AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ರಾಯುಡು ನಿವೃತ್ತಿ ನೀಡಿಲ್ಲ ಎಂದ CSK CEO

Ambati Rayudu: ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಪರ ಆಡಿರುವ 36 ವರ್ಷದ ಅಂಬಾಟಿ ರಾಯುಡು 187 ಪಂದ್ಯಗಳಿಂದ ಒಟ್ಟು 4187 ರನ್ ಕಲೆಹಾಕಿದ್ದಾರೆ.

IPL 2022: ರಾಯುಡು ನಿವೃತ್ತಿ ನೀಡಿಲ್ಲ ಎಂದ CSK CEO
Ambati Rayudu
TV9 Web
| Updated By: ಝಾಹಿರ್ ಯೂಸುಫ್|

Updated on:May 14, 2022 | 5:54 PM

Share

IPL 2022: ಚೆನ್ನೈ ಸೂಪರ್ ಕಿಂಗ್ಸ್ (CSK) ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು (Ambati Rayudu) ಶನಿವಾರ ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL 2022) ನಿವೃತ್ತಿ ಘೋಷಿಸಿದ್ದರು. ಈ ದಿಢೀರ್ ನಿರ್ಧಾರದಿಂದ ಅಂಬಾಟಿ ರಾಯುಡು ಅಭಿಮಾನಿಗಳು ಕೂಡ ಅಚ್ಚರಿಗೊಂಡಿದ್ದರು. ‘ಇದು (ಐಪಿಎಲ್-2022) ನನ್ನ ಕೊನೆಯ ಐಪಿಎಲ್ ಸೀಸನ್ ಎಂದು ನಾನು ಸಂತೋಷದಿಂದ ಘೋಷಿಸುತ್ತೇನೆ. ಕಳೆದ 13 ವರ್ಷಗಳಲ್ಲಿ ನಾನು 2 ಶ್ರೇಷ್ಠ ತಂಡಗಳೊಂದಿಗೆ ಆಡಿದ್ದೇನೆ. ಈ ಅದ್ಭುತ ಪ್ರಯಾಣಕ್ಕಾಗಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗೆ ಧನ್ಯವಾದಗಳು ಎಂದು ಟ್ವಿಟರ್ ಮೂಲಕ ರಾಯುಡು ತಿಳಿಸಿದ್ದರು. ಆದರೆ ಈ ಘೋಷಣೆಯ ಬೆನ್ನಲ್ಲೇ ಸಿಎಸ್​ಕೆ ಆಟಗಾರ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದರು. ಇದೀಗ ಅಂಬಾಟಿ ರಾಯುಡು ಟ್ವೀಟ್ ಡಿಲೀಟ್ ಮಾಡಲು ಮುಖ್ಯ ಕಾರಣವೇನು ಎಂಬುದು ಬಹಿರಂಗವಾಗಿದೆ. ಕ್ರಿಕೆಟ್ ಬದುಕಿಗೆ ವಿದಾಯ ಹೇಳುತ್ತಿದ್ದಂತೆ ರಾಯುಡು ಅವರನ್ನು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಸಂಪರ್ಕಿಸಿದ್ದಾರೆ. ಅಲ್ಲದೆ ಅವರೊಂದಿಗೆ ಮಾತುಕತೆಯನ್ನೂ ಕೂಡ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್, ‘ನಾನು ಅವರೊಂದಿಗೆ (ಅಂಬಾಟಿ ರಾಯುಡು) ಮಾತನಾಡಿದ್ದೇನೆ. ಅಲ್ಲದೆ ಅವರು ನಿವೃತ್ತಿಯಾಗುತ್ತಿಲ್ಲ. ಈ ಬಾರಿ ಉತ್ತಮ ಪ್ರದರ್ಶನ ನೀಡಲಾಗದ ನಿರಾಶೆಯಿಂದ ಅವರು ಆ ಟ್ವೀಟ್ ಮಾಡಿದ್ದರು. ಇದೀಗ ಆ ಟ್ವೀಟ್ ಅನ್ನು ಅಳಿಸಿದ್ದಾರೆ. ಹೀಗಾಗಿ ಈ ಸೀಸನ್​ ನಂತರ ಅವರು ಖಂಡಿತವಾಗಿಯೂ ನಿವೃತ್ತಿಯಾಗುವುದಿಲ್ಲ. ಕಳಪೆ ಪ್ರದರ್ಶನದಿಂದಾಗಿ ಅಂಬಾಟಿ ರಾಯುಡು ನಿರಾಶೆಗೊಂಡು ನಿವೃತ್ತಿ ಮನಸ್ಸು ಮಾಡಿದ್ದರು. ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಸಿಎಸ್​ಕೆ ಸಿಇಒ ಕಾಶಿ ವಿಶ್ವನಾಥನ್ ತಿಳಿಸಿದ್ದಾರೆ.

ಅಂದಹಾಗೆ ರಾಯುಡು ದಿಢೀರ್‌ ನಿವೃತ್ತಿ ಘೋಷಿಸಿದ್ದು ಇದೇ ಮೊದಲಲ್ಲ. 2019 ರ ODI ವಿಶ್ವಕಪ್‌ಗೆ ಅವರನ್ನು ಆಯ್ಕೆ ಮಾಡದ ಕಾರಣ ಅಂತಾರಾಷ್ಟ್ರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಆ ಬಳಿಕ ನಿರ್ಧಾರ ಬದಲಿಸಿದರೂ ರಾಷ್ಟ್ರೀಯ ತಂಡದ ಪರ ಕಾಣಿಸಿಕೊಂಡಿರಲಿಲ್ಲ. ಇತ್ತ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ಪ್ರಮುಖ ಅಂಗವಾಗಿ ಗುರುತಿಸಿಕೊಂಡಿದ್ದ ರಾಯುಡು ಈ ಬಾರಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಐಪಿಎಲ್ 2022 ರಲ್ಲಿ ಅಂಬಟಿ ರಾಯುಡು ಆಡಿರುವ 12 ಪಂದ್ಯಗಳಲ್ಲಿ 27.10 ಸರಾಸರಿಯಲ್ಲಿ 271 ರನ್ ಗಳಿಸಿದ್ದಾರೆ. ಇತ್ತ ಸಿಎಸ್​ಕೆ ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದ್ದು, ಇದರ ಬೆನ್ನಲ್ಲೇ ಅಂಬಾಟಿ ರಾಯುಡು ಕೂಡ ಐಪಿಎಲ್​ಗೆ ಗುಡ್ ಬೈ ಹೇಳುವುದಾಗಿ ತಿಳಿಸಿ ಎಲ್ಲರನ್ನೂ ಗೊಂದಲಕ್ಕೀಡು ಮಾಡಿದ್ದರು. ಇದೀಗ ಸಿಎಸ್​ಕೆ ಸಿಇಒ ರಾಯುಡು ನಿವೃತ್ತಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಪರ ಆಡಿರುವ 36 ವರ್ಷದ ಅಂಬಾಟಿ ರಾಯುಡು 187 ಪಂದ್ಯಗಳಿಂದ ಒಟ್ಟು 4187 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಶತಕ ಹಾಗೂ 22 ಅರ್ಧಶತಕಗಳು ಮೂಡಿಬಂದಿವೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:53 pm, Sat, 14 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?