AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟಾಸ್ ಗೆದ್ದ ಕೊಹ್ಲಿ.. ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಆಡುವ XI ಹೀಗಿದೆ

IPL 2021: ವಿರಾಟ್ ತನ್ನ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಕೊನೆಯ ಪಂದ್ಯದಲ್ಲಿ ಅವರು ಫೀಲ್ಡಿಂಗ್ ಮಾಡಿದ ಅದೇ ತಂಡದೊಂದಿಗೆ ಕಣಕ್ಕಿಳಿದಿದ್ದಾರೆ.

IPL 2021: ಟಾಸ್ ಗೆದ್ದ ಕೊಹ್ಲಿ.. ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಆಡುವ XI ಹೀಗಿದೆ
ಕೊಹ್ಲಿ, ವಿಲಿಯಮ್ಸನ್
TV9 Web
| Updated By: ಪೃಥ್ವಿಶಂಕರ|

Updated on: Oct 06, 2021 | 7:14 PM

Share

ಐಪಿಎಲ್ -2021 ರಲ್ಲಿ (ಐಪಿಎಲ್ 2021), ಇಂದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೇನ್ ವಿಲಿಯಮ್ಸನ್ ಅವರ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಸನ್ ರೈಸರ್ಸ್ ತಂಡ ಪ್ಲೇಆಫ್ ರೇಸ್ ನಿಂದ ಹೊರಗಿದೆ ಮತ್ತು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈಗ ಅವರ ಗುರಿ ಗೌರವ ಪೂರ್ವಕವಾಗಿ ಈ ಋತುವಿಗೆ ವಿದಾಯ ಹೇಳುವುದು. ಅದೇ ಸಮಯದಲ್ಲಿ ಬೆಂಗಳೂರು ತಂಡವು ಪ್ಲೇ ಆಫ್​ಗೆ ಅರ್ಹತೆ ಗಳಿಸಿದೆ. ಬೆಂಗಳೂರು ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತಿರುವುದು ಇದು ಸತತ ಎರಡನೇ ಸೀಸನ್ ಆಗಿದೆ. ಈಗ ಅವರು ಟಾಪ್ -2 ರಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಬುಧವಾರ ಅಬುಧಾಬಿಯಲ್ಲಿ ಉಭಯ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ವಿರಾಟ್ ತನ್ನ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಕೊನೆಯ ಪಂದ್ಯದಲ್ಲಿ ಅವರು ಫೀಲ್ಡಿಂಗ್ ಮಾಡಿದ ಅದೇ ತಂಡದೊಂದಿಗೆ ಕಣಕ್ಕಿಳಿದಿದ್ದಾರೆ.

ಸನ್ ರೈಸರ್ಸ್ ಕೂಡ ಬದಲಾವಣೆಗಳನ್ನು ಮಾಡಲಿಲ್ಲ ವಿರಾಟ್ ತಂಡದಂತೆ, ಸನ್ ರೈಸರ್ಸ್ ತಂಡ ಕೂಡ ತಮ್ಮ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ವಿಲಿಯಮ್ಸನ್ ಕೂಡ ಉಳಿಸಿಕೊಂಡಿದ್ದಾರೆ.

ಎರಡೂ ತಂಡಗಳು ಹೀಗಿವೆ: ಸನ್ ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ಕ್ಯಾಪ್ಟನ್), ಜೇಸನ್ ರಾಯ್, ವೃದ್ಧಿಮಾನ್ ಸಹಾ, ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್, ಉಮ್ರಾನ್ ಮಲಿಕ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ಕ್ಯಾಪ್ಟನ್), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಡೇನ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟೆನ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ