AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ರಂಗೇರಲಿದೆ ಈ ಬಾರಿಯ ಐಪಿಎಲ್​ ಫೈನಲ್

IPL 2022: 2019 ರಲ್ಲಿ ಮೊದಲ ಬಾರಿಗೆ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿಲ್ಲ. ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಈ ಹಣವನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡಲು ಮಂಡಳಿ ನಿರ್ಧರಿಸಿತ್ತು.

IPL 2022: ರಂಗೇರಲಿದೆ ಈ ಬಾರಿಯ ಐಪಿಎಲ್​ ಫೈನಲ್
IPL 2022
TV9 Web
| Edited By: |

Updated on: Apr 16, 2022 | 5:00 PM

Share

IPL 2022: ಐಪಿಎಲ್ ಸೀಸನ್ 15 ಇಲ್ಲಿಯವರೆಗೆ ಯಾವುದೇ ಆತಂಕವಿಲ್ಲದೆ ಜರುಗಿದೆ. ಕೊರೋನಾ ಕಾರಣದಿಂದ ಈ ಬಾರಿ ನಾಲ್ಕು ಸ್ಟೇಡಿಯಂಗಳಲ್ಲಿ ಮಾತ್ರ ಟೂರ್ನಿ ನಡೆಯುತ್ತಿದೆ. ಮತ್ತೊಂದೆಡೆ ಶೇ.50 ರಷ್ಟು ಪ್ರೇಕ್ಷಕರಿಗೂ ಅವಕಾಶ ನೀಡಲಾಗಿದೆ. ಈ ಬಾರಿ ಒಟ್ಟು 10 ತಂಡಗಳಿರುವ ಕಾರಣ ಪಂದ್ಯಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಅದರಂತೆ ಟೂರ್ನಿಯಲ್ಲಿ ಭರ್ಜರಿ ಪೈಪೋಟಿ ಕಂಡು ಬರುತ್ತಿದೆ. ಇನ್ನು ಫೈನಲ್​ ಪಂದ್ಯವು ಮೇ 29 ರಂದು ನಡೆಯಲಿದ್ದು, ಈ ವೇಳೆ ವಿಶೇಷ ಕಾರ್ಯಕ್ರಮ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅದರಂತೆ ಈ ಬಾರಿಯ ಐಪಿಎಲ್​ನ ಫೈನಲ್ ಡೇ ಸಮಾರೋಪ ಸಮಾರಂಭಗಳು ನಡೆಯಲಿದೆ. 2018 ರಿಂದ ಐಪಿಎಲ್​ನಲ್ಲಿ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ನಡೆಯುತ್ತಿಲ್ಲ. ಆದರೆ ಈ ವರ್ಷ ಸಮಾರೋಪ ಸಮಾರಂಭವನ್ನು ಆಯೋಜಿಸಲು ಮಂಡಳಿ ನಿರ್ಧರಿಸಿದೆ. ಇದಕ್ಕಾಗಿ ಮಂಡಳಿ ಟೆಂಡರ್‌ ಕೂಡ ಆಹ್ವಾನಿಸಿದೆ.

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಪ್ರಸಕ್ತ ಸೀಸನ್​ನಲ್ಲಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿಲ್ಲ. ಇದಾಗ್ಯೂ ಅದ್ದೂರಿಯಾಗಿ ಸಮಾರೋಪ ಸಮಾರಂಭ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದರಿಂದ ಬಿಸಿಸಿಐಗೆ ಮತ್ತಷ್ಟು ಆದಾಯ ಬರಲಿದೆ. ಇದಕ್ಕಾಗಿ ಈಗಾಗಲೇ ಪ್ರಾಯೋಜಕತ್ವ ಟೆಂಡರ್ ಅನ್ನು ಕೂಡ ಆಹ್ವಾನಿಸಲಾಗಿದೆ.

ಸಮಾರೋಪ ಸಮಾರಂಭಕ್ಕೆ ಸಂಬಂಧಿಸಿದ ಟೆಂಡರ್​ಗಳನ್ನು ಏಪ್ರಿಲ್ 25 ರವರೆಗೆ ಖರೀದಿಸಬಹುದು ಎಂದು ಮಂಡಳಿಯ ಕಾರ್ಯದರ್ಶಿ ಜಯ್ ಷಾ ಬಿಡುಗಡೆ ಮಾಡಿದ್ದಾರೆ. ಟೆಂಡರ್ ಅರ್ಜಿ ಶುಲ್ಕವಾಗಿ ಒಂದು ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. ಟೆಂಡರ್‌ನಲ್ಲಿ ಭಾಗವಹಿಸುವ ಕಂಪೆನಿಗಳು ಬಿಸಿಸಿಐಗೆ ಇ-ಮೇಲ್ ಮೂಲಕ ಈ ಬಗ್ಗೆ ತಿಳಿಸಬಹುದು. ಇದಾಗ್ಯೂ ಐಪಿಎಲ್‌ನ ಫೈನಲ್​ ಪಂದ್ಯದ ಸ್ಥಳವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಆದರೆ ಈ ಬಾರಿಯ ಐಪಿಎಲ್​ನ ಕೊನೆಯ ಪಂದ್ಯವು ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಸಾಧ್ಯತೆಯಿದೆ.

ಪುಲ್ವಾಮಾ ದಾಳಿಯಿಂದಾಗಿ ಕಾರ್ಯಕ್ರಮ ರದ್ದು: 2019 ರಲ್ಲಿ ಮೊದಲ ಬಾರಿಗೆ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿಲ್ಲ. ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ಈ ಹಣವನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡಲು ಮಂಡಳಿ ನಿರ್ಧರಿಸಿತ್ತು. 2020 ಮತ್ತು 2021 ರಲ್ಲಿ ಕೊರೋನಾ ಕಾರಣ, ಪಂದ್ಯಗಳು ಅಭಿಮಾನಿಗಳಿಲ್ಲದೆ ನಡೆದವು. ಇದೀಗ ಮತ್ತೆ ಫೈನಲ್ ದಿನದಂದು ಐಪಿಎಲ್​ನಲ್ಲಿ ರಂಗು ರಂಗಿನ ಕಾರ್ಯಕ್ರಮ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್