AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ಹಾಗೂ ಮುಂಬೈ ಇಂಡಿಯನ್ಸ್​ಗೆ ಇನ್ನೂ ಇದೆ ಪ್ಲೇಆಫ್ ಚಾನ್ಸ್..!

IPL 2022: ಯಾವುದೇ ತಂಡ ಇನ್ನೂ ಸಹ ಪ್ಲೇಆಫ್ ಖಚಿತಪಡಿಸಿಕೊಳ್ಳದ ಕಾರಣ ಇತ್ತ ಯಾವುದೇ ತಂಡ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ. ಏಕೆಂದರೆ 9 ಪಂದ್ಯವಾಡಿರುವ ಮುಂಬೈ ಇಂಡಿಯನ್ಸ್ 1 ಗೆಲುವು ದಾಖಲಿಸಿದೆ.

IPL 2022: CSK ಹಾಗೂ ಮುಂಬೈ ಇಂಡಿಯನ್ಸ್​ಗೆ ಇನ್ನೂ ಇದೆ ಪ್ಲೇಆಫ್ ಚಾನ್ಸ್..!
IPL 2022 MI vs CSK
TV9 Web
| Edited By: |

Updated on: May 05, 2022 | 4:13 PM

Share

IPL 2022: ಇಂಡಿಯನ್ ಪ್ರೀಮಿಯರ್ ಲೀಗ್​ನ ಅತ್ಯಂತ ಬಲಿಷ್ಠ ಎರಡು ತಂಡಗಳು ಈ ಬಾರಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಅದರಲ್ಲೂ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ಕೇವಲ 1 ಗೆಲುವು ದಾಖಲಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಇನ್ನು 3 ಪಂದ್ಯ ಜಯಿಸಿರುವ ಚೆನ್ನೈ ಸೂಪರ್ ಕಿಂಗ್ಸ್ (CSK)​ 9ನೇ ಸ್ಥಾನದಲ್ಲಿದೆ. ಇತ್ತ ಆಡಿರುವ 10 ಪಂದ್ಯಗಳಲ್ಲಿ 8 ಜಯ ಸಾಧಿಸಿರುವ ಗುಜರಾತ್ ಟೈಟನ್ಸ್ ತಂಡವು 16 ಅಂಕ ಪಡೆದು ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ವಿಶೇಷ ಎಂದರೆ ಇದುವರೆಗೆ ಯಾವುದೇ ತಂಡ ಪ್ಲೇಆಫ್ ಅರ್ಹತೆಯನ್ನು ಗಿಟ್ಟಿಸಿಕೊಂಡಿಲ್ಲ. ಅಂದರೆ ಈ ಬಾರಿ 10 ತಂಡಗಳಿರುವ ಕಾರಣ ಪ್ಲೇಆಫ್​ ಖಚಿತವಾಗುವುದು 18 ಪಾಯಿಂಟ್ಸ್​ ಪಡೆದ ಮೇಲೆ ಎಂದರೆ ತಪ್ಪಾಗಲಾರದು. ಅದರಂತೆ ಗುಜರಾತ್ ಟೈಟನ್ಸ್ ತಂಡದ ಪ್ಲೇಆಫ್ ಕನ್​ಫರ್ಮ್ ಆಗಬೇಕಿದ್ರೆ ಇನ್ನೊಂದು ಪಂದ್ಯವನ್ನೂ ಕೂಡ ಗೆಲ್ಲಬೇಕಿದೆ.

ಅಷ್ಟೇ ಅಲ್ಲದೆ ಯಾವುದೇ ತಂಡ ಇನ್ನೂ ಸಹ ಪ್ಲೇಆಫ್ ಖಚಿತಪಡಿಸಿಕೊಳ್ಳದ ಕಾರಣ ಇತ್ತ ಯಾವುದೇ ತಂಡ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ. ಏಕೆಂದರೆ 9 ಪಂದ್ಯವಾಡಿರುವ ಮುಂಬೈ ಇಂಡಿಯನ್ಸ್ 1 ಗೆಲುವು ದಾಖಲಿಸಿದೆ. ಇನ್ನು ಮುಂಬೈಗೆ 5 ಮ್ಯಾಚ್​ಗಳಿದ್ದು, ಈ ಎಲ್ಲಾ ಪಂದ್ಯಗಳನ್ನು ಗೆದ್ದರೆ 12 ಪಾಯಿಂಟ್ಸ್ ಆಗಲಿದೆ. ಆದರೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ 3ನೇ ಮತ್ತು ನಾಲ್ಕನೇ ಸ್ಥಾನ ಪಡೆದಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಆರ್​ಸಿಬಿ ಕೂಡ 12 ಪಾಯಿಂಟ್ಸ್ ಪಡೆದುಕೊಂಡಿದೆ. ಅಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರ ನಾಲ್ಕು ತಂಡಗಳ ಪಾಯಿಂಟ್ಸ್​ 14 ಆಗುವ ತನಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಪ್ಲೇಆಫ್ ಅವಕಾಶ ಇರಲಿದೆ.

ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್​ 10 ರಲ್ಲಿ 3 ಗೆಲುವು ದಾಖಲಿಸಿ 6 ಪಾಯಿಂಟ್ಸ್ ಕಲೆಹಾಕಿದೆ. ಇನ್ನು 4 ಮ್ಯಾಚ್​ ಉಳಿದಿದ್ದು, ಈ ಎಲ್ಲಾ ಪಂದ್ಯಗಳನ್ನು ಸಿಎಸ್​ಕೆ ಗೆದ್ದರೆ 14 ಪಾಯಿಂಟ್ಸ್ ಆಗಲಿದೆ. ಆದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಕೇವಲ ಎರಡು ತಂಡಗಳು ಮಾತ್ರ 14 ಪಾಯಿಂಟ್ಸ್​ ಗಳಿಸಿದೆ. ಅದರಂತೆ 16 ಪಾಯಿಂಟ್ಸ್​ಗಳೊಂದಿಗೆ ಗುಜರಾತ್ ಟೈಟನ್ಸ್ ಅಗ್ರಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್​ 14 ಪಾಯಿಂಟ್ಸ್​ಗಳಿಸಿ 2ನೇ ಸ್ಥಾನದಲ್ಲಿದೆ.

ಇದಾಗ್ಯೂ 3ನೇ ಮತ್ತು 4ನೇ ಸ್ಥಾನದಲ್ಲಿರುವ ತಂಡಗಳು 14 ಪಾಯಿಂಟ್ಸ್​ ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಪಡೆಯುವವರೆಗೂ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಅಂದರೆ ಪಾಯಿಂಟ್ಸ್​ ಟೇಬಲ್​ನಲ್ಲಿರುವ ಟಾಪ್ 4 ತಂಡಗಳು 16 ಪಾಯಿಂಟ್ಸ್​ ಗಳಿಸಿದರೆ, ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಹೊರಬೀಳಲಿದೆ. ಹಾಗೆಯೇ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರ ನಾಲ್ಕರಲ್ಲಿ ಒಂದು ತಂಡವು 14 ಅಂಕ ಪಡೆದರೆ ಸಿಎಸ್​ಕೆ ತಂಡಕ್ಕೆ ಪ್ಲೇಆಫ್ ಅವಕಾಶ ಇರಲಿದೆ. ಇದಕ್ಕಾಗಿ ಈ ಸಿಎಸ್​ಕೆ ​ ಮುಂದಿನ ಎಲ್ಲಾ ಪಂದ್ಯಗಳನ್ನೂ ಗೆಲ್ಲಲೇಬೇಕು. ಆ ಬಳಿಕ ಪಾಯಿಂಟ್ಸ್​ ಟೇಬಲ್​ನಲ್ಲಿ 3 ಮತ್ತು 4ನೇ ಸ್ಥಾನ ಪಡೆಯುವ ತಂಡಗಳು 14 ಪಾಯಿಂಟ್ಸ್ ಪಡೆದರೆ ನೆಟ್​ ರನ್​ ರೇಟ್ ಮೂಲಕ ಪ್ಲೇಆಫ್ ಆಡುವ ಅವಕಾಶ ಚೆನ್ನೈ ಸೂಪರ್ ಕಿಂಗ್ಸ್​ಗೆ ದೊರೆಯಲಿದೆ.

ಆದರೆ ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ ಮುಂದಿನಗಳಲ್ಲಿ ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಕೂಡ ಮುಖಾಮುಖಿಯಾಗಬೇಕಿದೆ. ಹೀಗಾಗಿ ಈ ಪಂದ್ಯದ ಫಲಿತಾಂಶದ ಮೂಲಕ ಒಂದು ತಂಡವು ಪ್ಲೇಆಫ್ ರೇಸ್​ನಿಂದ ಅಧಿಕೃತವಾಗಿ ಹೊರಬೀಳುವುದು ಖಚಿತ ಎನ್ನಬಹುದು. ಅಲ್ಲಿಯವರೆಗೂ ಎರಡೂ ತಂಡಗಳು ಪ್ಲೇಆಫ್ ರೇಸ್​ನಲ್ಲಿ ಇರಲಿದೆ. ಇದರ ನಡುವೆ ಈ ತಂಡಗಳು ಒಂದೊಂದು ಪಂದ್ಯ ಸೋತರೆ ಮತ್ತು ಪಾಯಿಂಟ್ಸ್​ ಟೇಬಲ್​ನಲ್ಲಿ 4 ತಂಡಗಳು 14 ಪಾಯಿಂಟ್ಸ್​ಗಳಿಸಿದರೆ ಕೂಡ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ.

ಅಂದರೆ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರ ನಾಲ್ಕು ತಂಡಗಳು 16 ಪಾಯಿಂಟ್ಸ್​ಗಳಿಸುವವರೆಗೆ ಅಥವಾ ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ ಮುಂದಿನ ಪಂದ್ಯ ಸೋಲುವವರೆಗೆ ಪ್ಲೇಆಫ್ ರೇಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಸಿಎಸ್​ಕೆ ಹಾಗೂ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ತಮ್ಮ ತಂಡಗಳ ಗೆಲುವಿನೊಂದಿಗೆ ಪಾಯಿಂಟ್ಸ್​ ಟೇಬಲ್​ ಮೇಲೂ ಕಣ್ಣಿಡಬೇಕಾಗುತ್ತದೆ. ಏಕೆಂದರೆ ಇತ್ತ ಎರಡೂ ತಂಡಗಳು ಗೆದ್ದರೂ ಅತ್ತ ಉಳಿದ ತಂಡಗಳ ಪಾಯಿಂಟ್ಸ್ 16 ಆದರೂ ಸಿಎಸ್​ಕೆ-ಮುಂಬೈ ಪ್ಲೇಆಫ್​ ರೇಸ್​ನಿಂದ ಹೊರಬೀಳಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು