Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!

IPL 2021 Virat Kohli: ಕಳೆದ ಸೀಸನ್​ನಲ್ಲೂ ವರುಣ್ ಚಕ್ರವರ್ತಿ ಯುಎಇ ಪಿಚ್​ನಲ್ಲಿ ಅದ್ಭುತ ಬೌಲಿಂಗ್​ ಪ್ರದರ್ಶನ ನೀಡಿದ್ದರು. ಈ ಬಾರಿ ಕೂಡ ಉತ್ತಮವಾಗಿಯೇ ಆರಂಭಿಸಿದ್ದು, ಹೀಗಾಗಿ ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಚಕ್ರವರ್ತಿ ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.

Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!
Virat Kohli
Follow us
| Updated By: ಝಾಹಿರ್ ಯೂಸುಫ್

Updated on: Sep 21, 2021 | 2:34 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2021) ದ್ವಿತಿಯಾರ್ಧದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ಸೋಲಿನೊಂದಿಗೆ ಅಭಿಯಾನ ಆರಂಭಿಸಿದೆ. ಸೋಮವಾರ ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ (KKR) ವಿರುದ್ದದ ಆರ್​ಸಿಬಿ 9 ವಿಕೆಟ್​ಗಳಿಂದ ಹೀನಾಯ ಸೋಲನುಭವಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಪರ ಬ್ಯಾಟ್ಸ್​ಮನ್​ಗಳು ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಕೇವಲ 92 ರನ್​ಗಳಿಗೆ ಆಲೌಟ್​ ಆಯಿತು. ಇತ್ತ ಸುಲಭ ಗುರಿ ಪಡೆದ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡವು 10 ಓವರ್​ನಲ್ಲಿ 1 ವಿಕೆಟ್​ ನಷ್ಟಕ್ಕೆ 94 ರನ್ ಬಾರಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸಿತು. ಈ ಪಂದ್ಯದ ಸೋಲಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ (Virat Kohli) ಎದುರಾಳಿ ತಂಡದ ಬೌಲರ್​ನ ಹೊಗಳುವ ಮೂಲಕ ಎಲ್ಲರ ಗಮನ ಸೆಳೆದರು.

ಹೌದು, ಆರ್​ಸಿಬಿ ತಂಡದ ಪ್ರಮುಖ 3 ವಿಕೆಟ್ ಪಡೆದ ವರುಣ್ ಚಕ್ರವರ್ತಿಯ ಪ್ರದರ್ಶನಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ ಸೂಚಿಸಿದರು. ಯುವ ಆಟಗಾರರಿಂದ ಇಂತಹ ಅದ್ಭುತ ಪ್ರದರ್ಶನ ನೋಡಲು ಇಚ್ಛಿಸುತ್ತೇನೆ. ಈತ ಮುಂದೆ ಟೀಮ್ ಇಂಡಿಯಾಗೆ ಪ್ರಮುಖ ಆಟಗಾರ ಆಗಲಿದ್ದಾನೆ ಎಂದು ನಾನು ಡಗೌಟ್‌ನಲ್ಲಿ ಕುಳಿತು ಹೇಳುತ್ತಿದ್ದೆ. ಇಂತಹ ಪ್ರದರ್ಶನದಿಂದ ಭಾರತ ತಂಡದ ಬೆಂಚ್ ಬಲವು ಬಲಗೊಳ್ಳುತ್ತದೆ. ವರುಣ್ ಚಕ್ರವರ್ತಿ ಶೀಘ್ರದಲ್ಲೇ ಟೀಂ ಇಂಡಿಯಾ ಪರವಾಗಿ ಆಡಲಿದ್ದಾರೆ. ಪ್ರಸ್ತುತ ಅವರ ಪ್ರದರ್ಶನ ನಮ್ಮ ತಂಡಕ್ಕೆ ಪ್ಲಸ್​ ಪಾಯಿಂಟ್ ಎಂದು ವಿರಾಟ್ ಕೊಹ್ಲಿ ಹೇಳಿದರು.

ವರುಣ್ ಚಕ್ರವರ್ತಿ ಟೀಮ್ ಇಂಡಿಯಾ ಟಿ20 ತಂಡದಲ್ಲಿ ಸ್ಥಾನದಲ್ಲಿ ಪಡೆದಿದ್ದು, ಹೀಗಾಗಿ ಕೆಕೆಆರ್ ಸ್ಪಿನ್ನರ್ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಪ್ರಮುಖ ಸ್ಪಿನ್ ಅಸ್ತ್ರವಾಗಲಿದ್ದಾರೆ ಎಂದು ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಆರ್​ಸಿಬಿ ವಿರುದ್ದದ 4 ಓವರ್‌ಗಳಲ್ಲಿ ಕೇವಲ 13 ರನ್ ನೀಡಿ 3 ವಿಕೆಟ್ ಪಡೆದ ವರುಣ್ ಚಕ್ರವರ್ತಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕಳೆದ ಸೀಸನ್​ನಲ್ಲೂ ವರುಣ್ ಚಕ್ರವರ್ತಿ ಯುಎಇ ಪಿಚ್​ನಲ್ಲಿ ಅದ್ಭುತ ಬೌಲಿಂಗ್​ ಪ್ರದರ್ಶನ ನೀಡಿದ್ದರು. ಈ ಬಾರಿ ಕೂಡ ಉತ್ತಮವಾಗಿಯೇ ಆರಂಭಿಸಿದ್ದು, ಹೀಗಾಗಿ ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಚಕ್ರವರ್ತಿ ಪ್ಲೇಯಿಂಗ್​ ಇಲೆವೆನ್​ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಇದೇ ಕಾರಣದಿಂದಲೇ ವಿರಾಟ್ ಕೊಹ್ಲಿ ಕೂಡ ವರುಣ್ ಸ್ಪಿನ್ ಮೋಡಿ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Taliban bans IPL 2021: ಐಪಿಎಲ್ ಬ್ಯಾನ್ ಮಾಡಿದ ತಾಲಿಬಾನಿಗಳು: ಕಾರಣ ಕೇಳಿದ್ರೆ ದಂಗಾಗ್ತೀರಾ..!

ಇದನ್ನೂ ಓದಿ: IPL 2021: 5 ತಂಡಗಳಲ್ಲಿ 10 ಹೊಸ ವಿದೇಶಿ ಆಟಗಾರರು

ಇದನ್ನೂ ಓದಿ: IPL 2021: RCB ತಂಡದ ಗೇಮ್ ಚೇಂಜರ್ ಆಗಲಿದ್ದಾರೆ ಟಿಮ್ ಡೇವಿಡ್

ಇದನ್ನೂ ಓದಿ: ಗೂಗಲ್ ಬಿಗ್ ಆಫರ್: ಸ್ಮಾರ್ಟ್​ಫೋನ್ ಜೊತೆ ಕೇವಲ 1 ರೂ.ಗೆ ಸ್ಮಾರ್ಟ್​ ಸ್ಪೀಕರ್

(IPL 2021: Virat Kohli Hails Varun Chakravarthy)

ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ