AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಕನ್ನಡಿಗ ವಿನಯ್ ಕುಮಾರ್ ಸೇರ್ಪಡೆ

ಟೀಮ್ ಇಂಡಿಯಾ ಪರ 31 ಏಕದಿನ ಪಂದ್ಯವನ್ನಾಡಿದ ವಿನಯ್ ಕುಮಾರ್ 38 ವಿಕೆಟ್ ಉರುಳಿಸಿದ್ದರು. ಹಾಗೆಯೇ 9 ಟಿ20 ಪಂದ್ಯಗಳಿಂದ 10 ವಿಕೆಟ್ ಪಡೆದಿದ್ದರು.

IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಕನ್ನಡಿಗ ವಿನಯ್ ಕುಮಾರ್ ಸೇರ್ಪಡೆ
Vinay Kumar
TV9 Web
| Updated By: ಝಾಹಿರ್ ಯೂಸುಫ್|

Updated on: Jul 29, 2021 | 9:23 PM

Share

ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ನಾಯಕ ವಿನಯ್ ಕುಮಾರ್ ಮತ್ತೊಮ್ಮೆ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದು ವಿಶೇಷ. ಹೌದು, ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಷಣೆಯ (ಟ್ಯಾಲೆಂಟ್​ ಸ್ಕೌಟ್) ಸದಸ್ಯರಾಗಿ ವಿನಯ್ ಕುಮಾರ್ ಆಯ್ಕೆಯಾಗಿದ್ದಾರೆ.

2015 ಮತ್ತು 2017ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ವಿನಯ್ ಕುಮಾರ್ ರೋಹಿತ್ ಶರ್ಮಾ ಪಡೆ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಮತ್ತದೇ ತಂಡಕ್ಕಾಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಟ್ಯಾಲೆಂಟ್ ಸ್ಕೌಟ್ ಆಗಿ ಆಯ್ಕೆಯಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿನಯ್, ಹಳೆಯ ತಂಡವನ್ನು ಮತ್ತೆ ಸೇರಿಕೊಂಡಿರುವುದು ಖುಷಿ ನೀಡಿದೆ ಎಂದಿದ್ದಾರೆ.

17 ವರ್ಷಗಳ ಕಾಲದ ಕ್ರಿಕೆಟ್ ವೃತ್ತಿಜೀವನದಲ್ಲಿ ತಮ್ಮ ನಾಯಕತ್ವದಲ್ಲಿ ವಿನಯ್ ಕುಮಾರ್ ಕರ್ನಾಟಕಕ್ಕೆ ಎರಡು ಬಾರಿ ರಣಜಿ ಟ್ರೋಫಿ ಗೆದ್ದುಕೊಟ್ಟಿದ್ದರು. ಟೀಮ್ ಇಂಡಿಯಾ ಪರ 31 ಏಕದಿನ ಪಂದ್ಯವನ್ನಾಡಿದ ವಿನಯ್ ಕುಮಾರ್ 38 ವಿಕೆಟ್ ಉರುಳಿಸಿದ್ದರು. ಹಾಗೆಯೇ 9 ಟಿ20 ಪಂದ್ಯಗಳಿಂದ 10 ವಿಕೆಟ್ ಪಡೆದಿದ್ದರು. ಇನ್ನು 2008 ರಿಂದ 2018ರವರೆಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ವೇಗಿ 105 ಪಂದ್ಯಗಳಿಂದ 105 ವಿಕೆಟ್ ಪಡೆದು ಮಿಂಚಿದ್ದರು.

ಈ ವರ್ಷಾರಂಭದಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ವಿನಯ್ ಸದ್ಯ ಮುಂಬೈ ಇಂಡಿಯನ್ಸ್ ಟ್ಯಾಲೆಂಟ್ ಸ್ಕೌಟ್​ನ ಭಾಗವಾಗಿದ್ದು, ಈ ಮಂಡಳಿಯ ಮುಖ್ಯ ಸದಸ್ಯರಾಗಿ ಪಾರ್ಥಿವ್ ಪಟೇಲ್ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(IPL 2021: Vinay Kumar joins Mumbai Indians talent scout team)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ