೀಚೆಗಷ್ಟೇ ಇಸಿಬಿ ನಿರ್ದೇಶಕ ಆ್ಯಶ್ಲೆ ಜೈಲ್ಸ್ ತಿಳಿಸಿದ್ದರು. ಇದರಿಂದ ಕೆಲ ತಂಡಗಳ ಪ್ರಮುಖ ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತ. ಆದರೆ ಇತ್ತ ತಮ್ಮ ರಾಷ್ಟ್ರದ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಸ್ಪಷ್ಟಪಡಿಸಿದೆ.

ಸೆಪ್ಟೆಂಬರ್-ಅಕ್ಟೋಬರ್ ನಡುವೆ ನ್ಯೂಜಿಲ್ಯಾಂಡ್ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ. ಪಾಕ್​ ವಿರುದ್ದ ನ್ಯೂಜಿಲೆಂಡ್ ಮೂರು ಏಕದಿನ ಪಂದ್ಯಗಳು ಮತ್ತು ಟಿ 20 ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ಕಿವೀಸ್ ಆಟಗಾರರು ಲಭ್ಯರಿರುವುದು ಅನುಮಾನ ಎನ್ನಲಾಗಿತ್ತು. ಆದರೆ ಇದೀಗ ನ್ಯೂಜಿಲೆಂಡ್​ನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ಡೇವಿಡ್ ವೈಟ್ ತಮ್ಮ ಆಟಗಾರರು ಐಪಿಎಲ್​ ದ್ವಿತಿಯಾರ್ಧಕ್ಕೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐಗೆ ತಿಳಿಸಿದೆ.

ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕೈಲ್ ಜೇಮಿಸನ್ ಹಾಗೂ ಫಿನ್ ಅಲೆನ್ ಆಡುವುದು ಖಚಿತವಾಗಿದೆ. ಇನ್ನು ಐಪಿಎಲ್​ನಲ್ಲಿ ಆಡುತ್ತಿರುವ ನ್ಯೂಜಿಲೆಂಡ್ ಕ್ರಿಕೆಟರುಗಳಾದ ಎಸ್​ಆರ್​ಹೆಚ್​ ತಂಡದ ಕೇನ್ ವಿಲಿಯಮ್ಸನ್, ಮುಂಬೈ ತಂಡದ ಆ್ಯಡಂ ಮಿಲ್ನೆ, ಟ್ರೆಂಟ್​ ಬೌಲ್ಟ್, ಕೆಕೆಆರ್​ ತಮಡ ಟಿಮ್ ಸೀಫರ್ಟ್​, ಲಾಕಿ ಫರ್ಗುಸನ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಿಚೆಲ್ ಸ್ಯಾಂಟ್ನರ್ ಕೂಡ ಐಪಿಎಲ್​ನ ದ್ವಿತಿಯಾರ್ಧಕ್ಕೆ ಲಭ್ಯರಿರಲಿದ್ದಾರೆ.

ಇನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಮ್ಮ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದು, ಹೀಗಾಗಿ ರಾಷ್ಟ್ರೀಯ ತಂಡದಲ್ಲಿರುವ ಪ್ರಮುಖ ಪ್ಲೇಯರ್ಸ್ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಇಂಗ್ಲೆಂಡ್ ತಂಡ ಸೆಪ್ಟೆಂಬರ್ 10 ರಿಂದ14 ರವರೆಗೆ ಭಾರತದ ವಿರುದ್ಧ ಐದು ಪಂದ್ಯಗಳ ಸರಣಿಯ ಕೊನೆಯ ಟೆಸ್ಟ್ ಆಡಲಿದೆ. ಈ ಸರಣಿ ಬಳಿಕ ಆಟಗಾರರು ವಿಶ್ರಾಂತಿ ಬಯಸಿದರೆ ಅಥವಾ ಕೊರೋನಾಂತಕದ ಕಾರಣದಿಂದ ಹೊರಗುಳಿಯುವ ಸಾಧ್ಯತೆ ಕೂಡ ಇದೆ. ಒಂದು ವೇಳೆ ಇಂಗ್ಲೆಂಡ್ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಕ್ಟೋಬರ್​ ಮೊದಲ ವಾರದಲ್ಲೇ ಹಿಂತಿರಬೇಕಾಗುತ್ತದೆ. ಏಕೆಂದರೆ ಅಕ್ಟೋಬರ್ 14 ರಿಂದ ಇಂಗ್ಲೆಂಡ್ ಪಾಕಿಸ್ತಾನದ ವಿರುದ್ಧ ಟಿ20 ಸರಣಿಯನ್ನು ಆಡಬೇಕಿದೆ. ಹೀಗಾಗಿ ಇಂಗ್ಲೆಂಡ್ ತಂಡದಲ್ಲಿರುವ ರಾಷ್ಟ್ರೀಯ ಆಟಗಾರರ ಪಾಲ್ಗೊಳ್ಳುವಿಕೆ ಬಹುತೇಕ ಅನುಮಾನ.

ಹೀಗಾಗಿ ಪ್ರಸ್ತುತ ಐಪಿಎಲ್​ ತಂಡದಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಟಗಾರರಾದ ಜೋಸ್​ ಬಟ್ಲರ್, ಜೋಫ್ರಾ ಆರ್ಚರ್, ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ ಐಪಿಎಲ್ ಎರಡನೇ ಹಂತದಲ್ಲಿ ಕಣಕ್ಕಿಳಿಯುವುದು ಡೌಟ್. ಇವರಲ್ಲಿ ಬಟ್ಲರ್, ಜೋಫ್ರಾ ಆರ್ಚರ್ ರಾಜಸ್ಥಾನ ರಾಯಲ್ಸ್ ( Rajasthan Royals ) ತಂಡದ ಪರ ಆಡುತ್ತಿದ್ದರೆ, ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ CSK ಪರ ಆಡುತ್ತಿದ್ದಾರೆ. ಹೀಗಾಗಿ ಈ ಎರಡು ತಂಡಗಳು ಬದಲಿ ಆಟಗಾರರನ್ನು ಖರೀದಿಸುವ ಸಾಧ್ಯತೆ ಹೆಚ್ಚಿದೆ.

ಕೊರೋನಾ ಕಾರಣದಿಂದ ಮೊಟಕುಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ 29 ಪಂದ್ಯಗಳನ್ನು ಆಡಲಾಗಿತ್ತು. ಇದೀಗ ಉಳಿದ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಅದರಂತೆ ಉಳಿದಿರುವ 31 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

(IPL 2021: New Zealand cricketers will be available for IPL in UAE)

Follow Us
TV9 Web
TV9 Web

TV9 Kannada

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?