IPL 2022 Closing Ceremony: ವಿಶ್ವ ದಾಖಲೆ ನಿರ್ಮಿಸಿದ ಬಿಸಿಸಿಐ

IPL 2022 Closing Ceremony: ಈ ವರ್ಣರಂಜಿತ ಸಂಗೀಜ ಸಂಜೆಯಲ್ಲಿ ಎಆರ್ ರೆಹಮಾನ್ ಅವರೊಂದಿಗೆ ಗಾಯಕಿ ನೀತಿ ಮೋಹನ್, ಗಾಯಕ ಮೋಹಿತ್ ಚೌಹಾಣ್ ಮತ್ತು ಬೆನ್ನಿ ದಯಾಳ್ ಕೂಡ ಕಾಣಿಸಿಕೊಂಡಿದ್ದರು.

IPL 2022 Closing Ceremony: ವಿಶ್ವ ದಾಖಲೆ ನಿರ್ಮಿಸಿದ ಬಿಸಿಸಿಐ
Guinness World Record T Shirt
Follow us
| Updated By: ಝಾಹಿರ್ ಯೂಸುಫ್

Updated on: May 29, 2022 | 8:44 PM

IPL 2022 Final: ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್  (GT vs RR) ನಡುವಿನ ಐಪಿಎಲ್ 2022 ರ ಫೈನಲ್‌ಗೆ ಮುಂಚಿತವಾಗಿ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಭುತವಾದ ಸಮಾರೋಪ ಸಮಾರಂಭ ನಡೆಯಿತು. ಕೊರೋನಾದಿಂದಾಗಿ, ಕಳೆದ ವರ್ಷ ಮತ್ತು 2020 ರಲ್ಲಿ ಐಪಿಎಲ್‌ನ ಸಮಾರೋಪ ಸಮಾರಂಭವನ್ನು ನಡೆಸಿರಲಿಲ್ಲ. ಆದರೆ ಬಾರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೇರಿದ್ದ ಒಂದು ಲಕ್ಷಕ್ಕೂ ಅಧಿಕ ಪ್ರೇಕ್ಷಕರ ಮುಂದೆ ಅದ್ಧೂರಿ ಸಮಾರೋಪ ಸಮಾರಂಭ ಆಯೋಜಿಸುವಲ್ಲಿ ಬಿಸಿಸಿಐ ಯಶಸ್ವಿಯಾಗಿದೆ. ಅಷ್ಟೇ ಅಲ್ಲದೆ ವಿಶೇಷ ದಾಖಲೆಯನ್ನೂ ಕೂಡ ಬರೆದಿದೆ.

ಸಮಾರೋಪ ಸಮಾರಂಭದಲ್ಲಿ ಅತಿದೊಡ್ಡ ಕ್ರಿಕೆಟ್ ಟಿ-ಶರ್ಟ್ ಅನ್ನು ಪ್ರದರ್ಶಿಸಲಾಗಿತ್ತು. ಈ ಜೆರ್ಸಿ 66 ಮೀಟರ್ ಉದ್ದ ಮತ್ತು 42 ಮೀಟರ್ ಅಗಲವಿತ್ತು. 10 ತಂಡಗಳ ಲೋಗೋವನ್ನು ಹೊಂದಿದ್ದ ಜೆರ್ಸಿಯು ವಿಶ್ವದ ಅತೀ ದೊಡ್ಡ ಜೆರ್ಸಿ ಎಂಬ ದಾಖಲೆ ಬರೆದಿದೆ. ಈ ದಾಖಲೆಯನ್ನು ಪರಿಗಣಿಸಿರುವ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ಅಧಿಕಾರಿಗಳು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರಿಗೆ ಅತಿದೊಡ್ಡ ಕ್ರಿಕೆಟ್ ಟಿ-ಶರ್ಟ್ ದಾಖಲೆಯ ಪ್ರಮಾಣಪತ್ರವನ್ನು ನೀಡಿದರು.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಇದಾದ ಬಳಿಕ ಉಭಯ ತಂಡಗಳ ನಾಯಕರಾದ ಹಾರ್ದಿಕ್ ಪಾಂಡ್ಯ ಹಾಗೂ ಸಂಜು ಸ್ಯಾಮ್ಸನ್ ಸ್ಟೇಡಿಯಂ ಕಾಣಿಸಿಕೊಂಡಿದ್ದರು. ಆ ಬಳಿಕ ನಡೆದ ಮನರಂಜನಾ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ನೃತ್ಯ ಪ್ರದರ್ಶನ ನೀಡಿದರು. ಇದರ ನಂತರ, ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಈ ಮೂಲಕ 75 ವರ್ಷಗಳ ಭಾರತೀಯ ಕ್ರಿಕೆಟ್ ಪಯಣವನ್ನು ವಿಭಿನ್ನ ಹಾಡುಗಳ ಮೂಲಕ ತೋರಿಸಲಾಯಿತು. ಈ ವರ್ಣರಂಜಿತ ಸಂಗೀಜ ಸಂಜೆಯಲ್ಲಿ ಎಆರ್ ರೆಹಮಾನ್ ಅವರೊಂದಿಗೆ ಗಾಯಕಿ ನೀತಿ ಮೋಹನ್, ಗಾಯಕ ಮೋಹಿತ್ ಚೌಹಾಣ್ ಮತ್ತು ಬೆನ್ನಿ ದಯಾಳ್ ಕೂಡ ಕಾಣಿಸಿಕೊಂಡಿದ್ದರು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ