AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: 9 ಕೋಟಿಯಲ್ಲಿ 7 ಆಟಗಾರರ ಟಾರ್ಗೆಟ್: RCBಗೆ ಸಂಕಷ್ಟ ಶುರು

IPL 2022 Auction: ಶಹಬಾಜ್ ಅಹಮದ್ ಅವರನ್ನು 2. 40 ಕೋಟಿ ರೂ.ಗೆ ಹಾಗೂ ಆಕಾಶ್ ದೀಪ್ ಅವರನ್ನು 20 ಲಕ್ಷ ರೂ.ಗೆ ಆರ್​ಸಿಬಿ ಖರೀದಿಸಿದೆ. ಅಲ್ಲಿಗೆ ಮೊದಲ ದಿನವೇ ಆರ್​ಸಿಬಿ ತಂಡವು ಕೇವಲ 8 ಆಟಗಾರರಿಗೆ 47 ಕೋಟಿ 75 ಲಕ್ಷ ರೂ. ಖರ್ಚು ಮಾಡಿದೆ.

IPL 2022 Auction: 9 ಕೋಟಿಯಲ್ಲಿ 7 ಆಟಗಾರರ ಟಾರ್ಗೆಟ್: RCBಗೆ ಸಂಕಷ್ಟ ಶುರು
Rcb
TV9 Web
| Edited By: |

Updated on: Feb 13, 2022 | 11:56 AM

Share

ಐಪಿಎಲ್ ಮೆಗಾ ಹರಾಜಿನ ಮೊದಲ ದಿನದಲ್ಲಿ 96 ಆಟಗಾರರು ಹರಾಜಾಗಿದ್ದಾರೆ. ಇವರಲ್ಲಿ ಕೆಲ ಆಟಗಾರರು ಹರಾಜಾಗದೇ ಉಳಿದರೇ, ಬಹುತೇಕ ಆಟಗಾರರನ್ನು ಬಿಕರಿಯಾಗಿದ್ದಾರೆ. ಹೀಗೆ ಆರ್​ಸಿಬಿ ಕೂಡ ಮೊದಲ ದಿನ 8 ಆಟಗಾರರನ್ನು ಖರೀದಿಸಿದೆ. ಅಚ್ಚರಿ ಎಂದರೆ 57 ಕೋಟಿಯೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡ ಆರ್​ಸಿಬಿ ಮೊದಲ ದಿನವೇ ಬಹುತೇಕ ಮೊತ್ತವನ್ನು ಖರ್ಚು ಮಾಡಿದೆ.

ಅಂದರೆ ಆರ್​ಸಿಬಿ ಖರೀದಿಸಿದ ಮೊದಲ ಆಟಗಾರ ಫಾಫ್​ ಡುಪ್ಲೆಸಿಸ್​ಗೆ 7 ಕೋಟಿ ನೀಡಿದರೆ, ಹರ್ಷಲ್ ಪಟೇಲ್​ಗೆ 10.75 ಕೋಟಿ ನೀಡಿದೆ. ಅಚ್ಚರಿ ಎಂದರೆ ಆರ್​ಸಿಬಿ ವನಿಂದು ಹಸರಂಗ ಅವರನ್ನು 10.75 ಕೋಟಿ ನೀಡಿ ಖರೀದಿಸಿರುವುದು. ಇನ್ನು ದಿನೇಶ್ ಕಾರ್ತಿಕ್ 5.50 ಕೋಟಿ ನೀಡಿದೆ. ಹಾಗೆಯೇ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನೂಜ್ ರಾವತ್​ ಅವರನ್ನೂ ಕೂಡ 3.40 ಕೋಟಿ ನೀಡಿ ಖರೀದಿಸಿ ಅಚ್ಚರಿ ಮೂಡಿಸಿದೆ. ಇನ್ನು ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು​ 7.75 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

ಇನ್ನು ಶಹಬಾಜ್ ಅಹಮದ್ ಅವರನ್ನು 2. 40 ಕೋಟಿ ರೂ.ಗೆ ಹಾಗೂ ಆಕಾಶ್ ದೀಪ್ ಅವರನ್ನು 20 ಲಕ್ಷ ರೂ.ಗೆ ಆರ್​ಸಿಬಿ ಖರೀದಿಸಿದೆ. ಅಲ್ಲಿಗೆ ಮೊದಲ ದಿನವೇ ಆರ್​ಸಿಬಿ ತಂಡವು ಕೇವಲ 8 ಆಟಗಾರರಿಗೆ 47 ಕೋಟಿ 75 ಲಕ್ಷ ರೂ. ಖರ್ಚು ಮಾಡಿದೆ. ಇದೀಗ ರಿಟೈನ್ ಆಟಗಾರರು ಸೇರಿದಂತೆ ಆರ್​ಸಿಬಿ ತಂಡದಲ್ಲಿ 11 ಆಟಗಾರರಿದ್ದಾರೆ. ಆದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ಕನಿಷ್ಠ 18 ಆಟಗಾರರು ಇರಲೇಬೇಕು. ಅಂದರೆ ಆರ್​ಸಿಬಿಗೆ ಇನ್ನೂ 7 ಆಟಗಾರರ ಅವಶ್ಯಕತೆಯಿದೆ.

ಇದೀಗ ಆರ್​ಸಿಬಿ ಬಳಿ ಉಳಿದಿರುವುದು 9.25 ಕೋಟಿ ಮಾತ್ರ. ಅಂದರೆ ಈ ಮೊತ್ತದಲ್ಲಿ ಒಟ್ಟು 7 ಆಟಗಾರರನ್ನು ಖರೀದಿಸಬೇಕಾಗುತ್ತದೆ. ಒಂದು ವೇಳೆ ಸ್ಟಾರ್​ ಆಟಗಾರರಿಗಾಗಿ ಆರ್​ಸಿಬಿ ಬಿಡ್ ಮಾಡಿದರೂ ಎದುರಾಳಿ ತಂಡದಿಂದ ಪೈಪೋಟಿ ಕಂಡು ಬರಲಿದೆ. ಇದರಿಂದ ಕಡಿಮೆ ಮೊತ್ತಕ್ಕೆ ಉತ್ತಮ ಆಟಗಾರರು ಕೂಡ ಸಿಗುವುದು ಡೌಟ್. ಒಂದು ವೇಳೆ ಒಂದಿಬ್ಬರು ಸ್ಟಾರ್ ಆಟಗಾರರ ಖರೀದಿಗೆ ಆರ್​ಸಿಬಿ ದೊಡ್ಡ ಮೊತ್ತ ಪಾವತಿಸಿದರೂ, ಆ ಬಳಿಕ ಕಡಿಮೆ ಮೊತ್ತ ಬೇಸ್ ಪ್ರೈಸ್ ಹೊಂದಿರುವ ಯುವ ಆಟಗಾರರ ಮೊರೆ ಹೋಗಬೇಕಾಗುತ್ತದೆ.

ಮೊದಲ ದಿನವೇ ಬಹುತೇಕ ಹಣ ಖರ್ಚು ಮಾಡಿರುವ ಆರ್​ಸಿಬಿಗೆ ಇದೀಗ 18 ಆಟಗಾರರನ್ನು ಕಂಪ್ಲೀಟ್ ಮಾಡುವುದು ದೊಡ್ಡ ಸವಾಲು. ಅದರಲ್ಲಿ ಸ್ಟಾರ್​ ಆಟಗಾರರನ್ನು ಟಾರ್ಗೆಟ್ ಮಾಡುವುದು ಅತೀ ದೊಡ್ಡ ಸವಾಲು ಎಂದೇ ಹೇಳಬಹುದು. ಒಟ್ಟಿನಲ್ಲಿ 9.25 ಕೋಟಿ ರೂ. ಹೊಂದಿರುವ ಆರ್​ಸಿಬಿ 2ನೇ ದಿನ ಹೇಗೆ ಬಿಡ್ಡಿಂಗ್ ನಡೆಸಲಿದೆ ಎಂಬುದೇ ಈಗ ಕುತೂಹಲ.

ಇದನ್ನೂ ಓದಿ: IPL 2022 RCB Players: Rcb ತಂಡಕ್ಕೆ ಎಂಟ್ರಿ ಕೊಟ್ಟ ಹೊಸ ಆಟಗಾರರು ಇವರೇ..!

ಇದನ್ನೂ ಓದಿ: IPL 2022 Auction: ಹರಾಜಾದ ಮತ್ತು ಹರಾಜಾಗದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿದೆ

(IPL 2022 Auction: Rcb Purse remaining)

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!