AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB

IPL 2022 Auction: ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ.

IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB
ಆರ್​ಸಿಬಿ
TV9 Web
| Updated By: ಝಾಹಿರ್ ಯೂಸುಫ್|

Updated on: Feb 12, 2022 | 9:00 PM

Share

ಐಪಿಎಲ್ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಲ್​ರೌಂಡರ್ ಶಹಬಾಜ್ ಅಹಮದ್ ಅವರನ್ನು 2.4 ಕೋಟಿಗೆ ಆರ್​ಸಿಬಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹಾಗೆಯೇ ದೆಹಲಿಯ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನುಜ್ ರಾವತ್ ಅವರನ್ನು ಕೂಡ ಆರ್​ಸಿಬಿ 3.40 ಕೋಟಿ ನೀಡಿ ಖರೀದಿಸಿದೆ.

ಇದಕ್ಕೂ ಮುನ್ನ ಆರ್​ಸಿಬಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು ಖರೀದಿಸಿತ್ತು. ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಆಡಿದ್ದ ಹ್ಯಾಝಲ್​ವುಡ್​ ಅವರನ್ನು ಈ ಬಾರಿ ಆರ್​ಸಿಬಿ 7.75 ಕೋಟಿ ನೀಡಿ ಖರೀದಿಸಿದೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಅವರನ್ನು 5.50 ಕೋಟಿ ನೀಡಿ ಆರ್​ಸಿಬಿ ತನ್ನದಾಗಿಸಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡಕ್ಕೆ ವಿಕೆಟ್ ಕೀಪರ್​ ಆಯ್ಕೆಯಾಗಿದೆ. ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ಶ್ರೀಲಂಕಾ ಆಲ್​ರೌಂಡರ್ ವನಿಂದು ಹಸರಂಗ ಅವರನ್ನು ಬರೋಬ್ಬರಿ 10.75 ಕೋಟಿ ನೀಡಿ ಖರೀದಿಸಿದೆ.

ಇನ್ನು ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ 8 ಆಟಗಾರರು ಇದ್ದಾರೆ. ಈ ಹಿಂದೆ ಆರ್​ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ. ಇದೀಗ ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಶಹಬಾಜ್ ಅಹಮದ್, ಜೋಶ್ ಹ್ಯಾಝಲ್​ವುಡ್​ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ