AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB

IPL 2022 Auction: ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ.

IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB
ಆರ್​ಸಿಬಿ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 12, 2022 | 9:00 PM

ಐಪಿಎಲ್ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಲ್​ರೌಂಡರ್ ಶಹಬಾಜ್ ಅಹಮದ್ ಅವರನ್ನು 2.4 ಕೋಟಿಗೆ ಆರ್​ಸಿಬಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹಾಗೆಯೇ ದೆಹಲಿಯ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನುಜ್ ರಾವತ್ ಅವರನ್ನು ಕೂಡ ಆರ್​ಸಿಬಿ 3.40 ಕೋಟಿ ನೀಡಿ ಖರೀದಿಸಿದೆ.

ಇದಕ್ಕೂ ಮುನ್ನ ಆರ್​ಸಿಬಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು ಖರೀದಿಸಿತ್ತು. ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಆಡಿದ್ದ ಹ್ಯಾಝಲ್​ವುಡ್​ ಅವರನ್ನು ಈ ಬಾರಿ ಆರ್​ಸಿಬಿ 7.75 ಕೋಟಿ ನೀಡಿ ಖರೀದಿಸಿದೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಅವರನ್ನು 5.50 ಕೋಟಿ ನೀಡಿ ಆರ್​ಸಿಬಿ ತನ್ನದಾಗಿಸಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡಕ್ಕೆ ವಿಕೆಟ್ ಕೀಪರ್​ ಆಯ್ಕೆಯಾಗಿದೆ. ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ಶ್ರೀಲಂಕಾ ಆಲ್​ರೌಂಡರ್ ವನಿಂದು ಹಸರಂಗ ಅವರನ್ನು ಬರೋಬ್ಬರಿ 10.75 ಕೋಟಿ ನೀಡಿ ಖರೀದಿಸಿದೆ.

ಇನ್ನು ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ 8 ಆಟಗಾರರು ಇದ್ದಾರೆ. ಈ ಹಿಂದೆ ಆರ್​ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ. ಇದೀಗ ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಶಹಬಾಜ್ ಅಹಮದ್, ಜೋಶ್ ಹ್ಯಾಝಲ್​ವುಡ್​ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ