AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಪ್ಪಿ ತಪ್ಪಿಯೂ ಈ ಬದಲಾವಣೆ ಮಾತ್ರ ಮಾಡಬಾರದು ಎಂದ ಮಾಜಿ ಕ್ರಿಕೆಟಿಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್.

IPL 2022:  RCB ಅಪ್ಪಿ ತಪ್ಪಿಯೂ ಈ ಬದಲಾವಣೆ ಮಾತ್ರ ಮಾಡಬಾರದು ಎಂದ ಮಾಜಿ ಕ್ರಿಕೆಟಿಗ
Royal Challengers Bangalore
TV9 Web
| Edited By: |

Updated on: Apr 14, 2022 | 5:50 PM

Share

IPL 2022:  ಐಪಿಎಲ್ ಸೀಸನ್​ 15 ನಲ್ಲಿ ಆರ್​ಸಿಬಿ (RCB) ತಂಡವು ಉತ್ತಮ ಆರಂಭವನ್ನೇ ಪಡೆದಿದೆ. ಮೊದಲ ಪಂದ್ಯದಲ್ಲಿ ಸೋತರೂ ಸತತ ಮೂರು ಗೆಲುವು ದಾಖಲಿಸಿದೆ. ಇದೀಗ ಆಡಿರುವ 5 ಪಂದ್ಯಗಳಲ್ಲಿ 3 ಗೆಲುವು ಹಾಗೂ 2 ಸೋಲಿನೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ (ಏಪ್ರಿಲ್ 14) 6ನೇ ಸ್ಥಾನದಲ್ಲಿದೆ. ಇತ್ತ 3 ಗೆಲುವು ದಾಖಲಿಸಿದರೂ ಆರ್​ಸಿಬಿ ತಂಡದ ಚಿಂತೆ ದೂರವಾಗಿಲ್ಲ ಎಂಬುದೇ ವಿಶೇಷ. ಏಕೆಂದರೆ ಆರ್​ಸಿಬಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗುತ್ತಿದೆ. 22ರ ಹರೆಯದ ಆರಂಭಿಕ ಅನೂಜ್ ರಾವತ್ ಐದು ಪಂದ್ಯಗಳಲ್ಲಿ ಒಟ್ಟು 125 ರನ್ ಗಳಿಸಿದ್ದಾರೆ, ಹಾಗೆಯೇ ನಾಯಕ ಡು ಪ್ಲೆಸಿಸ್ ಒಟ್ಟು 146 ರನ್ ಗಳಿಸಿದ್ದಾರೆ. ಈ ಇಬ್ಬರು ಆಟಗಾರರಿಂದ ನಿರೀಕ್ಷಿತ ಆಟ ಮೂಡಿ ಬರದಿರುವುದೇ ಈಗ ಆರ್​ಸಿಬಿ ಚಿಂತೆಗೆ ಕಾರಣವಾಗಿದೆ. ಅಲ್ಲದೆ ಆರ್​ಸಿಬಿ ತಂಡದ ಆರಂಭಿಕರ ಬದಲಾವಣೆ ಬಗ್ಗೆ ಚರ್ಚೆಗಳು ಕೂಡ ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಬ್ರಾಡ್ ಹಾಗ್, ಆರ್​ಸಿಬಿ ಟಾಪ್-3 ಬ್ಯಾಟ್ಸ್​ಮನ್​ಗಳನ್ನು ಬದಲಿಸಬಾರದೆಂದು ಸಲಹೆ ನೀಡಿದ್ದಾರೆ.

ಯುವ ಅನೂಜ್ ರಾವತ್ ಓಪನರ್​ ಆಗಿ ಮುಂದುವರೆಯಬೇಕು. ಹಾಗೆಯೇ ಮತ್ತು ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಸೂಕ್ತ. ಈಗ ದಿಢೀರಣೆ ಬ್ಯಾಟಿಂಗ್ ಲೈನಪ್​ನಲ್ಲಿ ಬದಲಾವಣೆ ತರುವುದು ಉತ್ತಮ ನಡೆಯಲ್ಲ ಎಂದು ಬ್ರಾಡ್ ಹಾಗ್ ಅಭಿಪ್ರಾಯಪಟ್ಟಿದ್ದಾರೆ. ನನ್ನ ಪ್ರಕಾರ ಫಾಫ್ ಡುಪ್ಲೆಸಿಸ್ ಹಾಗೂ ಅನೂಜ್ ರಾವತ್ ಆರಂಭಿಕರಾಗಿ ಮುಂದುವರೆಯಬೇಕು. ಅಲ್ಲದೆ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲೇ ಆಡಲಿ. 3 ಪದ್ಯಗಳನ್ನು ಗೆದ್ದಿರುವ ಆರ್​ಸಿಬಿ ಆರಂಭಿಕ ಜೋಡಿಯನ್ನು ಬದಲಾಯಿಸುವ ಅಗತ್ಯವಿಲ್ಲ. ಒಂದು ವೇಳೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಮಾಡಿದರೆ ಅದು ತಂಡದ ಮೇಲೆ ಪರಿಣಾಮ ಬೀರುತ್ತೆ ಎಂದು ಎಚ್ಚರಿಸಿದ್ದಾರೆ.

ಏಕೆಂದರೆ ಅನೂಜ್ ರಾವತ್​ಗೆ ಮೂರನೇ ಕ್ರಮಾಂಕದಲ್ಲಿ ಆಡುವುದು ಕಠಿಣವಾಗಲಿದೆ. ಒಂದು ವೇಳೆ ವಿರಾಟ್ ಕೊಹ್ಲಿ-ಡುಪ್ಲೆಸಿಸ್​ ಆರಂಭಿಕರಾಗಿ ಆಡಿ ವಿಕೆಟ್ ಹೋದರೆ, ಅನೂಜ್ ಮೂರನೇ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. ಇದರಿಂದ ಯುವ ಆಟಗಾರನ ಮೇಲೆ ಹೆಚ್ಚಿನ ಒತ್ತಡ ಇರಲಿದೆ. ಇದರಿಂದ ಆತ ಉತ್ತಮವಾಗಿ ಬ್ಯಾಟ್ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪ್ರಸ್ತುತ ಇರುವ ಬ್ಯಾಟಿಂಗ್ ಕ್ರಮಾಂಕವನ್ನು ಮುಂದುವರೆಸುವುದು ಸೂಕ್ತ ಎಂದು ಬ್ರಾಡ್ ಹಾಗ್ ಹೇಳಿದ್ದಾರೆ.

ಆರ್‌ಸಿಬಿ ಉತ್ತಮ ಸಮತೋಲಿತ ಲೈನ್-ಅಪ್ ಹೊಂದಿದೆ. ಆರ್ಡರ್‌ನ ಮೇಲ್ಭಾಗದಲ್ಲಿ ಡು ಪ್ಲೆಸಿಸ್ ಜೊತೆ ರಾವತ್ ಉತ್ತಮವಾಗಿ ಆಡಿದ್ದಾರೆ. ಡು ಪ್ಲೆಸಿಸ್ ಮತ್ತು ಕೊಹ್ಲಿಯನ್ನು ಜೊತೆ ಬ್ಯಾಟ್ ಮಾಡುವುದರಿಂದ ರಾವತ್ ಹೆಚ್ಚು ಒತ್ತಡವಿಲ್ಲದೆ ಸ್ವತಂತ್ರವಾಗಿ ಆಡಲು ಸಾಧ್ಯವಾಗುತ್ತದೆ. ಹಾಗಾಗಿ ಈಗಿರುವ ಬ್ಯಾಟಿಂಗ್ ಕ್ರಮಾಂಕ ಉತ್ತಮ. ಇನ್ನು ಮ್ಯಾಕ್ಸ್‌ವೆಲ್ 4 ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಾರೆ. ದಿನೇಶ್ ಕಾರ್ತಿಕ್ ಅನ್ನು ಫ್ಲೋಟರ್ ಆಗಿ ಬಳಸಲಾಗುತ್ತಿದೆ. ಅಲ್ಲದೆ ಆರ್​ಸಿಬಿ ಆಲ್​ರೌಂಡರ್​ಗಳನ್ನೂ ಸಹ ಹೊಂದಿದೆ. ಹೀಗಾಗಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಆರ್​ಸಿಬಿ ಬದಲಾವಣೆ ಮಾಡುವುದು ಉತ್ತಮ ನಿರ್ಧಾರವಲ್ಲ ಎಂದು ಬ್ರಾಡ್ ಹಾಗ್ ಅಭಿಪ್ರಾಯಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!