AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big news: ಐಪಿಎಲ್​ನಲ್ಲಿ ಮತ್ತೆ ಕಳ್ಳಾಟ! ಮ್ಯಾಚ್ ಫಿಕ್ಸಿಂಗ್, ಬೆಟ್ಟಿಂಗ್ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ ಸಿಬಿಐ

IPL 2022: ಐಪಿಎಲ್​ನಲ್ಲಿ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಕೇಂದ್ರ ತನಿಖಾ ಸಂಸ್ಥೆ ಸಿಬಿಐ ಈ ಪ್ರಕರಣದಲ್ಲಿ 3 ಜನರನ್ನು ಬಂಧಿಸಿದೆ.

Big news: ಐಪಿಎಲ್​ನಲ್ಲಿ ಮತ್ತೆ ಕಳ್ಳಾಟ! ಮ್ಯಾಚ್ ಫಿಕ್ಸಿಂಗ್, ಬೆಟ್ಟಿಂಗ್ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ  ಸಿಬಿಐ
IPL 2022
TV9 Web
| Edited By: |

Updated on:May 14, 2022 | 5:53 PM

Share

ಐಪಿಎಲ್​ನಲ್ಲಿ (IPL) ಮತ್ತೊಮ್ಮೆ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ (match-fixing and betting) ಪ್ರಕರಣ ಬೆಳಕಿಗೆ ಬಂದಿದ್ದು, ಕೇಂದ್ರ ತನಿಖಾ ಸಂಸ್ಥೆ ಸಿಬಿಐ (CBI) ಈ ಪ್ರಕರಣದಲ್ಲಿ 3 ಆರೋಪಿಗಳನ್ನು ಬಂಧಿಸಿದೆ. ಇಂಡಿಯನ್ ಟಿ20 ಲೀಗ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್‌ನಲ್ಲಿ ಮೂವರು ಭಾಗಿಯಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮಾಹಿತಿಯ ಪ್ರಕಾರ, ಪಾಕಿಸ್ತಾನದಿಂದ ಪಡೆದ ಮಾಹಿತಿಗಳ ಆಧಾರದ ಮೇಲೆ ಸದ್ಯ ಬಂಧಿತ ಮೂವರು ಆರೋಪಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಬಂಧಿತ ಆರೋಪಿಗಳು ದೆಹಲಿ, ಜೋಧ್‌ಪುರ, ಜೈಪುರ ಮತ್ತು ಹೈದರಾಬಾದ್‌ ಮೂಲದವರು ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಈ ಆರೋಪ 2019 ರಂದು ಅಂದರೆ 3 ವರ್ಷಗಳ ಹಿಂದೆ ನಡೆದ ಐಪಿಎಲ್​ಗೆ ಸಂಬಂಧಪಟ್ಟಿದೆ. ವರದಿಯ ಪ್ರಕಾರ, ಈ ಪ್ರಕರಣದಲ್ಲಿ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಕುರಿತು ಸಿಬಿಐ ದಾಖಲಿಸಿರುವ ಎಫ್‌ಐಆರ್ 2019 ರ ಆವೃತ್ತಿಗೆ ಸಂಬಂಧಿಸಿದೆ. ಆದರೆ, ಫಿಕ್ಸಿಂಗ್‌ನ ವ್ಯಾಪ್ತಿಯು ಎಷ್ಟು ದೊಡ್ಡದಾಗಿದೆ ಅಥವಾ ಅದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. 2019 ರ ಐಪಿಎಲ್ ಪಂದ್ಯಾವಳಿ ಭಾರತದಲ್ಲಿಯೇ ನಡೆದಿದ್ದು, ಇದರಲ್ಲಿ ಮುಂಬೈ ಇಂಡಿಯನ್ಸ್ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇದನ್ನೂ ಓದಿ
Image
PBKS vs RR Live Streaming: ಬಲಿಷ್ಠ ರಾಜಸ್ಥಾನಕ್ಕೆ ಪಂಜಾಬ್ ಸವಾಲು; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
Image
PBKS vs RR, Head to Head: ಪ್ಲೇ ಆಫ್​ಗೇರಲು ಇಬ್ಬರಿಗೂ ಗೆಲುವು ಅಗತ್ಯ; ಹಿಂದಿನ ಮುಖಾಮುಖಿ ಫಲಿತಾಂಶ ಇಲ್ಲಿದೆ
Image
IPL 2022: ನಂ.2..! ಐಪಿಎಲ್​ನಲ್ಲಿ ಇರ್ಫಾನ್ ಪಠಾಣ್ ದಾಖಲೆ ಸರಿಗಟ್ಟಿದ ಭುವನೇಶ್ವರ್ ಕುಮಾರ್

2013ರಲ್ಲಿ ಫಿಕ್ಸಿಂಗ್ ಪ್ರಕರಣ ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಪ್ರಸಿದ್ಧ ಟಿ20 ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಯಾವಾಗಲೂ ಬುಕ್ಕಿಗಳು ಮತ್ತು ಫಿಕ್ಸರ್‌ಗಳ ಕಣ್ಣಿಗೆ ಬೀಳುತ್ತದೆ. ಕೆಲ ವರ್ಷಗಳ ಹಿಂದೆಯೂ ಬೆಟ್ಟಿಂಗ್, ಫಿಕ್ಸಿಂಗ್ ಪ್ರಕರಣಗಳು ಲೀಗ್ ಹಂತದಲ್ಲಿ ಕೇಳಿ ಬಂದಿದ್ದವು. 2013 ರಲ್ಲಿ, ರಾಜಸ್ಥಾನ್ ರಾಯಲ್ಸ್‌ನ ಭಾರತೀಯ ವೇಗದ ಬೌಲರ್‌ಗಳಾದ ಎಸ್ ಶ್ರೀಶಾಂತ್, ಅಶೋಕ್ ಚಾಂಡಿಲಾ ಮತ್ತು ಅಂಕೀತ್ ಚವಾಣ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ನಂತರ ಈ ಮೂವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ನಂತರ ಮೂವರಿಗೂ ಬಿಸಿಸಿಐ ಕ್ರಿಕೆಟ್​ನಿಂದ ಜೀವಾವಧಿ ನಿಷೇಧ ಹೇರಿತ್ತು. ಆದರೆ, ಸುದೀರ್ಘ ನ್ಯಾಯಾಲಯದ ವಿಚಾರಣೆಯ ನಂತರ ಮೂವರ ಮೇಲಿನ ಆರೋಪ ಖುಲಾಸೆಯಾಗಿತ್ತು.

ಎರಡು ತಂಡಗಳು 2 ವರ್ಷ ಬ್ಯಾನ್ ಈ ಪ್ರಕರಣದೊಂದಿಗೆ, ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಮಾಲೀಕರು ಸಹ ಬೆಟ್ಟಿಂಗ್ ಪ್ರಕರಣಗಳಲ್ಲಿ ಬಾಗಿಯಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದರ ಆದಾರದ ಮೇಲೆ ರಾಜಸ್ಥಾನದ ಸಹ-ಮಾಲೀಕ ರಾಜ್ ಕುಂದ್ರಾ ಮತ್ತು ಸಿಎಸ್‌ಕೆ ಮಾಲೀಕ ಎನ್ ಶ್ರೀನಿವಾಸನ್ ಅವರ ಅಳಿಯ ಮತ್ತು ಸಿಎಸ್‌ಕೆ ತಂಡದ ಪ್ರಿನ್ಸಿಪಾಲ್ ಗುರುನಾಥ್ ಮೇಯಪ್ಪನ್ ಅವರನ್ನು ತಮ್ಮದೇ ತಂಡಗಳ ಮೇಲೆ ಬೆಟ್ಟಿಂಗ್ ಮಾಡಿದ ಆರೋಪದಲ್ಲಿ ಬಂಧಿಸಲಾಗಿತ್ತು. ಜೊತೆಗೆ ಈ ಎರಡು ತಂಡಗಳನ್ನು 2 ವರ್ಷ ಐಪಿಎಲ್​ನಿಂದ ನಿಷೇಧಿಸಲಾಗಿತ್ತು. ಈ ಪ್ರಕರಣದ ನಂತರವೇ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಆರ್‌ಎಂ ಲೋಧಾ ನೇತೃತ್ವದಲ್ಲಿ ಬಿಸಿಸಿಐ ಮೇಲೆ ನಿಯಂತ್ರಣ ತರುವ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಿತ್ತು.

Published On - 4:43 pm, Sat, 14 May 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ