AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB

IPL 2022 Auction: ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ.

IPL 2022 Auction: ಹಳೆಯ ಆಲ್​ರೌಂಡರ್​ ಅನ್ನು ಮತ್ತೆ ಖರೀದಿಸಿದ RCB
ಆರ್​ಸಿಬಿ
TV9 Web
| Edited By: |

Updated on: Feb 12, 2022 | 9:00 PM

Share

ಐಪಿಎಲ್ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಒಟ್ಟು 6 ಆಟಗಾರರನ್ನು ಖರೀದಿಸಿದೆ. ಈ ಹಿಂದೆ ಆರ್​ಸಿಬಿ ಪರ ಆಡಿದ್ದ ಆಲ್​ರೌಂಡರ್ ಶಹಬಾಜ್ ಅಹಮದ್ ಅವರನ್ನು 2.4 ಕೋಟಿಗೆ ಆರ್​ಸಿಬಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹಾಗೆಯೇ ದೆಹಲಿಯ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನುಜ್ ರಾವತ್ ಅವರನ್ನು ಕೂಡ ಆರ್​ಸಿಬಿ 3.40 ಕೋಟಿ ನೀಡಿ ಖರೀದಿಸಿದೆ.

ಇದಕ್ಕೂ ಮುನ್ನ ಆರ್​ಸಿಬಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು ಖರೀದಿಸಿತ್ತು. ಕಳೆದ ಸೀಸನ್​ನಲ್ಲಿ ಸಿಎಸ್​ಕೆ ಪರ ಆಡಿದ್ದ ಹ್ಯಾಝಲ್​ವುಡ್​ ಅವರನ್ನು ಈ ಬಾರಿ ಆರ್​ಸಿಬಿ 7.75 ಕೋಟಿ ನೀಡಿ ಖರೀದಿಸಿದೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಅವರನ್ನು 5.50 ಕೋಟಿ ನೀಡಿ ಆರ್​ಸಿಬಿ ತನ್ನದಾಗಿಸಿಕೊಂಡಿತು. ಇದರೊಂದಿಗೆ ಆರ್​ಸಿಬಿ ತಂಡಕ್ಕೆ ವಿಕೆಟ್ ಕೀಪರ್​ ಆಯ್ಕೆಯಾಗಿದೆ. ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ಶ್ರೀಲಂಕಾ ಆಲ್​ರೌಂಡರ್ ವನಿಂದು ಹಸರಂಗ ಅವರನ್ನು ಬರೋಬ್ಬರಿ 10.75 ಕೋಟಿ ನೀಡಿ ಖರೀದಿಸಿದೆ.

ಇನ್ನು ಓಪನರ್​ಗಳ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ.ಗೆ ಆಯ್ಕೆ ಮಾಡಿಕೊಂಡಿದೆ. ಇದರ ಜೊತೆಗೆ ಹರ್ಷಲ್ ಪಟೇಲ್ ಅವರನ್ನು 10.75 ಕೋಟಿ ನೀಡಿ ಖರೀದಿಸಿದೆ. ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ 8 ಆಟಗಾರರು ಇದ್ದಾರೆ. ಈ ಹಿಂದೆ ಆರ್​ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ. ಇದೀಗ ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಶಹಬಾಜ್ ಅಹಮದ್, ಜೋಶ್ ಹ್ಯಾಝಲ್​ವುಡ್​ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್