AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Auction: RCB ತಂಡಕ್ಕೆ ವೆಸ್ಟ್ ಇಂಡೀಸ್ ಆಟಗಾರ

IPL 2022 Auction: ಇದಕ್ಕೂ ಮುನ್ನ ಆರ್​ಸಿಬಿ ಮೊದಲ ದಿನದ ಹರಾಜಿನಲ್ಲಿ ಫಾಫ್​ ಡುಪ್ಲೆಸಿಸ್​ಗೆ 7 ಕೋಟಿ ನೀಡಿದರೆ, ಹರ್ಷಲ್ ಪಟೇಲ್​ ಅವರನ್ನು 10.75 ಕೋಟಿಗೆ ಖರೀದಿಸಿದೆ.

IPL 2022 Auction: RCB ತಂಡಕ್ಕೆ ವೆಸ್ಟ್ ಇಂಡೀಸ್ ಆಟಗಾರ
sherfane rutherford
TV9 Web
| Edited By: |

Updated on: Feb 13, 2022 | 4:44 PM

Share

ಐಪಿಎಲ್ ಮೆಗಾ ಹರಾಜಿನ ಎರಡನೇ ದಿನದ ಬಿಡ್ಡಿಂಗ್​ನಲ್ಲಿ ಆರ್​ಸಿಬಿ ಮೂವರು ಆಟಗಾರರನ್ನು ಖರೀದಿಸಿದೆ. ಮೊದಲ ದಿನದಲ್ಲಿ 8 ಆಟಗಾರರನ್ನು ಖರೀದಿಸಿದ್ದ ಆರ್​ಸಿಬಿ 2ನೇ ದಿನ ಹೆಚ್ಚಿನ ಬಿಡ್ಡಿಂಗ್ ಆಸಕ್ತಿ ತೋರಲಿಲ್ಲ. ಇದಾಗ್ಯೂ 2ನೇ ಹಂತದ ಸುತ್ತಿನಲ್ಲಿ ಆರ್​ಸಿಬಿ ಮಹಿಪಾಲ್ ಲೋಮ್ರರ್, ಫಿನ್ ಅಲೆನ್ ಹಾಗೂ ಶೆರ್ಫಾನ್ ರುದರ್​​ಫೋರ್ಡ್​ ರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಮೊದಲು 22 ವರ್ಷದ ಯುವ ಆಲ್​ರೌಂಡರ್ ಮಹಿಪಾಲ್ ಲೋಮ್ರರ್​ ಅವರನ್ನು 95 ಲಕ್ಷ ರೂ. ನೀಡಿ ಖರೀದಿಸಿದರೆ, ಆ ಬಳಿಕನ್ಯೂಜಿಲೆಂಡ್​ನ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಫಿನ್ ಅಲೆನ್ ಅವರನ್ನೂ ಕೂಡ ಆರ್​ಸಿಬಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ವೆಸ್ಟ್ ಇಂಡೀಸ್​ನ ಸ್ಪೋಟಕ ಬ್ಯಾಟ್ಸ್​ಮನ್ ಶೆರ್ಫಾನ್ ರುದರ್​ಫೋರ್ಡ್​ ಅವರನ್ನು 1 ಕೋಟಿ ನೀಡಿ ಖರೀದಿಸಿತು.

ಇದಕ್ಕೂ ಮುನ್ನ ಆರ್​ಸಿಬಿ ಮೊದಲ ದಿನದ ಹರಾಜಿನಲ್ಲಿ ಫಾಫ್​ ಡುಪ್ಲೆಸಿಸ್​ಗೆ 7 ಕೋಟಿ ನೀಡಿದರೆ, ಹರ್ಷಲ್ ಪಟೇಲ್​ ಅವರನ್ನು 10.75 ಕೋಟಿಗೆ ಖರೀದಿಸಿದೆ. ಅಲ್ಲದೆ ವನಿಂದು ಹಸರಂಗ ಅವರಿಗೆ 10.75 ಕೋಟಿ ನೀಡಿ ಅಚ್ಚರಿ ಮೂಡಿಸಿತ್ತು. ಇನ್ನು ದಿನೇಶ್ ಕಾರ್ತಿಕ್ ( 5.50 ಕೋಟಿ), ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಅನೂಜ್ ರಾವತ್​ (3.40 ಕೋಟಿ) ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅವರನ್ನು​ 7.75 ಕೋಟಿ ರೂ. ನೀಡಿ ತನ್ನದಾಗಿಸಿಕೊಂಡಿದೆ.

ಇನ್ನು ಶಹಬಾಜ್ ಅಹಮದ್ ಅವರನ್ನು 2. 40 ಕೋಟಿ ರೂ.ಗೆ ಹಾಗೂ ಆಕಾಶ್ ದೀಪ್ ಅವರನ್ನು 20 ಲಕ್ಷ ರೂ.ಗೆ ಆರ್​ಸಿಬಿ ಖರೀದಿಸಿದೆ. ಅದರಂತೆ ಮೊದಲ ದಿನವೇ ಆರ್​ಸಿಬಿ ತಂಡವು ಕೇವಲ 8 ಆಟಗಾರರಿಗೆ 47 ಕೋಟಿ 75 ಲಕ್ಷ ರೂ. ಖರ್ಚು ಮಾಡಿತ್ತು. ಇದೀಗ 2ನೇ ದಿನ 95 ಲಕ್ಷ ರೂ. ನೀಡಿ ಮಹಿಪಾಲ್ ಲೋಮ್ರರರ್​ ಹಾಗೂ 80 ಲಕ್ಷ ರೂ. ನೀಡಿ ಫಿನ್ ಅಲೆನ್ ಅವರನ್ನು ಖರೀದಿಸಿದೆ. ಹಾಗೆಯೇ ರುದರ್​ಫೋರ್ಡ್​ ಎಂಟ್ರಿಯೊಂದಿಗೆ ಇದೀಗ ರಿಟೈನ್ ಆಟಗಾರರು ಸೇರಿದಂತೆ ಆರ್​ಸಿಬಿ ತಂಡದಲ್ಲಿ 14 ಆಟಗಾರರಿದ್ದಾರೆ.

ಇದನ್ನೂ ಓದಿ: IPL 2022 RCB Players: Rcb ತಂಡಕ್ಕೆ ಎಂಟ್ರಿ ಕೊಟ್ಟ ಹೊಸ ಆಟಗಾರರು ಇವರೇ..!

ಇದನ್ನೂ ಓದಿ: IPL 2022 Auction: ಹರಾಜಾದ ಮತ್ತು ಹರಾಜಾಗದ ಆಟಗಾರರ ಸಂಪೂರ್ಣ ಪಟ್ಟಿ ಹೀಗಿದೆ

(IPL 2022 Auction: sherfane rutherford Sold To RCB)

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು