AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಆಟಗಾರನಿಗೆ ಒಲಿದ ಟಾಟಾ ಪಂಚ್ ಕಾರ್..!

ipl 2022 car winner: ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 45 ಸಿಕ್ಸ್ ಬಾರಿಸಿದ ಜೋಸ್ ಬಟ್ಲರ್ ಪಡೆದಿದ್ದಾರೆ. ಇದಾಗ್ಯೂ ಐಪಿಎಲ್ ಸೀಸನ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್​ ಮಾತ್ರ RCB ಆಟಗಾರನ ಪಾಲಾಗಿರುವುದು ವಿಶೇಷ.

IPL 2022: RCB ಆಟಗಾರನಿಗೆ ಒಲಿದ ಟಾಟಾ ಪಂಚ್ ಕಾರ್..!
ipl 2022 car winner
TV9 Web
| Updated By: ಝಾಹಿರ್ ಯೂಸುಫ್|

Updated on: May 30, 2022 | 4:07 PM

Share

IPL 2022:  ಐಪಿಎಲ್ ಸೀಸನ್​ 15 ಮುಕ್ತಾಯವಾಗಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ (Gujarat Titans)​ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಬ್ಯಾಟಿಂಗ್ ಮೂಲಕ ಇಡೀ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಜೋಸ್ ಬಟ್ಲರ್ (jos Buttler) ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಬೌಲಿಂಗ್​​ನಲ್ಲಿ 27 ವಿಕೆಟ್ ಪಡೆದ ಯುಜುವೇಂದ್ರ ಚಹಲ್ ಪರ್ಪಲ್​ ಕ್ಯಾಪ್ ಪಡೆದಿದ್ದಾರೆ.

ಅದೇ ರೀತಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರನಿಗೆ ನೀಡಲಾಗುವ ಪ್ರಶಸ್ತಿಯನ್ನು 45 ಸಿಕ್ಸ್ ಬಾರಿಸಿದ ಜೋಸ್ ಬಟ್ಲರ್ ಪಡೆದಿದ್ದಾರೆ. ಇದಾಗ್ಯೂ ಐಪಿಎಲ್ ಸೀಸನ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕಾರ್​ ಮಾತ್ರ RCB ಆಟಗಾರನ ಪಾಲಾಗಿರುವುದು ವಿಶೇಷ.

ಹೌದು, ಸೂಪರ್ ಸ್ಟ್ರೈಕರ್​ಗೆ ಘೋಷಿಸಲಾಗಿದ್ದ ಟಾಟಾ ಪಂಚ್ ಕಾರ್ ಆರ್​ಸಿಬಿ​​ ತಂಡದ ದಿನೇಶ್ ಕಾರ್ತಿಕ್​ ಪಾಲಾಗಿದೆ. ಆರ್​ಸಿಬಿ​ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಡಿಕೆ​ ಈ ಬಾರಿ 16 ಪಂದ್ಯಗಳಿಂದ 330 ರನ್​ಗಳಿಸಿದ್ದರು. ಅದು ಕೂಡ 183 ರ ಸ್ಟ್ರೈಕ್ ರೇಟ್​ನಲ್ಲಿ ಎಂಬುದು ವಿಶೇಷ. ಈ ಮೂಲಕ ಈ ಸೀಸನ್​ನ ಸೂಪರ್ ಸ್ಟ್ರೈಕರ್ ಆಗಿ ಡಿಕೆ ಹೊರಹೊಮ್ಮಿದ್ದಾರೆ. ಅಲ್ಲದೆ ಈ ಬಾರಿಯ ಸೂಪರ್ ಸ್ಟ್ರೈಕರ್ ಆಫ್​ ದಿ ಸೀಸನ್​ ಅವಾರ್ಡ್​ ದಿನೇಶ್ ಕಾರ್ತಿಕ್​ ಪಡೆದಿದ್ದಾರೆ. ಅದರಂತೆ ಟಾಟಾ ಪಂಚ್ ಕಾರ್ ಕೂಡ ದಿನೇಶ್ ಕಾರ್ತಿಕ್​ ಪಾಲಾಗಿದೆ. ಫೈನಲ್ ಪಂದ್ಯದ ವೇಳೆ ದಿನೇಶ್ ಕಾರ್ತಿಕ್ ಅವರ ಅನುಪಸ್ಥಿತಿಯಲ್ಲಿ ಟಾಟಾ ಪಂಚ್ ಕಾರ್​ ಅವಾರ್ಡ್​​ನ್ನು ಹಾರ್ದಿಕ್ ಪಾಂಡ್ಯ ಪಡೆದುಕೊಂಡರು.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

GT ಚೊಚ್ಚಲ ಬಾರಿಗೆ ಚಾಂಪಿಯನ್:

ಇನ್ನು ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್​ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ 22 ರನ್ ಹಾಗೂ ಜೋಸ್‌ ಬಟ್ಲರ್‌ 39 ರನ್‌ಗಳಿಸಿ ಡಕ್ಕೆ ಆಸರೆಯಾದರು. ಆದರೆ ನಂತರ ಬಂದ ನಾಯಕ ಸಂಜು ಸ್ಯಾಮ್ಸನ್‌(14), ಪಡಿಕ್ಕಲ್‌(2), ಹೆಟ್ಮಾಯೆರ್‌(11), ಅಶ್ವಿನ್‌(6), ಪರಾಗ್‌(15), ಬೋಲ್ಟ್‌(11), ಮೆಕಾಯ್‌(8) ಜವಾಬ್ದಾರಿಯುತ ಆಟವಾಡುವಲ್ಲಿ ವಿಫಲರಾದರು. ಪರಿಣಾಮ ರಾಜಸ್ಥಾನ್‌ ರಾಯಲ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 130 ರನ್‌ಗಳಿಸಿತು. ಗುಜರಾತ್‌ ಪರ ಅದ್ಭುತ ಬೌಲಿಂಗ್‌ ದಾಳಿ ನಡೆಸಿದ ಹಾರ್ದಿಕ್‌ ಪಾಂಡ್ಯ(3/17), ಸಾಯಿ ಕಿಶೋರ್‌ (2/20) ರಾಜಸ್ಥಾನ್‌ ಬ್ಯಾಟ್ಸ್‌ಮನ್‌ಗಳಿಗೆ ಕಡಿವಾಣ ಹಾಕಿದರು. ಶಮಿ, ಯಶ್‌ ದಯಾಳ್‌ ಹಾಗೂ ರಶೀದ್‌ ತಲಾ 1 ವಿಕೆಟ್‌ ಪಡೆದರು.

131 ರನ್ ಸಾಧಾರಣ ಗೆಲುವಿನ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡ ಕೂಡ 23 ರನ್ ಗಳಿಸುವಷ್ಟರಲ್ಲಿ ವೃದ್ದಿಮಾನ್ ಸಹಾ ಹಾಗೂ ಮ್ಯಾಥ್ಯೂ ವೇಡ್ ಅವರ ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ ಆತಂಕಕ್ಕೆ ಸಿಲುಕಿತ್ತು.ಈ ಹಂತದಲ್ಲಿ ಜೊತೆಯಾದ ಶುಭ್ಮನ್ ಗಿಲ್ ಅಜೇಯ 45, ಹಾರ್ದಿಕ್ ಪಾಂಡ್ಯ 34 ಹಾಗೂ ಡೇವಿಡ್ ಮಿಲ್ಲರ್ ಅಜೇಯ 32 ರನ್ ಗಳಿಸುವುದರ ಮೂಲಕ ಗುಜರಾತ್ ಟೈಟಾನ್ಸ್ ತಂಡವು ಗೆಲುವಿನ ನಗೆಯನ್ನು ಬೀರುವಂತೆ ಮಾಡಿದರು. ಕೊನೆಗೆ ಗುಜರಾತ್ ತಂಡವು 18.1 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 133 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?