IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಕನ್ನಡಿಗ ವಿನಯ್ ಕುಮಾರ್ ಸೇರ್ಪಡೆ

ಟೀಮ್ ಇಂಡಿಯಾ ಪರ 31 ಏಕದಿನ ಪಂದ್ಯವನ್ನಾಡಿದ ವಿನಯ್ ಕುಮಾರ್ 38 ವಿಕೆಟ್ ಉರುಳಿಸಿದ್ದರು. ಹಾಗೆಯೇ 9 ಟಿ20 ಪಂದ್ಯಗಳಿಂದ 10 ವಿಕೆಟ್ ಪಡೆದಿದ್ದರು.

IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಕನ್ನಡಿಗ ವಿನಯ್ ಕುಮಾರ್ ಸೇರ್ಪಡೆ
Vinay Kumar
Follow us
| Updated By: ಝಾಹಿರ್ ಯೂಸುಫ್

Updated on: Jul 29, 2021 | 9:23 PM

ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ನಾಯಕ ವಿನಯ್ ಕುಮಾರ್ ಮತ್ತೊಮ್ಮೆ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದು ವಿಶೇಷ. ಹೌದು, ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಷಣೆಯ (ಟ್ಯಾಲೆಂಟ್​ ಸ್ಕೌಟ್) ಸದಸ್ಯರಾಗಿ ವಿನಯ್ ಕುಮಾರ್ ಆಯ್ಕೆಯಾಗಿದ್ದಾರೆ.

2015 ಮತ್ತು 2017ರಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ವಿನಯ್ ಕುಮಾರ್ ರೋಹಿತ್ ಶರ್ಮಾ ಪಡೆ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಮತ್ತದೇ ತಂಡಕ್ಕಾಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಟ್ಯಾಲೆಂಟ್ ಸ್ಕೌಟ್ ಆಗಿ ಆಯ್ಕೆಯಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿನಯ್, ಹಳೆಯ ತಂಡವನ್ನು ಮತ್ತೆ ಸೇರಿಕೊಂಡಿರುವುದು ಖುಷಿ ನೀಡಿದೆ ಎಂದಿದ್ದಾರೆ.

17 ವರ್ಷಗಳ ಕಾಲದ ಕ್ರಿಕೆಟ್ ವೃತ್ತಿಜೀವನದಲ್ಲಿ ತಮ್ಮ ನಾಯಕತ್ವದಲ್ಲಿ ವಿನಯ್ ಕುಮಾರ್ ಕರ್ನಾಟಕಕ್ಕೆ ಎರಡು ಬಾರಿ ರಣಜಿ ಟ್ರೋಫಿ ಗೆದ್ದುಕೊಟ್ಟಿದ್ದರು. ಟೀಮ್ ಇಂಡಿಯಾ ಪರ 31 ಏಕದಿನ ಪಂದ್ಯವನ್ನಾಡಿದ ವಿನಯ್ ಕುಮಾರ್ 38 ವಿಕೆಟ್ ಉರುಳಿಸಿದ್ದರು. ಹಾಗೆಯೇ 9 ಟಿ20 ಪಂದ್ಯಗಳಿಂದ 10 ವಿಕೆಟ್ ಪಡೆದಿದ್ದರು. ಇನ್ನು 2008 ರಿಂದ 2018ರವರೆಗೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದ ಕರ್ನಾಟಕದ ವೇಗಿ 105 ಪಂದ್ಯಗಳಿಂದ 105 ವಿಕೆಟ್ ಪಡೆದು ಮಿಂಚಿದ್ದರು.

ಈ ವರ್ಷಾರಂಭದಲ್ಲಿ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ ವಿನಯ್ ಸದ್ಯ ಮುಂಬೈ ಇಂಡಿಯನ್ಸ್ ಟ್ಯಾಲೆಂಟ್ ಸ್ಕೌಟ್​ನ ಭಾಗವಾಗಿದ್ದು, ಈ ಮಂಡಳಿಯ ಮುಖ್ಯ ಸದಸ್ಯರಾಗಿ ಪಾರ್ಥಿವ್ ಪಟೇಲ್ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್​..!

ಇದನ್ನೂ ಓದಿ: ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕೈತಪ್ಪುವ ಆತಂಕ

(IPL 2021: Vinay Kumar joins Mumbai Indians talent scout team)

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು