AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂದಿನ ಪಂದ್ಯಗಳಲ್ಲಿ RCB ಗೆ ಗೆಲುವು ಸುಲಭವಲ್ಲ..!

IPL 2022: 10 ಪಾಯಿಂಟ್ಸ್​ಗಳೊಂದಿಗೆ 4 ತಂಡಗಳಿರುವ ಕಾರಣ ಈ ತಂಡಗಳ ನಡುವೆ 3ನೇ ಮತ್ತು 4ನೇ ಸ್ಥಾನಕ್ಕೆ ಪೈಪೋಟಿ ಕಂಡು ಬರಲಿದೆ. ಒಂದು ವೇಳೆ ಪಾಯಿಂಟ್ಸ್ ಟೇಬಲ್​ನಲ್ಲಿ ಈ ತಂಡಗಳು 16 ಅಂಕ ಪಡೆದರೆ ಇಲ್ಲಿ ನೆಟ್​ ರನ್​ರೇಟ್ ಮುಖ್ಯವಾಗುತ್ತದೆ.

IPL 2022: ಮುಂದಿನ ಪಂದ್ಯಗಳಲ್ಲಿ RCB ಗೆ ಗೆಲುವು ಸುಲಭವಲ್ಲ..!
RCB
TV9 Web
| Edited By: |

Updated on: Apr 28, 2022 | 5:11 PM

Share

IPL 2022: ಐಪಿಎಲ್ ಸೀಸನ್​ನಲ್ಲಿ ಭರ್ಜರಿ ಆರಂಭ ಪಡೆದಿದ್ದ ಆರ್​ಸಿಬಿ (RCB) ತಂಡವು ಇದೀಗ ಮಂಕಾಗಿದೆ. ಮೊದಲ 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದ ಫಾಫ್ ಪಡೆ, ಆ ಬಳಿಕ  ಬ್ಯಾಕ್ ಟು ಬ್ಯಾಕ್ ಸೋಲುವ ಮೂಲಕ ಸೋಲಿನ ಸಂಖ್ಯೆಯನ್ನು 4 ಕ್ಕೇರಿಸಿದೆ. ಅಂದರೆ 9 ಪಂದ್ಯಗಳಲ್ಲಿ ಕೇವಲ 5 ಗೆಲುವು ದಾಖಲಿಸಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿದೆ. ಹೀಗಾಗಿಯೇ ಪಾಯಿಂಟ್ ಟೇಬಲ್​ನ ಟಾಪ್​ 4 ನಲ್ಲಿ ಕಾಣಿಸಿಕೊಳ್ಳಲು ಆರ್​ಸಿಬಿಗೆ ಮುಂದಿನ ಪಂದ್ಯಗಳು ನಿರ್ಣಾಯಕ. ಏಕೆಂದರೆ ಆರ್​ಸಿಬಿಗೆ ಇನ್ನು 5 ಪಂದ್ಯಗಳು ಉಳಿದಿದ್ದು, ಇದರಲ್ಲಿ 4 ರಲ್ಲಿ ಜಯ ಸಾಧಿಸಿದ್ರೆ ಮಾತ್ರ ನೇರವಾಗಿ ಪ್ಲೇಆಫ್​ ಪ್ರವೇಶಿಸಬಹುದು. ಒಂದು ವೇಳೆ 3 ಗೆಲುವು ದಾಖಲಿಸಿದರೆ, ಉಳಿದ ತಂಡಗಳ ಫಲಿತಾಂಶವನ್ನು ಕೂಡ ಎದುರು ನೋಡಬೇಕಾಗುತ್ತದೆ.

ಏಕೆಂದರೆ ಈಗಾಗಲೇ 3 ತಂಡಗಳು 10 ಪಾಯಿಂಟ್ ಪಡೆದುಕೊಂಡಿದೆ. ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ 8 ಪಂದ್ಯಗಳಿಂದ 10 ಪಾಯಿಂಟ್ ಪಡೆದ 4ನೇ ತಂಡ ಎನಿಸಿಕೊಳ್ಳಲಿದೆ. ಅಂದರೆ ಸದ್ಯ ಪಾಯಿಂಟ್ ಟೇಬಲ್​ನಲ್ಲಿ 14 ಪಾಯಿಂಟ್ಸ್​ ಪಡೆದಿರುವ ಗುಜರಾತ್ ಟೈಟನ್ಸ್ ಅಗ್ರಸ್ಥಾನದಲ್ಲಿದ್ದರೆ, 12 ಪಾಯಿಂಟ್​ಗಳೊಂದಿಗೆ ರಾಜಸ್ಥಾನ್ ರಾಯಲ್ಸ್ 2ನೇ ಸ್ಥಾನದಲ್ಲಿದೆ. ಹೀಗಾಗಿ ಈ ಎರಡು ತಂಡಗಳು ಪ್ಲೇಆಫ್​ ಪ್ರವೇಶಿಸುವ ರೇಸ್​ನಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಈ ಎರಡು ತಂಡಗಳು ಮುಂದಿನ 6 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಪ್ಲೇಆಫ್ ಖಚಿತವಾಗಲಿದೆ.

ಇನ್ನೊಂದೆಡೆ 10 ಪಾಯಿಂಟ್ಸ್​ಗಳೊಂದಿಗೆ 4 ತಂಡಗಳಿರುವ ಕಾರಣ ಈ ತಂಡಗಳ ನಡುವೆ 3ನೇ ಮತ್ತು 4ನೇ ಸ್ಥಾನಕ್ಕೆ ಪೈಪೋಟಿ ಕಂಡು ಬರಲಿದೆ. ಒಂದು ವೇಳೆ ಪಾಯಿಂಟ್ಸ್ ಟೇಬಲ್​ನಲ್ಲಿ ಈ ತಂಡಗಳು 16 ಅಂಕ ಪಡೆದರೆ ಇಲ್ಲಿ ನೆಟ್​ ರನ್​ರೇಟ್ ಮುಖ್ಯವಾಗುತ್ತದೆ. ಹೀಗಾಗಿ ಆರ್​ಸಿಬಿ ಮುಂದಿನ 5 ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ನೇರವಾಗಿ ಪ್ಲೇಆಫ್ ಪ್ರವೇಸಿಸುವುದು ಉತ್ತಮ. ಆದರೆ ಆರ್​ಸಿಬಿ ಮುಂದಿರುವುದು ಸಣ್ಣ ಸವಾಲುಗಳಲ್ಲ ಎಂಬುದು ಇಲ್ಲಿ ವಿಶೇಷ.

ಏಕೆಂದರೆ ಮುಂದಿನ ಪಂದ್ಯದಲ್ಲಿ (ಏಪ್ರಿಲ್ 30) ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಬೇಕಿದೆ. ಈ ಬಾರಿಯ ಐಪಿಎಲ್​ನ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಪಡೆ ಆರ್​ಸಿಬಿಗೆ ದೊಡ್ಡ ಸವಾಲಾಗುವುದರಲ್ಲಿ ಅನುಮಾನವೇ ಇಲ್ಲ. ಇದಾದ ಬಳಿಕ ಆರ್​ಸಿಬಿ ಮೇ 4 ರಂದು ಸಿಎಸ್​ಕೆ ವಿರುದ್ದ ಆಡಬೇಕಿದೆ. ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಕಳಪೆ ಪ್ರದರ್ಶನ ನೀಡಿದರೂ ಆರ್​ಸಿಬಿ ವಿರುದ್ದ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು ಎಂಬುದು ಇಲ್ಲಿ ಗಮನಾರ್ಹ. ಹೀಗಾಗಿ ಈ ಪಂದ್ಯ ಕೂಡ ಆರ್​ಸಿಬಿಗೆ ಸವಾಲಾಗಲಿದೆ.

ಮೇ 8 ರಂದು ನಡೆಯುವ ಮತ್ತೊಂದು ಪಂದ್ಯದಲ್ಲಿ ಆರ್​ಸಿಬಿ ಎದುರಾಳಿ ಸನ್​ರೈಸರ್ಸ್​ ಹೈದರಾಬಾದ್. ಅಂದರೆ ಬಲಿಷ್ಠ ಬೌಲಿಂಗ್ ಲೈನಪ್ ಹೊಂದಿರುವ ಎಸ್​ಆರ್​ಹೆಚ್ ತಂಡವು ಆರ್​ಸಿಬಿಯನ್ನು ಮೊದಲ ಪಂದ್ಯದಲ್ಲಿ ಕೇವಲ 68 ರನ್​ಗಳಿಗೆ ಆಲೌಟ್ ಮಾಡಿತ್ತು. ಹೀಗಾಗಿ ಆರ್​ಸಿಬಿ ಈ ಪಂದ್ಯದಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದೇ ಕುತೂಹಲ. ಈ ಪಂದ್ಯದ ಬಳಿಕ ಆರ್​ಸಿಬಿ ಎದುರಾಳಿ ಪಂಜಾಬ್ ಕಿಂಗ್ಸ್​. ಮೇ 13 ರಂದು ನಡೆಯಲಿರುವ ಈ ಪಂದ್ಯವು ಕೂಡ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಆರ್​ಸಿಬಿ ಈ ಬಾರಿ ಪಂಜಾಬ್ ಕಿಂಗ್ಸ್​ ವಿರುದ್ದ ಸೋಲಿನೊಂದಿಗೆ ಅಭಿಯಾನ ಆರಂಭಿಸಿತ್ತು.

ಇನ್ನು ಮೇ 19 ರಂದು ನಡೆಯಲಿರುವ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಆಡಬೇಕಿರುವುದು ಗುಜರಾತ್ ಟೈಟನ್ಸ್ ವಿರುದ್ದ. ಅಂದರೆ ಈ ಬಾರಿಯ ಐಪಿಎಲ್​ನ ಬಲಿಷ್ಠ ತಂಡದ ವಿರುದ್ದ ಎಂಬುದು ವಿಶೇಷ. ಅಂದರೆ ಮೊದಲ ಸುತ್ತಿನಲ್ಲಿ ಸೋತಿದ್ದ 3 ತಂಡಗಳ ವಿರುದ್ದವೇ ಆರ್​ಸಿಬಿ ನಿರ್ಣಾಯಕ ಪಂದ್ಯಗಳನ್ನು ಆಡಬೇಕಿದೆ. ಇನ್ನುಳಿದ 2 ಪಂದ್ಯಗಳು ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ತಂಡವು ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಅದ್ಭುತ ಪ್ರದರ್ಶನ ನೀಡುತ್ತಿದೆ. ಇತ್ತ ಆರ್​ಸಿಬಿ ಮುಂದಿನ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿದರೆ ಮಾತ್ರ ನೇರವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಒಂದು ವೇಳೆ 3 ಜಯ ಸಾಧಿಸಿದ್ರೆ ನೆಟ್​ ರನ್​ ರೇಟ್ ಮೊರೆ ಹೋಗಬೇಕಾಗುತ್ತದೆ. ಇತ್ತ ಈಗಾಗಲೇ ಆರ್​ಸಿಬಿ ವಿರುದ್ದ ಗೆದ್ದು ಬೀಗಿರುವ ತಂಡಗಳು ಫಾಫ್ ಡುಪ್ಲೆಸಿಸ್​ ಪಡೆಗೆ ಹೊಸ ಸವಾಲಾಗುವುದರಲ್ಲಿ ಅನುಮಾನವೇ ಇಲ್ಲ.

ಇದನ್ನೂ ಓದಿ: IPL 2022 VIDEO: ಏನೋ ಮಾಡ್ತೀಯಾ..? ಮೈದಾನದಲ್ಲೇ ಜಗಳಕ್ಕಿಳಿದ ಹರ್ಷಲ್-ಪರಾಗ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?