AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಕೊಹ್ಲಿಗಾಗಿ ಈ ಸಲ ಕಪ್ ಗೆದ್ದೇ ಗೆಲ್ತೇವೆ ಎಂದ RCB ಆಟಗಾರ

IPL 2021 RCB: ಖಂಡಿತವಾಗಿಯೂ ನಾವು ಈ ಸಲ ಕಪ್ ಗೆಲ್ಲಲಿದ್ದೇವೆ. ಏಕೆಂದರೆ ಇದು ನಾಯಕನಾಗಿ ವಿರಾಟ್ ಕೊಹ್ಲಿ ಅವರಿಗೆ ಇದು ಕೊನೆಯ ಟೂರ್ನಿ.

IPL 2021: ಕೊಹ್ಲಿಗಾಗಿ ಈ ಸಲ ಕಪ್ ಗೆದ್ದೇ ಗೆಲ್ತೇವೆ ಎಂದ RCB ಆಟಗಾರ
RCB
TV9 Web
| Edited By: |

Updated on: Oct 10, 2021 | 3:02 PM

Share

ಐಪಿಎಲ್​ನ (IPL 2021) ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC)​ ವಿರುದ್ದ ಆರ್​ಸಿಬಿ (RCB) ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿತು. ಹೀಗೆ ಆರ್​ಸಿಬಿಗೆ ಸ್ಮರಣೀಯ ಗೆಲುವು ತಂದುಕೊಟ್ಟಿದ್ದು ಯುವ ಬ್ಯಾಟರ್ ಕೆಎಸ್ ಭರತ್ (Ks Bharat). ಇದೀಗ ಆರ್​ಸಿಬಿ ಪ್ಲೇಆಫ್ ಪಂದ್ಯಕ್ಕೆ ಸಜ್ಜಾಗಿದೆ. ಅದರಂತೆ ಸೋಮವಾರ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಕ್ವಾಲಿಫೈಯರ್ ಪಂದ್ಯವಾಡಲಿದೆ ಎಂದು ಭರತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಭರತ್, ಖಂಡಿತವಾಗಿಯೂ ನಾವು ಈ ಸಲ ಕಪ್ ಗೆಲ್ಲಲಿದ್ದೇವೆ. ಏಕೆಂದರೆ ಇದು ನಾಯಕನಾಗಿ ವಿರಾಟ್ ಕೊಹ್ಲಿ ಅವರಿಗೆ ಇದು ಕೊನೆಯ ಟೂರ್ನಿ. ಹೀಗಾಗಿ ನಮ್ಮ ನಾಯಕನಿಗೆ ಕಪ್ ಗೆದ್ದು ಕೊಡುವುದು ನಮ್ಮೆಲ್ಲರ ಕನಸಾಗಿದೆ. ವಿರಾಟ್ ಭಾಯ್​ ಜೊತೆ ಆಡುವುದಾದು ಹೆಮ್ಮೆ. ಅವರು ಯುವ ಆಟಗಾರರನ್ನು ತುಂಬಾ ಪ್ರೊತ್ಸಾಹಿಸುತ್ತಾರೆ ಎಂದು ಭರತ್ ತಿಳಿಸಿದರು.

ಈ ಎಲ್ಲಾ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಅವರಿಗೆ ಕಪ್​ ಗೆದ್ದು ಕೊಡಬೇಕೆಂಬುದು ನಮ್ಮಲ್ಲೆರ ಆಸೆ. ಆರ್​ಸಿಬಿ ನಾಯಕತ್ವಕ್ಕೆ ಅವರು ರಾಜೀನಾಮೆ ನೀಡುವ ಸಂದರ್ಭದಲ್ಲಿ ಕಪ್ ಗೆದ್ದು ಕೊಟ್ಟರೆ ಅದು ಕೇಕ್ ಮೇಲಿರುವ ಚೆರಿಯಂತೆ, ಕೊಹ್ಲಿ ಪಾಲಿಗೆ ಕಿರೀಟವಾಗಿರಲಿದೆ. ಹೀಗಾಗಿ ವಿರಾಟ್ ಕೊಹ್ಲಿ ಅವರಿಗಾಗಿ ಈ ಸಲ ನಾವು ಕಪ್ ಗೆಲ್ಲಲಿದ್ದೇವೆ ಎಂದು ಭರತ್ ತಿಳಿಸಿದರು.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

(IPL 2021: Winning the cup and giving Virat Kohli, says RCB’s KS Bharat)

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು