AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಹೀಗಾದ್ರೆ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು..!

Mumbai Indians: ಮುಂಬೈ ಇಂಡಿಯನ್ಸ್ (MI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ,

IPL 2022: ಹೀಗಾದ್ರೆ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು..!
Mumbai Indians
TV9 Web
| Edited By: |

Updated on: Apr 25, 2022 | 2:48 PM

Share

IPL 2022: ಐಪಿಎಲ್​ ಸೀಸನ್​ 15 ನಲ್ಲಿ ಮುಂಬೈ ಇಂಡಿಯನ್ಸ್ (Mumbai Indians) 8 ಪಂದ್ಯಗಳಲ್ಲಿ ಸೋತಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ದದ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಸತತವಾಗಿ 8 ಪಂದ್ಯ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆಯನ್ನು ಮುಂಬೈ ಇಂಡಿಯನ್ಸ್ ಬರೆದಿದೆ. ಈ ಹೀನಾಯ ದಾಖಲೆಯೊಂದಿಗೆ ಈ ಬಾರಿಯ ಪ್ಲೇ ಆಫ್ ರೇಸ್​ನಿಂದ ಮುಂಬೈ ತಂಡ ಬಹುತೇಕ ಹೊರಬಿದ್ದಂತಾಗಿದೆ. ಏಕೆಂದರೆ ಇನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಉಳಿದಿರುವುದು ಕೇವಲ 6 ಪಂದ್ಯ ಮಾತ್ರ. ಇನ್ನು 6 ಪಂದ್ಯಗಳಲ್ಲಿ ಗೆದ್ದರೂ 12 ಪಾಯಿಂಟ್ ಮಾತ್ರ ಗಳಿಸಲಿದೆ.

ಈಗಾಗಲೇ ಗುಜರಾತ್ ಟೈಟನ್ಸ್ ತಂಡ 12 ಪಾಯಿಂಟ್ ಗಳಿಸಿದೆ. ಮತ್ತೊಂದೆಡೆ ಸನ್​ರೈಸರ್ಸ್ ಹೈದರಾಬಾದ್​, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು 10 ಪಾಯಿಂಟ್ ಪಡೆದುಕೊಂಡಿದೆ. ಅಂದರೆ ಉಳಿದ ಪಂದ್ಯಗಳಲ್ಲಿ ಈ ತಂಡಗಳು 2 ಮ್ಯಾಚ್ ಗೆದ್ದರೆ ಈ ತಂಡಗಳ ಪಾಯಿಂಟ್ 14 ಆಗಲಿದೆ. ಅದರಂತೆ ಗುಜರಾತ್ ಟೈಟನ್ಸ್ ಒಂದು ಪಂದ್ಯ ಗೆದ್ದರೆ, ಲಕ್ನೋ, ಆರ್​ಸಿಬಿ, ರಾಜಸ್ಥಾನ್ ರಾಯಲ್ಸ್ ಹಾಗೂ ಎಸ್​ಆರ್​ಹೆಚ್​ 2 ಪಂದ್ಯಗಳನ್ನು ಗೆದ್ದರೆ ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ಲೇಆಫ್​ನಿಂದ ಹೊರಬೀಳಲಿದೆ.

ಮುಂಬೈಗೆ ಪ್ಲೇ ಆಫ್​ ಎಂಟ್ರಿಗೆ ಚಾನ್ಸೇ ಇಲ್ವಾ? ಇಡೀ ಟೂರ್ನಿ ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿ ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಪಡೆಯುವ ತಂಡ 12 ಪಾಯಿಂಟ್ ಪಡೆದರೆ, ಮುಂಬೈ ಇಂಡಿಯನ್ಸ್ ಉಳಿದ 6 ಪಂದ್ಯಗಳನ್ನು ಗೆದ್ದು ನೆಟ್​ ರನ್​ ರೇಟ್ ಮೂಲಕ ಪ್ಲೇಆಫ್​ಗೆ ಪ್ರವೇಶಿಸಬಹುದು. ಆದರೆ ಪ್ರಸ್ತುತ ಇತರೆ ತಂಡಗಳ ಪ್ರದರ್ಶನ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಪ್ರದರ್ಶನವನ್ನು ಗಮನಿಸಿದರೆ ಇದು ಅಸಾಧ್ಯ ಎಂದೇ ಹೇಳಬಹುದು.

ಹೀಗಾಗಿ ಪ್ಲೇಆಫ್ ಆಡುವ ಅವಕಾಶ ಮುಂಬೈಗೆ ಇರಲ್ಲ ಎಂದೇ ಹೇಳಬಹುದು. ಇದರೊಂದಿಗೆ ಈ ಬಾರಿಯ ಐಪಿಎಲ್​ನ ಪ್ಲೇಆಫ್ ರೇಸ್​ನಿಂದ ಹೊರಬಿದ್ದ ಮೊದಲ ತಂಡವಾಗಿ ಮುಂಬೈ ಹೊರಹೊಮ್ಮಿದೆ. ಒಟ್ಟಿನಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಬಾರಿ ಕೂಡ ಪ್ಲೇಆಫ್ ಆಡಲ್ಲ. ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಪಾಯಿಂಟ್ ಟೇಬಲ್​ನಲ್ಲಿ 5ನೇ ಸ್ಥಾನ ಪಡೆದಿತ್ತು. ಈ ಬಾರಿ ಯಾವ ಸ್ಥಾನ ಪಡೆಯಲಿದೆ ಕಾದು ನೊಡೇಬೇಕಿದೆ.

ಮುಂಬೈ ಇಂಡಿಯನ್ಸ್ (MI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಡೆವಾಲ್ಡ್ ಬ್ರೆವಿಸ್, ಕೀರಾನ್ ಪೊಲಾರ್ಡ್, ಜಸ್ಪ್ರೀತ್ ಬುಮ್ರಾ, ಮುರುಗನ್ ಅಶ್ವಿನ್, ಬಾಸಿಲ್ ಥಂಪಿ, ಜಯದೇವ್ ಉನದ್ಕತ್, ಮಯಾಂಕ್ ಮಾರ್ಕಂಡೆ, ಸಂಜಯ್ ಯಾದವ್, ರಮಣ್‌ದೀಪ್ ಸಿಂಗ್, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ರಾಹುಲ್ ಬುಮ್ರಾ, ಹೃತಿಕ್ ಶೋಕೀನ್ , ಅರ್ಷದ್ ಖಾನ್, ಟೈಮಲ್ ಮಿಲ್ಸ್, ಜೋಫ್ರಾ ಆರ್ಚರ್, ಫ್ಯಾಬಿಯನ್ ಅಲೆನ್, ಡೇನಿಯಲ್ ಸ್ಯಾಮ್ಸ್, ಅನ್ಮೋಲ್ಪ್ರೀತ್ ಸಿಂಗ್, ಟಿಮ್ ಡೇವಿಡ್, ರಿಲೆ ಮೆರೆಡಿತ್.

ಇದನ್ನೂ ಓದಿ: Virat Kohli: IPL ನಲ್ಲಿ ವಿರಾಟ್ ಕೊಹ್ಲಿ ಎಷ್ಟು ಬಾರಿ ಝೀರೊಗೆ ಔಟಾಗಿದ್ದಾರೆ ಗೊತ್ತಾ?

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ