AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಈ ಸಲ ಕಪ್ ನಮ್ದೆ: RCB ಹೊಸ ಆಟಗಾರರಿಂದ ವಿಶೇಷ ಸಂದೇಶ

RCB: IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

IPL 2021: ಈ ಸಲ ಕಪ್ ನಮ್ದೆ: RCB ಹೊಸ ಆಟಗಾರರಿಂದ ವಿಶೇಷ ಸಂದೇಶ
ಇದಾಗ್ಯೂ ವನಿಂದು ಹಸರಂಗ ಹಾಗೂ ದುಷ್ಮಂತ ಚಮೀರಾಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಐಪಿಎಲ್​ನಲ್ಲಿ ಭಾಗವಹಿಸಲು ಆಕ್ಷೇಪರಹಿತ ಪ್ರಮಾಣಪತ್ರವನ್ನು (NOC) ನೀಡಿರಲಿಲ್ಲ. ಹೀಗಾಗಿ ತಂಡಕ್ಕೆ ಆಯ್ಕೆಯಾದರೂ ಲಂಕಾ ಕ್ರಿಕೆಟಿಗರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿತ್ತು.
TV9 Web
| Edited By: |

Updated on: Aug 24, 2021 | 4:45 PM

Share

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2021) ದ್ವಿತಿಯಾರ್ಧ ರಂಗೇರಲು ಇನ್ನು ಕೆಲವು ದಿನಗಳು ಮಾತ್ರ ಉಳಿದಿವೆ. ಉಳಿದ 31 ಪಂದ್ಯಗಳಿಗಾಗಿ ಈಗಾಗಲೇ ಮುಂಬೈ ಇಂಡಿಯನ್ಸ್ (Mumbai Indians), ಡೆಲ್ಲಿ ಕ್ಯಾಪಿಟಲ್ಸ್ (Delhi capitals) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಆಟಗಾರರು ಯುಎಇಗೆ ಬಂದಿಳಿದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ಕೂಡ ಶೀಘ್ರದಲ್ಲೇ ದುಬೈ ವಿಮಾನ ಹತ್ತಲಿದ್ದಾರೆ. ಈ ಬಾರಿ ಆರ್​ಸಿಬಿ ತಂಡದಲ್ಲಿ ಮೂವರು ಹೊಸ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಕಳೆದ ಬಾರಿ ತಂಡದಲ್ಲಿದ್ದ ಆ್ಯಡಂ ಝಂಪಾ ಬದಲಿಗೆ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ (Wanindu Hasaranga) ಡೇನಿಯಲ್ ಸ್ಯಾಮ್ಸ್ ಬದಲಿಗೆ ದುಷ್ಮಂತ ಚಮೀರಾ (Dushmantha Chameera) ಹಾಗೂ ಫಿನ್ ಅಲೆನ್ ಬದಲಿಗೆ ಟಿಮ್ ಡೇವಿಡ್ (Tim David) ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಇಬ್ಬರು ಶ್ರೀಲಂಕಾ ಆಟಗಾರರ ವೀಡಿಯೋವನ್ನು ಆರ್​ಸಿಬಿ ಹಂಚಿಕೊಂಡಿದ್ದು, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಡಲು ಇಬ್ಬರು ಆಟಗಾರರು ಉತ್ಸುಕರಾಗಿದ್ದೇವೆ ಎಂದು ತಿಳಿಸಿದ್ದಾರೆ. ಆರ್​ಸಿಬಿ ಬಗ್ಗೆ ಮಾತನಾಡಿರುವ ವನಿಂದು ಹಸರಂಗ, ನಾನು ಆರ್‌ಸಿಬಿ ಸೇರಲು ಉತ್ಸುಕನಾಗಿದ್ದೇನೆ. ಇದೊಂದು ಫನ್ ರೈಡ್ ಆಗಿರಲಿದೆ. ನೀವು ಕೂಡ ನಮ್ಮೊಂದಿಗೆ ಸೇರಿಕೊಳ್ಳಿ. ಹಾಗೆಯೇ ನಮ್ಮನ್ನು ಹುರಿದುಂಬಿಸಿ ಎಂದು ಶ್ರೀಲಂಕಾದ ಲೆಗ್ ಸ್ಪಿನ್ನರ್ ಹೇಳಿದ್ದಾರೆ.

ಇನ್ನು ವೀಡಿಯೋದಲ್ಲಿ ಮಾತನಾಡಿದ ದುಷ್ಮಂತ ಚಮೀರಾ, ಅಭಿಮಾನಿಗಳಿಗೆಲ್ಲರಿಗೂ ನಮಸ್ತೆ. ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬಳಗಕ್ಕೆ ಸೇರಿರುವುದರಿಂದ ನನಗೆ ತುಂಬಾ ಸಂತೋಷವಾಗಿದೆ . ವಿರಾಟ್, ಎಬಿಡಿ, ಮ್ಯಾಕ್ಸ್‌ವೆಲ್, ಚಹಲ್ ಮತ್ತು ಇತರ ಪ್ರತಿಭಾವಂತ ಆಟಗಾರರ ಜೊತೆಯಲ್ಲಿ ಆಡುವುದನ್ನು ಎದುರು ನೋಡುತ್ತಿದ್ದೇನೆ. ನಾನು ಪ್ರತಿಬಾರಿಯು ಶೇ. 100 ರಷ್ಟು ಪ್ರದರ್ಶನ ನೀಡುತ್ತೇನೆ. ಎಲ್ಲರೂ ಸುರಕ್ಷಿತರಾಗಿರಿ. ಮಾಸ್ಕ್ ಧರಿಸಿ, ಆರ್‌ಸಿಬಿಗೆ ಬೆಂಬಲ ನೀಡಿ. ಶೀಘ್ರದಲ್ಲೇ ಎಲ್ಲರನ್ನು ಭೇಟಿ ಮಾಡುತ್ತೇವೆ ಎಂದು ಚಮೀರಾ ತಿಳಿಸಿದ್ದಾರೆ.

IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ – ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಹಾಕಬೇಕಿಲ್ಲ, ಚಾರ್ಜ್​ ಕೂಡ ಮಾಡಬೇಕಿಲ್ಲ: ಇದು ಮಾರುತಿ ಸುಜುಕಿ ಹೊಸ ಕಾರು

ಇದನ್ನೂ ಓದಿ: Video: ಒಂದೇ ಒಂದು ಬೌನ್ಸರ್ ಎಸೆದು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದ!

ಇದನ್ನೂ ಓದಿ: Crime News: ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ ಅರೆಸ್ಟ್..!

(IPL 2021: RCB’s Wanindu Hasaranga and Dushmantha Chameera special message)

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ