AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಬದಲಾವಣೆ ಮಾಡಲು ಹಿಂದೇಟು ಹಾಕಿದ ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಅಯ್ಯರ್​ಗೆ ದೊಡ್ಡ ಆಘಾತ

ಐಪಿಎಲ್‌ ಮೊದಲಾರ್ಧದಲ್ಲಿ ಡೆಲ್ಲಿ ನಿರ್ವಹಣೆ ಗಮನಾರ್ಹ ಮಟ್ಟದಲ್ಲಿದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೀಗಾಗಿ ಪಂತ್‌ ಅವರನ್ನೇ ನಾಯಕನಾಗಿ ಮುಂದುವರಿಸಲು ನಿರ್ಧರಿಸಲಾಗಿದೆ.

IPL 2021: ಬದಲಾವಣೆ ಮಾಡಲು ಹಿಂದೇಟು ಹಾಕಿದ ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಅಯ್ಯರ್​ಗೆ ದೊಡ್ಡ ಆಘಾತ
Shreyas Iyer and Rishabh Pant
TV9 Web
| Edited By: |

Updated on: Sep 17, 2021 | 10:55 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ (IPL 2021) ಎರಡನೇ ಚರಣ ಆರಂಭಕ್ಕೆ ಎರಡು ದಿನಗಳಷ್ಟೆ ಬಾಕಿಯಿದೆ. ಸೆಪ್ಟೆಂಬರ್ 19 ರಂದು ಅರ್ಧತಕ್ಕೆ ನಿಂತಿದ್ದ ಐಪಿಎಲ್ 2021ಕ್ಕೆ ಯುಎಇನಲ್ಲಿ (UAE) ಮತ್ತೆ ಚಾಲನೆ ಸಿಗಲಿದೆ. ಹೀಗಿರುವಾಗ ಡೆಲ್ಲಿ ಕ್ಯಾಪಿಟಲ್ಸ್ (Delhi Capitlas) ಫ್ರಾಂಚೈಸಿ ತಂಡದ ನಾಯಕತ್ವದ ಕುರಿತು ಸ್ಪಷ್ಟನೆ ನಿಡಿದೆ. ಶ್ರೇಯಸ್‌ ಅಯ್ಯರ್‌ (Shreyas Iyer) ತಂಡಕ್ಕೆ ಮರಳಿದರೂ ರಿಷಭ್‌ ಪಂತ್‌ (Rishabh Pant) ಅವರೇ ನಾಯಕತ್ವದ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಫ್ರಾಂಚೈಸಿಯ ಸಹ ಮಾಲಕ ಪಾರ್ಥ್ ಜಿಂದಲ್‌ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಅಯ್ಯರ್​ಗೆ ದೊಡ್ಡ ಹಿನ್ನಡೆಯಾಗಿದೆ.

ಈ ಬಾರಿಯ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳ ಆರಂಭಕ್ಕೆ ಕೆಲವೇ ದಿನಗಳ ಮುನ್ನ ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದರು. ಇಂಗ್ಲೆಂಡ್‌ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿ ವೇಳೆ ಶ್ರೇಯಸ್‌ ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಭುಜದ ಮೇಲೆ ಬಲವಾಗಿ ಬಿದ್ದು ಪೆಟ್ಟು ಮಾಡಿಕೊಮಡಿದ್ದರು. ಈ ಗಾಯದ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಪಡೆದ ಕಾರಣ 3 ತಿಂಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತ್ತಾಯಿತು.

ಹೀಗಾಗಿ ಮೊದಲ ಚರಣದ ಐಪಿಎಲ್‌ ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿದರು. ಜುಲೈನಲ್ಲಿ ಭಾರತ ತಂಡದ ಶ್ರೀಲಂಕಾ ಪ್ರವಾಸಕ್ಕೂ ಶ್ರೇಯಸ್‌ ಅವರನ್ನು ಆಯ್ಕೆ ಮಾಡಲಾಗಿರಲಿಲ್ಲ. ಈಗ ಟಿ20 ವಿಶ್ವಕಪ್‌ ತಂಡದ ಕಾಯ್ದಿರಿಸಿದ ಆಟಗಾರರ ಪಟ್ಟಿಯಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ.

ಹೀಗಾಗಿ ಅಯ್ಯರ್ ಅಲಭ್ಯತೆಯಿಂದಾಗಿ ರಿಷಭ್ ಪಂತ್ ತಂಡವನ್ನು ಮುನ್ನಡೆಸಿದ್ದಾರೆ. ಸಿಕ್ಕ ಜವಾಬ್ಧಾರಿಯನ್ನು ಅದ್ಭುತವಾಗಿ ನಿರ್ವಹಿಸಿದ್ದ ಪಂತ್ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಐಪಿಎಲ್‌ ಮೊದಲಾರ್ಧದಲ್ಲಿ ಡೆಲ್ಲಿ ನಿರ್ವಹಣೆ ಗಮನಾರ್ಹ ಮಟ್ಟದಲ್ಲಿದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೀಗಾಗಿ ಪಂತ್‌ ಅವರನ್ನೇ ನಾಯಕನಾಗಿ ಮುಂದುವರಿಸಲು ನಿರ್ಧರಿಸಲಾಗಿದೆ. ಶ್ರೇಯಸ್ ಐಯ್ಯರ್ ಆಟಗಾರನಾಗಿ ತಂಡದಲ್ಲಿ ಸ್ಥಾನವನ್ನು ನಿರ್ವಹಿಸಲಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್‌ನ ಮೊದಲಾರ್ಧದ ಪಂದ್ಯಗಳಲ್ಲಿ ಕೂಡ ಡೆಲ್ಲಿ ಅಮೋಘ ಪ್ರದರ್ಶನವನ್ನು ಮುಂದುವರಿಸಿದೆ. ಗೆಲುವಿನ ಮೇಲೆ ಗೆಲುವು ಸಾಧಿಸುತ್ತಾ ಮುನ್ನುಗ್ಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲಾರ್ಧದ ಅಂತ್ಯದಲ್ಲಿ ಅಂಕಪಟ್ಟಿಯಲ್ಲಿಯೂ ಅತ್ಯುನ್ನತ ಸಾಧನೆ ಮಾಡಿದೆ. ಸದ್ಯ ಈವರೆಗಿನ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

IPL 2021: ದುಬೈ ಬೀಚ್​ನಲ್ಲಿ ಪತ್ನಿ ನತಾಶ, ಮಗ ಅಗಸ್ತ್ಯ ಜೊತೆ ಹಾರ್ದಿಕ್ ಪಾಂಡ್ಯ: ಇಲ್ಲಿವೆ ಫೋಟೋ

Virat Kohli: ಭಾರತ ಟಿ-20 ತಂಡದ ಉಪ ನಾಯಕನ ಪಟ್ಟಕ್ಕೆ ಮೂರು ಆಟಗಾರರ ಶಾರ್ಟ್​ ಲಿಸ್ಟ್ ರೆಡಿ

(IPL 2021 Rishabh Pant to lead Delhi Capitals in IPL 2021 Phase 2 delhi franchise confirmed)

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ