AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಹರಾಜಿಗೂ ಮುನ್ನ ಪಂಜಾಬ್ ತಂಡಕ್ಕೆ ಆಘಾತ; ಬ್ಯಾಟಿಂಗ್ ಕೋಚ್ ವಾಸಿಂ ಜಾಫರ್ ರಾಜೀನಾಮೆ!

IPL 2022: ಐಪಿಎಲ್ 2022 ಹರಾಜಿಗೂ ಮುನ್ನ ಪಂಜಾಬ್ ಕಿಂಗ್ಸ್ ಭಾರೀ ಹಿನ್ನಡೆ ಅನುಭವಿಸಿದೆ. ತಂಡದ ಬ್ಯಾಟಿಂಗ್ ಕೋಚ್ ವಾಸಿಂ ಜಾಫರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

IPL 2022: ಐಪಿಎಲ್ ಹರಾಜಿಗೂ ಮುನ್ನ ಪಂಜಾಬ್ ತಂಡಕ್ಕೆ ಆಘಾತ; ಬ್ಯಾಟಿಂಗ್ ಕೋಚ್ ವಾಸಿಂ ಜಾಫರ್ ರಾಜೀನಾಮೆ!
ವಾಸಿಂ ಜಾಫರ್
TV9 Web
| Edited By: |

Updated on:Feb 11, 2022 | 4:35 PM

Share

ಐಪಿಎಲ್ 2022 ಹರಾಜಿ (IPL 2022 auction)ಗೂ ಮುನ್ನ ಪಂಜಾಬ್ ಕಿಂಗ್ಸ್ (Punjab Kings ) ಭಾರೀ ಹಿನ್ನಡೆ ಅನುಭವಿಸಿದೆ. ತಂಡದ ಬ್ಯಾಟಿಂಗ್ ಕೋಚ್ ವಾಸಿಂ ಜಾಫರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಾಸಿಂ ಜಾಫರ್ ತಮ್ಮ ರಾಜೀನಾಮೆ ಕುರಿತು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ವಾಸಿಂ ಜಾಫರ್ ಅವರು 2019 ರಲ್ಲಿ ಪಂಜಾಬ್ ಕಿಂಗ್ಸ್‌ಗೆ ಬ್ಯಾಟಿಂಗ್ ಕೋಚ್ ಆಗಿದ್ದರು. ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ನೇತೃತ್ವದಲ್ಲಿ ಕೆಲಸ ಮಾಡುತ್ತಿದ್ದ ಅವರು ಪಂಜಾಬ್ ಕಿಂಗ್ಸ್ ಬ್ಯಾಟ್ಸ್‌ಮನ್‌ಗಳಿಗೆ ಸಹಾಯ ಮಾಡುತ್ತಿದ್ದರು. ಆದರೆ ಇದೀಗ ಅವರ ರಾಜೀನಾಮೆ ಸುದ್ದಿ ಸಂಚಲನ ಮೂಡಿಸಿದೆ.

ವಾಸಿಂ ಜಾಫರ್ ರಾಜೀನಾಮೆ ನಂತರ ಪಂಜಾಬ್ ಕಿಂಗ್ಸ್ ಆಟಗಾರರಷ್ಟೇ ಅಲ್ಲದೆ ಬ್ಯಾಟಿಂಗ್ ಕೋಚ್‌ಗಾಗಿಯೂ ಹುಡುಕಾಟ ನಡೆಸುತ್ತಿದೆ. ಬೌಲಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಡೇಮಿಯನ್ ರೈಟ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಜಾಂಟಿ ರೋಡ್ಸ್ ತಂಡದೊಂದಿಗೆ ಇದ್ದಾರೆ.

ರಾಜೀನಾಮೆ ಬಗ್ಗೆ ತಮಾಷೆಯ ಟ್ವೀಟ್ ಪಂಜಾಬ್ ಕಿಂಗ್ಸ್‌ನ ಬ್ಯಾಟಿಂಗ್ ಕೋಚ್‌ ಹುದ್ದೆಗೆ ರಾಜೀನಾಮೆ ನೀಡಿದ ಬಗ್ಗೆ ವಾಸಿಂ ಜಾಫರ್ ತಮಾಷೆಯ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ರಣಬೀರ್ ಕಪೂರ್ ಅಭಿನಯದ ‘ಏ ದಿಲ್ ಹೈ ಮುಷ್ಕಿಲ್’ ಚಿತ್ರದ ‘ಅಚ್ಚಾ ಚಲಾ ಹೂಂ, ದುವಾಂ ಮೇ ಯಾದ್ ರಖಾನಾ’ ಹಾಡಿನ ಚಿತ್ರವನ್ನು ಪೋಸ್ಟ್ ಮಾಡಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಐಪಿಎಲ್ 2022 ಕ್ಕೆ ಅನಿಲ್ ಕುಂಬ್ಳೆ ಮತ್ತು ಇಡೀ ತಂಡಕ್ಕೆ ಶುಭವಾಗಲಿ ಎಂದು ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್ ಪರ್ಸ್‌ನಲ್ಲಿ ರೂ 72 ಕೋಟಿ ಇದೆ

ಸ್ವತಃ ವಾಸಿಂ ಜಾಫರ್ ಕೂಡ ಐಪಿಎಲ್ ಆಡಿದ್ದಾರೆ. ಐಪಿಎಲ್‌ನ ಮೊದಲ ಸೀಸನ್‌ನಲ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದರು. ನಂತರ ಅವರು 6 ಪಂದ್ಯಗಳಲ್ಲಿ 19.16 ಸರಾಸರಿಯಲ್ಲಿ 115 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಕೇವಲ 12 ಕೋಟಿ ರೂ.ಗೆ ಮಯಾಂಕ್ ಅಗರ್ವಾಲ್ ಮತ್ತು 4 ಕೋಟಿ ರೂ.ಗೆ ಅನ್ ಕ್ಯಾಪ್ಡ್ ಬೌಲರ್ ಅರ್ಶ್ದೀಪ್ ಸಿಂಗ್ ಅವರನ್ನು ಉಳಿಸಿಕೊಂಡಿದೆ. ಫ್ರಾಂಚೈಸಿಯು ಐಪಿಎಲ್ 2022 ರ ಹರಾಜಿಗೆ ಗರಿಷ್ಠ 72 ಕೋಟಿ ರೂ. ಇಟ್ಟುಕೊಂಡಿದೆ. ಪಂಜಾಬ್ ಕಿಂಗ್ಸ್ ಐಪಿಎಲ್ 2022 ಗೆ ಕೆಎಲ್ ರಾಹುಲ್ ಅವರನ್ನು ನಾಯಕನಾಗಿ ಉಳಿಸಿಕೊಳ್ಳಲು ಬಯಸಿದೆ ಎಂದು ಹೇಳಲಾಗುತ್ತಿತ್ತು. ಆದರೆ ಬಲಗೈ ಬ್ಯಾಟ್ಸ್‌ಮನ್ ತಂಡವನ್ನು ತೊರೆಯಲು ನಿರ್ಧರಿಸಿದರು.

ಇದನ್ನೂ ಓದಿ:IPL Auction 2022: ಕಡು ಬಡತನದಿಂದ ಬಂದು ಐಪಿಎಲ್​ನಲ್ಲಿ ಕೋಟಿ ಗಳಿಸಿದ ಪ್ರತಿಭಾವಂತ ಕ್ರಿಕೆಟಿಗರಿವರು

Published On - 4:34 pm, Fri, 11 February 22

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ