AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

IPL 2022 RCB: ಚಹಲ್ ಆರ್​ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಐಪಿಎಲ್​ನ ಬೆಸ್ಟ್ ಸ್ಪಿನ್ನರ್​ ಎನಿಸಿಕೊಂಡಿರುವ ಚಹಲ್ ಅವರ ಖರೀದಿಗಾಗಿ ಇತರೆ ತಂಡಗಳೂ ಕೂಡ ಎದುರು ನೋಡುತ್ತಿರುತ್ತವೆ.

IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!
RCB
TV9 Web
| Updated By: ಝಾಹಿರ್ ಯೂಸುಫ್|

Updated on: Nov 01, 2021 | 9:41 PM

Share

ಇಂಡಿಯನ್ ಪ್ರೀಮಿಯರ್ ಸೀಸನ್ 15 ಗಾಗಿ (IPL 2022) ಸಿದ್ದತೆಗಳು ಶುರುವಾಗಿದೆ. ಮುಂದಿನ ಸೀಸನ್​ ಮೆಗಾ ಹರಾಜು ನಡೆಯಲಿದ್ದು, ಅದಕ್ಕೂ ಮುನ್ನ ಪ್ರತಿಯೊಂದು ತಂಡಗಳಿಗೆ ನಾಲ್ಕು ಆಟಗಾರರನ್ನು ರಿಟೈನ್ ಮಾಡಿಕೊಳ್ಳುವ ಅವಕಾಶ ನೀಡಲಾಗುತ್ತಿದೆ. ಹಾಗೆಯೇ ಹೊಸ ಎರಡು ತಂಡಗಳಿಗೆ ಮೂವರು ಆಟಗಾರರನ್ನು ನೇರವಾಗಿ ಆರಿಸಿಕೊಳ್ಳುವ ಆಯ್ಕೆ ಇರಲಿದೆ. ಅದರಂತೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮುಂದಿನ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಇದರಿಂದ ಆಟಗಾರರ ಖರೀದಿಗೆ ಹೆಚ್ಚಿನ ಪೈಪೋಟಿ ಕಂಡು ಬರಲಿದೆ. ಹೀಗಾಗಿ ಸ್ಟಾರ್ ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಆರ್​ಸಿಬಿ ತಂಡ ಸೇರಿದಂತೆ ಎಲ್ಲಾ ತಂಡಗಳು ಮುಂದಾಗಲಿದೆ.

ಇನ್ನು ಆಟಗಾರರನ್ನು ಉಳಿಸಿಕೊಳ್ಳಲು ಎರಡು ಆಯ್ಕೆಗಳನ್ನು ನೀಡಲಾಗುತ್ತಿದ್ದು, ಅದರಂತೆ ಮೂವರು ಭಾರತೀಯ ಆಟಗಾರರು+ ಒಬ್ಬ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಬಹುದು. ಅಥವಾ ಇಬ್ಬರು ಭಾರತೀಯ ಆಟಗಾರರು + ಇಬ್ಬರು ವಿದೇಶಿ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಇಲ್ಲಿ ಆರ್​ಸಿಬಿ 2+2 ಆಯ್ಕೆ ಮಾಡಬಹುದು.

ಅದರಂತೆ ಆರ್​ಸಿಬಿ ತಂಡ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ತಂಡದ ಬ್ರಾಂಡ್ ವ್ಯಾಲ್ಯೂ ಉಳಿಸಿಕೊಳ್ಳಲು ಕೊಹ್ಲಿಯನ್ನು ರಿಟೈನ್ ಮಾಡಿಕೊಳ್ಳುವುದು ಬಹುತೇಕ ಖಚಿತ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎರಡನೇ ಆಯ್ಕೆ ಗ್ಲೆನ್ ಮ್ಯಾಕ್ಸ್​ವೆಲ್. ಕಳೆದ ಸೀಸನ್​ ಐಪಿಎಲ್​ನಲ್ಲಿ ಭರ್ಜರಿ ಪರ ಭರ್ಜರಿ ಆಲ್​ರೌಂಡರ್ ಪ್ರದರ್ಶನ ನೀಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಮುಂದಿನ ಸೀಸನ್​ನಲ್ಲೂ ತಂಡದ ಭಾಗವಾಗಲಿದ್ದಾರೆ. ಏಕೆಂದರೆ ಕಳೆದ ಸೀಸನ್​ ಹರಾಜಿನ ವೇಳೆ ಮ್ಯಾಕ್ಸ್​ವೆಲ್ ಖರೀದಿಗೆ ಭರ್ಜರಿ ಪೈಪೋಟಿ ಕಂಡು ಬಂದಿತ್ತು. ಹೀಗಾಗಿ ಈ ಬಾರಿ ರಿಲೀಸ್ ಮಾಡುವ ಸಾಧ್ಯತೆ ಕಡಿಮೆ.

ಹಾಗೆಯೇ ಮೂರನೇ ಆಟಗಾರನಾಗಿ ಎಬಿ ಡಿವಿಲಿಯರ್ಸ್​ ಅವರನ್ನು ರಿಟೈನ್ ಮಾಡಿಕೊಳ್ಳಬಹುದು. ಏಕೆಂದರೆ ಆರ್​ಸಿಬಿ ಪರ ಸ್ಥಿರ ಪ್ರದರ್ಶನ ನೀಡಿದ ಆಟಗಾರರಲ್ಲಿ ಎಬಿಡಿ ಕೂಡ ಒಬ್ಬರು. ಒಂದು ವೇಳೆ ಎಬಿಡಿಯನ್ನು ಬಿಡುಗಡೆ ಮಾಡಿದರೆ ಉಳಿದ ತಂಡಗಳು ಖರೀದಿಗಾಗಿ ಪೈಪೋಟಿ ನಡೆಸಲಿದೆ. ಹೀಗಾಗಿ ಆರ್​ಸಿಬಿ ಅಂತಹ ಸಾಹಸ ಮಾಡುವುದು ಡೌಟ್ ಎಂದೇ ಹೇಳಬಹುದು.

ನಾಲ್ಕನೇ ಆಟಗಾರನಾಗಿ ಯುಜುವೇಂದ್ರ ಚಹಲ್ ಅವರನ್ನು ಉಳಿಸಿಕೊಳ್ಳಬಹುದು. ಚಹಲ್ ಆರ್​ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ. ಐಪಿಎಲ್​ನ ಬೆಸ್ಟ್ ಸ್ಪಿನ್ನರ್​ಗಳಲ್ಲಿ ಚಹಲ್ ಕೂಡ ಒಬ್ಬರು. ಹಾಗಾಗಿ ಚಹಲ್ ಅವರ ಖರೀದಿಗಾಗಿ ಇತರೆ ತಂಡಗಳೂ ಕೂಡ ಎದುರು ನೋಡುತ್ತಿರುತ್ತವೆ. ಒಂದು ವೇಳೆ ರಿಲೀಸ್ ಮಾಡಿದರೆ ಮತ್ತೆ ಖರೀದಿಸಲು ಭರ್ಜರಿ ಪೈಪೋಟಿ ಕಂಡು ಬರಲಿದೆ. ಹೀಗಾಗಿ 2ನೇ ಭಾರತೀಯ ಆಟಗಾರನಾಗಿ ಯುಜುವೇಂದ್ರ ಚಹಲ್​ಗೆ ಆರ್​ಸಿಬಿ ಮಣೆಹಾಕುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

ಇದನ್ನೂ ಓದಿ: ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

(IPL 2022: 4 Players RCB Can Retain Ahead Of The Mega Auction)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?