AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಒಬ್ಬರು ಆಸ್ಪತ್ರೆಗೆ, ಮತ್ತೊಬ್ಬರು ಇಂಜುರಿ: ಸಂಕಷ್ಟದಲ್ಲಿ CSK ತಂಡ

IPL 2022 CSK: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ.

IPL 2022: ಒಬ್ಬರು ಆಸ್ಪತ್ರೆಗೆ, ಮತ್ತೊಬ್ಬರು ಇಂಜುರಿ: ಸಂಕಷ್ಟದಲ್ಲಿ CSK ತಂಡ
IPL 2022 CSK
TV9 Web
| Edited By: |

Updated on: Apr 02, 2022 | 3:22 PM

Share

ಐಪಿಎಲ್​ ಸೀಸನ್ 15 (IPL 20220 ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡವು ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಈ ಬಾರಿ ಅತ್ಯಧಿಕ ಮೊತ್ತ ನೀಡಿ ಖರೀದಿಸಿದ ವೇಗಿ ದೀಪಕ್ ಚಹರ್ ಅವರು ಗಾಯದ ಕಾರಣ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ಇತ್ತ ಗಾಯದಿಂದ ಚೇತರಿಸಿಕೊಂಡು ಅಂತಿಮ ಹಂತದಲ್ಲಿ ತಂಡವನ್ನು ಸೇರಿಕೊಂಡ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇನ್ನು ಆಡಿದ ಮೊದಲ ಎರಡೂ ಪಂದ್ಯಗಳಲ್ಲೂ ಸಿಎಸ್​ಕೆ ಸೋತಿದೆ. ಈ ಸತತ ಸೋಲಿನ ಚಿಂತೆ ಒಂದೆಡೆಯಾದರೆ, ಇದೀಗ ತಂಡದ ಇಬ್ಬರು ವಿದೇಶಿ ಆಟಗಾರರು ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಸಿಎಸ್​ಕೆ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಕ್ರಿಸ್ ಜೋರ್ಡಾನ್ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮತ್ತೊಂದೆಡೆ ವೇಗದ ಬೌಲರ್ ಆಡಮ್ ಮಿಲ್ನ್ ಕೂಡ ಗಾಯಗೊಂಡಿದ್ದಾರೆ. ಒಂದೆಡೆ ಗಂಟಲಿನ ಸೋಂಕಿನಿಂದ ಬಳಲುತ್ತಿರುವ ಕ್ರಿಸ್ ಜೋರ್ಡಾನ್ ಅವರನ್ನು ಮುಂದಿನ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ. ಇದೀಗ ಗಾಯಗೊಂಡಿರುವ ಆಡಮ್ ಮಿಲ್ನ್ ಭಾನುವಾರ ನಡೆಯಲಿರುವ ಪಂಜಾಬ್ ಕಿಂಗ್ಸ್​ ವಿರುದ್ದ ಆಡುವುದಿಲ್ಲ ಎಂದು ತಿಳಿದು ಬಂದಿದೆ.

ಈಗಾಗಲೇ ಪ್ರಮುಖ ವೇಗಿ ದೀಪಕ್ ಚಹರ್ ಅವರ ಅನುಪಸ್ಥಿತಿಯಲ್ಲಿ ಸಿಎಸ್​ಕೆ ತಂಡದ ಬೌಲಿಂಗ್ ಲೈನಪ್ ಹಳಿ ತಪ್ಪಿದೆ. ಇದೀಗ ಪ್ರಮುಖ ಆಲ್​ರೌಂಡರ್ ಕ್ರಿಸ್ ಜೋರ್ಡಾನ್ ಹಾಗೂ ವೇಗಿ ಆಡಮ್ ಮಿಲ್ನ್ ಕೂಡ ಕೆಲ ಪಂದ್ಯಗಳಿಗೆ ಅಲಭ್ಯರಾಗುತ್ತಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಒಟ್ಟಿನಲ್ಲಿ ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್​ ಬ್ಯಾಕ್ ಟು ಬ್ಯಾಕ್ ಆಘಾತಗಳು ಎದುರಾಗುತ್ತಿರುವುದು ಹೊಸ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್​ ವಿರುದ್ದ ಗೆಲ್ಲುವ ಮೂಲಕ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ ಸಿಎಸ್​ಕೆ .

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ