AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಒಬ್ಬರು ಆಸ್ಪತ್ರೆಗೆ, ಮತ್ತೊಬ್ಬರು ಇಂಜುರಿ: ಸಂಕಷ್ಟದಲ್ಲಿ CSK ತಂಡ

IPL 2022 CSK: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ.

IPL 2022: ಒಬ್ಬರು ಆಸ್ಪತ್ರೆಗೆ, ಮತ್ತೊಬ್ಬರು ಇಂಜುರಿ: ಸಂಕಷ್ಟದಲ್ಲಿ CSK ತಂಡ
IPL 2022 CSK
TV9 Web
| Updated By: ಝಾಹಿರ್ ಯೂಸುಫ್|

Updated on: Apr 02, 2022 | 3:22 PM

Share

ಐಪಿಎಲ್​ ಸೀಸನ್ 15 (IPL 20220 ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡವು ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಈ ಬಾರಿ ಅತ್ಯಧಿಕ ಮೊತ್ತ ನೀಡಿ ಖರೀದಿಸಿದ ವೇಗಿ ದೀಪಕ್ ಚಹರ್ ಅವರು ಗಾಯದ ಕಾರಣ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಇತ್ತ ಗಾಯದಿಂದ ಚೇತರಿಸಿಕೊಂಡು ಅಂತಿಮ ಹಂತದಲ್ಲಿ ತಂಡವನ್ನು ಸೇರಿಕೊಂಡ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇನ್ನು ಆಡಿದ ಮೊದಲ ಎರಡೂ ಪಂದ್ಯಗಳಲ್ಲೂ ಸಿಎಸ್​ಕೆ ಸೋತಿದೆ. ಈ ಸತತ ಸೋಲಿನ ಚಿಂತೆ ಒಂದೆಡೆಯಾದರೆ, ಇದೀಗ ತಂಡದ ಇಬ್ಬರು ವಿದೇಶಿ ಆಟಗಾರರು ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಸಿಎಸ್​ಕೆ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಕ್ರಿಸ್ ಜೋರ್ಡಾನ್ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮತ್ತೊಂದೆಡೆ ವೇಗದ ಬೌಲರ್ ಆಡಮ್ ಮಿಲ್ನ್ ಕೂಡ ಗಾಯಗೊಂಡಿದ್ದಾರೆ. ಒಂದೆಡೆ ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಕ್ರಿಸ್ ಜೋರ್ಡಾನ್ ಅವರನ್ನು ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಇದೀಗ ಗಾಯಗೊಂಡಿರುವ ಆಡಮ್ ಮಿಲ್ನ್ ಭಾನುವಾರ ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ದ ಆಡುವುದಿಲ್ಲ ಎಂದು ತಿಳಿದು ಬಂದಿದೆ.

ಈಗಾಗಲೇ ಪ್ರಮುಖ ವೇಗಿ ದೀಪಕ್ ಚಹರ್ ಅವರ ಅನುಪಸ್ಥಿತಿಯಲ್ಲಿ ಸಿಎಸ್​ಕೆ ತಂಡದ ಬೌಲಿಂಗ್ ಲೈನಪ್ ಹಳಿ ತಪ್ಪಿದೆ. ಇದೀಗ ಪ್ರಮುಖ ಆಲ್​ರೌಂಡರ್ ಕ್ರಿಸ್ ಜೋರ್ಡಾನ್ ಹಾಗೂ ವೇಗಿ ಆಡಮ್ ಮಿಲ್ನ್ ಕೂಡ ಕೆಲ ಪಂದ್ಯಗಳಿಗೆ ಅಲಭ್ಯರಾಗುತ್ತಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಒಟ್ಟಿನಲ್ಲಿ ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್​ ಬ್ಯಾಕ್ ಟು ಬ್ಯಾಕ್ ಆಘಾತಗಳು ಎದುರಾಗುತ್ತಿರುವುದು ಹೊಸ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್​ ವಿರುದ್ದ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ಸಿಎಸ್​ಕೆ .

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ