AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: ಕಿಂಗ್ಸ್​ ನಡುವೆ ಭರ್ಜರಿ ಪೈಪೋಟಿ: 9 ಕೋಟಿ ಪಡೆದ ಶಾರೂಖ್ ಖಾನ್

IPL 2022 Auction: ಈ ಬಾರಿಯ ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶಾರೂಖ್ ಫ್ರಾಂಚೈಸಿಗಳ ಗಮನ ಸೆಳೆದಿದ್ದರು. ಅದರಲ್ಲೂ ಕರ್ನಾಟಕ ವಿರುದ್ದದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ರೋಚಕ ಫೈನಲ್​ನಲ್ಲಿ ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ತಮಿಳುನಾಡು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.

IPL 2022 Auction: ಕಿಂಗ್ಸ್​ ನಡುವೆ ಭರ್ಜರಿ ಪೈಪೋಟಿ: 9 ಕೋಟಿ ಪಡೆದ ಶಾರೂಖ್ ಖಾನ್
Shahrukh Khan
TV9 Web
| Edited By: |

Updated on: Feb 12, 2022 | 8:03 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜಿನಲ್ಲಿ ತಮಿಳುನಾಡಿನ ಸ್ಪೋಟಕ ಬ್ಯಾಟ್ಸ್​ಮನ್ ಶಾರೂಖ್ ಖಾನ್ ಭರ್ಜರಿ ಮೊತ್ತ ಪಡೆದಿದ್ದಾರೆ. 40 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಶಾರೂಖ್ ಖರೀದಿಗೆ ಹಲವು ಫ್ರಾಂಚೈಸಿಗಳು ಪೈಪೋಟಿ ನಡೆಸಿತ್ತು. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಭರ್ಜರಿ ಪೈಪೋಟಿ ಏರ್ಪಟಿತ್ತು. ಉಭಯ ಫ್ರಾಂಚೈಸಿಗಳ ಪೈಪೋಟಿಯಿಂದಾಗಿ ಶಾರೂಖ್ ಖಾನ್ ಕಳೆದ ಸೀಸನ್​ನಲ್ಲಿ ಪಡೆದ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ತಮ್ಮದಾಗಿಸಿಕೊಂಡರು. ಅದರಂತೆ ಅಂತಿಮವಾಗಿ ಪಂಜಾಬ್ ಕಿಂಗ್ಸ್​ ತಂಡವು 9 ಕೋಟಿ ರೂ. ನೀಡಿ ಶಾರುಖ್​ ಖಾನ್ ಅವರನ್ನು ಖರೀದಿಸಿತು. ಕಳೆದ ಸೀಸನ್​ನಲ್ಲಿ ಪಂಜಾಬ್ ತಂಡವು ಶಾರೂಖ್ ಅವರಿಗೆ ನೀಡಿದ ಮೊತ್ತ 5.25 ಕೋಟಿ.

ಈ ಬಾರಿಯ ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶಾರೂಖ್ ಫ್ರಾಂಚೈಸಿಗಳ ಗಮನ ಸೆಳೆದಿದ್ದರು. ಅದರಲ್ಲೂ ಕರ್ನಾಟಕ ವಿರುದ್ದದ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ರೋಚಕ ಫೈನಲ್​ನಲ್ಲಿ ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಅಷ್ಟೇ ಅಲ್ಲದೆ ವಿಜಯ್ ಹಜಾರೆ ಟೂರ್ನಿಯ ಸೆಮಿಫೈನಲ್​ನಲ್ಲೂ ಸ್ಪೋಟಕ ಇನಿಂಗ್ಸ್ ಆಡುವ ಮೂಲಕ ತಂಡವನ್ನು ಫೈನಲ್​ಗೆ ತಲುಪಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಶಾರೂಖ್ ಖಾನ್ 9 ಕೋಟಿ ರೂ. ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡವು ಕಗಿಸೊ ರಬಾಡ (9.25 ಕೋಟಿ), ಜಾನಿ ಬೈರ್​ಸ್ಟೋವ್ (6.75 ಕೋಟಿ), ರಾಹುಲ್ ಚಹರ್ (5.25 ಕೋಟಿ) ಅವರನ್ನು ಖರೀದಿಸಿದೆ. ಅಲ್ಲದೆ ತಂಡದಲ್ಲಿ ಮಯಾಂಕ್ ಅಗರ್ವಾಲ್ ಹಾಗೂ ಅರ್ಷದೀಪ್ ಸಿಂಗ್ ರಿಟೈನ್ ಆಗಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

(IPL 2022 Auction: Shahrukh is SOLD to Punjab Kings)

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!