AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB: ರಾಯಲ್​ಗೆ ರಾಯಲ್ಸ್​ ಚಾಲೆಂಜ್​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ ಗೊತ್ತಾ?

RR vs RCB Head to Head: ಉಭಯ ತಂಡಗಳ ಕದನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆಟಗಾರ ಯಾರು ಎಂದು ನೋಡುವುದಾದರೆ, ಎಬಿ ಡಿವಿಲಿಯರ್ಸ್ ಅಗ್ರಸ್ಥಾನದಲ್ಲಿದ್ದಾರೆ.

RR vs RCB: ರಾಯಲ್​ಗೆ ರಾಯಲ್ಸ್​ ಚಾಲೆಂಜ್​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ ಗೊತ್ತಾ?
RR vs RCB
TV9 Web
| Edited By: |

Updated on:Sep 29, 2021 | 6:42 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2021) 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ರಾಜಸ್ಥಾನ್ ರಾಯಲ್ಸ್ (RCB vs RR) ಮುಖಾಮುಖಿಯಾಗಲಿದೆ. ದುಬೈ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲಲು ಉಭಯ ತಂಡಗಳು ರಣತಂತ್ರ ರೂಪಿಸಿದೆ. ದುಬೈ ಪಿಚ್​ ಬ್ಯಾಟಿಂಗ್ ಹಾಗೂ ಮೇಡಿಯಂ ಪೇಸ್​ ಬೌಲಿಂಗ್​​ ಸಹಕಾರಿಯಾಗಿದ್ದು, ಹೀಗಾಗಿ ಎರಡೂ ತಂಡಗಳು ಆಲ್​ರೌಂಡರ್​ ಬಳಗದೊಂದಿಗೆ ಕಣಕ್ಕಿಳಿಯಲಿದೆ. ಈ ಮೈದಾನದಲ್ಲಿ ಇದುವರೆಗೆ 62 ಟಿ20 ಪಂದ್ಯಗಳನ್ನಾಡಲಾಗಿದ್ದು, ಅದರಲ್ಲಿ 34 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದೆ. ಹಾಗೆಯೇ 27 ಬಾರಿ ಚೇಸಿಂಗ್ ತಂಡ ಗೆಲುವು ಸಾಧಿಸಿದೆ. ಇದರಿಂದ ದುಬೈ ಮೈದಾನವು ಮೊದಲು ಬ್ಯಾಟಿಂಗ್ ಮತ್ತು ಚೇಸಿಂಗ್​ಗೂ ಸಹಕಾರಿ ಎಂಬುದು ಸ್ಪಷ್ಟ.

ಇನ್ನು ಆರ್​ಆರ್​ ಹಾಗೂ ಆರ್​ಸಿಬಿ ಇದುವರೆಗೆ 24 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಆರ್​ಸಿಬಿ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 10 ಬಾರಿ ರಾಜಸ್ಥಾನ್ ಗೆಲುವು ದಾಖಲಿಸುವಲ್ಲಿ ಸಫಲವಾಗಿದೆ. ಇನ್ನು 3 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಮೂಡಿಬಂದಿಲ್ಲ. ಇನ್ನು ಕೊನೆಯ 5 ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್​ ಆರ್​ಸಿಬಿ ವಿರುದ್ದ 2 ಗೆಲುವು ಮಾತ್ರ ದಾಖಲಿಸಿದೆ. ಹಾಗೆಯೇ ದುಬೈನಲ್ಲಿ ನಡೆದ ಕಳೆದ ಸೀಸನ್​ ಐಪಿಎಲ್​​ನಲ್ಲೂ ರಾಜಸ್ಥಾನ್ ವಿರುದ್ದ ಆರ್​ಸಿಬಿ 2 ಪಂದ್ಯಗಳನ್ನು ಗೆದ್ದುಕೊಂಡಿತ್ತು ಎಂಬುದು ವಿಶೇಷ. ಈ ಬಾರಿಯ ಮೊದಲಾರ್ಧದ ಪಂದ್ಯದಲ್ಲೂ ಆರ್​ಸಿಬಿ ಆರ್​ಆರ್​ ತಂಡವನ್ನು 10 ವಿಕೆಟ್​ಗಳಿಂದ ಸೋಲಿಸಿತ್ತು. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಎಲ್ಲಾ ರೀತಿಯಲ್ಲೂ ರಾಜಸ್ಥಾನ್ ತಂಡಕ್ಕಿಂತ ಆರ್​ಸಿಬಿ ಮೇಲುಗೈ ಹೊಂದಿದೆ.

ಇನ್ನು ಉಭಯ ತಂಡಗಳ ಕದನದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆಟಗಾರ ಯಾರು ಎಂದು ನೋಡುವುದಾದರೆ, ಎಬಿ ಡಿವಿಲಿಯರ್ಸ್ ಅಗ್ರಸ್ಥಾನದಲ್ಲಿದ್ದಾರೆ. ಎಬಿಡಿ ಇದುವರೆಗೆ ಆರ್​ಆರ್​ ವಿರುದ್ದ 648 ರನ್ ಬಾರಿಸಿದ್ದಾರೆ. ಹಾಗೆಯೇ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಕೂಡ ರಾಜಸ್ಥಾನ್ ವಿರುದ್ದ 554 ರನ್ ಕಲೆಹಾಕಿದ್ದಾರೆ. ಬೌಲರುಗಳ ವಿಭಾಗದಲ್ಲೂ ಆರ್​ಸಿಬಿ ಸ್ಪಿನ್ನರ್ ಯುಜುವೇಂದ್ರ ಚಹಲ್ ಅಗ್ರಸ್ಥಾನದಲ್ಲಿದ್ದಾರೆ. ಚಹಲ್ ರಾಜಸ್ಥಾನ್ ವಿರುದ್ದ ಇದುವರೆಗೆ 16 ವಿಕೆಟ್ ಪಡೆದಿದ್ದಾರೆ. ಆದರೆ ಆರ್​ಸಿಬಿ ವಿರುದ್ದ ಪ್ರಸ್ತುತ ರಾಜಸ್ಥಾನ್​ ತಂಡದಲ್ಲಿರುವ ಯಾವೊಬ್ಬ ಬೌಲರ್ ಕೂಡ 9 ಕ್ಕಿಂತ ಹೆಚ್ಚಿನ ವಿಕೆಟ್ ಪಡೆದಿಲ್ಲ ಎಂಬುದು ವಿಶೇಷ. ಅಂದರೆ ಆಟಗಾರರ ವಿಷಯದಲ್ಲೂ ರಾಜಸ್ಥಾನ್​ ತಂಡಕ್ಕಿಂತ ಆರ್​ಸಿಬಿ ಸಂಪೂರ್ಣ ಬಲಿಷ್ಠವಾಗಿದೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್​ ವಿರುದ್ದ ಆರ್​ಸಿಬಿ ಎಲ್ಲಾ ರೀತಿಯಲ್ಲೂ ಬಲಿಷ್ಠವಾಗಿದ್ದು, ಅದರಂತೆ ದುಬೈ ಅಂಗಳದಲ್ಲಿ ಆರ್​ಸಿಬಿ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದೆ.

ಇದನ್ನೂ ಓದಿ: IPL 2021: ಇದು ಅಂತಿಂಥ ಗೆಲುವಲ್ಲ…ಮುಂಬೈ ದಾಖಲೆಯನ್ನು ಅಳಿಸಿ ಹಾಕಿದ RCB

ಇದನ್ನೂ ಓದಿ: IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

ಇದನ್ನೂ ಓದಿ: Crime News: ತಾಯಿಗೆ ಅನೈತಿಕ ಸಂಬಂಧ: ಅದನ್ನೇ ಬಂಡವಾಳ ಮಾಡಿಕೊಂಡ ಮಗಳು

(IPL 2021: RR vs RCB Head to Head record in IPL)

Published On - 2:59 pm, Wed, 29 September 21

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​