AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಕನ್ನಡಿಗ ವಿನಯ್ ಕುಮಾರ್ ಸೇರ್ಪಡೆ

ಟೀಮ್ ಇಂಡಿಯಾ ಪರ 31 ಏಕದಿನ ಪಂದ್ಯವನ್ನಾಡಿದ ವಿನಯ್ ಕುಮಾರ್ 38 ವಿಕೆಟ್ ಉರುಳಿಸಿದ್ದರು. ಹಾಗೆಯೇ 9 ಟಿ20 ಪಂದ್ಯಗಳಿಂದ 10 ವಿಕೆಟ್ ಪಡೆದಿದ್ದರು.

IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಕನ್ನಡಿಗ ವಿನಯ್ ಕುಮಾರ್ ಸೇರ್ಪಡೆ
Vinay Kumar
TV9 Web
| Edited By: |

Updated on: Jul 29, 2021 | 9:23 PM

Share

ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ನಾಯಕ ವಿನಯ್ ಕುಮಾರ್ ಮತ್ತೊಮ್ಮೆ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದು ವಿಶೇಷ. ಹೌದು, ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಷಣೆಯ (ಟ್ಯಾಲೆಂಟ್​ ಸ್ಕೌಟ್) ಸದಸ್ಯರಾಗಿ ವಿನಯ್ ಕುಮಾರ್ ಆಯ್ಕೆಯಾಗಿದ್ದಾರೆ.

2015 ಮತ್ತು 2017ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ವಿನಯ್ ಕುಮಾರ್ ರೋಹಿತ್ ಶರ್ಮಾ ಪಡೆ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಮತ್ತದೇ ತಂಡಕ್ಕಾಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಟ್ಯಾಲೆಂಟ್ ಸ್ಕೌಟ್ ಆಗಿ ಆಯ್ಕೆಯಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿನಯ್, ಹಳೆಯ ತಂಡವನ್ನು ಮತ್ತೆ ಸೇರಿಕೊಂಡಿರುವುದು ಖುಷಿ ನೀಡಿದೆ ಎಂದಿದ್ದಾರೆ.

17 ವರ್ಷಗಳ ಕಾಲದ ಕ್ರಿಕೆಟ್ ವೃತ್ತಿಜೀವನದಲ್ಲಿ ತಮ್ಮ ನಾಯಕತ್ವದಲ್ಲಿ ವಿನಯ್ ಕುಮಾರ್ ಕರ್ನಾಟಕಕ್ಕೆ ಎರಡು ಬಾರಿ ರಣಜಿ ಟ್ರೋಫಿ ಗೆದ್ದುಕೊಟ್ಟಿದ್ದರು. ಟೀಮ್ ಇಂಡಿಯಾ ಪರ 31 ಏಕದಿನ ಪಂದ್ಯವನ್ನಾಡಿದ ವಿನಯ್ ಕುಮಾರ್ 38 ವಿಕೆಟ್ ಉರುಳಿಸಿದ್ದರು. ಹಾಗೆಯೇ 9 ಟಿ20 ಪಂದ್ಯಗಳಿಂದ 10 ವಿಕೆಟ್ ಪಡೆದಿದ್ದರು. ಇನ್ನು 2008 ರಿಂದ 2018ರವರೆಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ವೇಗಿ 105 ಪಂದ್ಯಗಳಿಂದ 105 ವಿಕೆಟ್ ಪಡೆದು ಮಿಂಚಿದ್ದರು.

ಈ ವರ್ಷಾರಂಭದಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ವಿನಯ್ ಸದ್ಯ ಮುಂಬೈ ಇಂಡಿಯನ್ಸ್ ಟ್ಯಾಲೆಂಟ್ ಸ್ಕೌಟ್​ನ ಭಾಗವಾಗಿದ್ದು, ಈ ಮಂಡಳಿಯ ಮುಖ್ಯ ಸದಸ್ಯರಾಗಿ ಪಾರ್ಥಿವ್ ಪಟೇಲ್ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(IPL 2021: Vinay Kumar joins Mumbai Indians talent scout team)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್