AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Closing Ceremony: ವಿಶ್ವ ದಾಖಲೆ ನಿರ್ಮಿಸಿದ ಬಿಸಿಸಿಐ

IPL 2022 Closing Ceremony: ಈ ವರ್ಣರಂಜಿತ ಸಂಗೀಜ ಸಂಜೆಯಲ್ಲಿ ಎಆರ್ ರೆಹಮಾನ್ ಅವರೊಂದಿಗೆ ಗಾಯಕಿ ನೀತಿ ಮೋಹನ್, ಗಾಯಕ ಮೋಹಿತ್ ಚೌಹಾಣ್ ಮತ್ತು ಬೆನ್ನಿ ದಯಾಳ್ ಕೂಡ ಕಾಣಿಸಿಕೊಂಡಿದ್ದರು.

IPL 2022 Closing Ceremony: ವಿಶ್ವ ದಾಖಲೆ ನಿರ್ಮಿಸಿದ ಬಿಸಿಸಿಐ
Guinness World Record T Shirt
TV9 Web
| Edited By: |

Updated on: May 29, 2022 | 8:44 PM

Share

IPL 2022 Final: ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್  (GT vs RR) ನಡುವಿನ ಐಪಿಎಲ್ 2022 ರ ಫೈನಲ್‌ಗೆ ಮುಂಚಿತವಾಗಿ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅದ್ಭುತವಾದ ಸಮಾರೋಪ ಸಮಾರಂಭ ನಡೆಯಿತು. ಕೊರೋನಾದಿಂದಾಗಿ, ಕಳೆದ ವರ್ಷ ಮತ್ತು 2020 ರಲ್ಲಿ ಐಪಿಎಲ್‌ನ ಸಮಾರೋಪ ಸಮಾರಂಭವನ್ನು ನಡೆಸಿರಲಿಲ್ಲ. ಆದರೆ ಬಾರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೇರಿದ್ದ ಒಂದು ಲಕ್ಷಕ್ಕೂ ಅಧಿಕ ಪ್ರೇಕ್ಷಕರ ಮುಂದೆ ಅದ್ಧೂರಿ ಸಮಾರೋಪ ಸಮಾರಂಭ ಆಯೋಜಿಸುವಲ್ಲಿ ಬಿಸಿಸಿಐ ಯಶಸ್ವಿಯಾಗಿದೆ. ಅಷ್ಟೇ ಅಲ್ಲದೆ ವಿಶೇಷ ದಾಖಲೆಯನ್ನೂ ಕೂಡ ಬರೆದಿದೆ.

ಸಮಾರೋಪ ಸಮಾರಂಭದಲ್ಲಿ ಅತಿದೊಡ್ಡ ಕ್ರಿಕೆಟ್ ಟಿ-ಶರ್ಟ್ ಅನ್ನು ಪ್ರದರ್ಶಿಸಲಾಗಿತ್ತು. ಈ ಜೆರ್ಸಿ 66 ಮೀಟರ್ ಉದ್ದ ಮತ್ತು 42 ಮೀಟರ್ ಅಗಲವಿತ್ತು. 10 ತಂಡಗಳ ಲೋಗೋವನ್ನು ಹೊಂದಿದ್ದ ಜೆರ್ಸಿಯು ವಿಶ್ವದ ಅತೀ ದೊಡ್ಡ ಜೆರ್ಸಿ ಎಂಬ ದಾಖಲೆ ಬರೆದಿದೆ. ಈ ದಾಖಲೆಯನ್ನು ಪರಿಗಣಿಸಿರುವ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ಅಧಿಕಾರಿಗಳು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರಿಗೆ ಅತಿದೊಡ್ಡ ಕ್ರಿಕೆಟ್ ಟಿ-ಶರ್ಟ್ ದಾಖಲೆಯ ಪ್ರಮಾಣಪತ್ರವನ್ನು ನೀಡಿದರು.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಇದಾದ ಬಳಿಕ ಉಭಯ ತಂಡಗಳ ನಾಯಕರಾದ ಹಾರ್ದಿಕ್ ಪಾಂಡ್ಯ ಹಾಗೂ ಸಂಜು ಸ್ಯಾಮ್ಸನ್ ಸ್ಟೇಡಿಯಂ ಕಾಣಿಸಿಕೊಂಡಿದ್ದರು. ಆ ಬಳಿಕ ನಡೆದ ಮನರಂಜನಾ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ನೃತ್ಯ ಪ್ರದರ್ಶನ ನೀಡಿದರು. ಇದರ ನಂತರ, ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಈ ಮೂಲಕ 75 ವರ್ಷಗಳ ಭಾರತೀಯ ಕ್ರಿಕೆಟ್ ಪಯಣವನ್ನು ವಿಭಿನ್ನ ಹಾಡುಗಳ ಮೂಲಕ ತೋರಿಸಲಾಯಿತು. ಈ ವರ್ಣರಂಜಿತ ಸಂಗೀಜ ಸಂಜೆಯಲ್ಲಿ ಎಆರ್ ರೆಹಮಾನ್ ಅವರೊಂದಿಗೆ ಗಾಯಕಿ ನೀತಿ ಮೋಹನ್, ಗಾಯಕ ಮೋಹಿತ್ ಚೌಹಾಣ್ ಮತ್ತು ಬೆನ್ನಿ ದಯಾಳ್ ಕೂಡ ಕಾಣಿಸಿಕೊಂಡಿದ್ದರು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ