AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸೋಲಿನ ಬೆನ್ನಲ್ಲೇ CSK ಗೆ ಡಬಲ್ ಶಾಕ್..!

IPL 2022: ಚೆನ್ನೈ ಸೂಪರ್ ಕಿಂಗ್ಸ್ (CSK): ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

IPL 2022: ಸೋಲಿನ ಬೆನ್ನಲ್ಲೇ CSK ಗೆ ಡಬಲ್ ಶಾಕ್..!
CSK
TV9 Web
| Edited By: |

Updated on: Apr 18, 2022 | 5:00 PM

Share

IPL 2022: ಸೋಲು, ಸೋಲು, ಸೋಲು, ಸೋಲು, ಸೋಲು, ಗೆಲುವು, ಸೋಲು…ಇದು ಈ ಬಾರಿ ಸಿಎಸ್​ಕೆ (CSK) ತಂಡದ ಪ್ರದರ್ಶನ. ಆಡಿರುವ 6 ಪಂದ್ಯಗಳಲ್ಲಿ 5 ಮ್ಯಾಚ್​ನಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಇದೀಗ ಆಘಾತ ಎದುರಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಸಿಎಸ್​ಕೆ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಗಾಯದ ಕಾರಣ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದ ದೀಪಕ್ ಚಹರ್ ಆ ಬಳಿಕ ಬೆನ್ನು ನೋವಿನ ಕಾರಣ ಇಡೀ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಇದೀಗ ಸಿಎಸ್​ಕೆ ತಂಡದ ಮತ್ತೋರ್ವ ವೇಗದ ಬೌಲರ್ ಕೂಡ ಐಪಿಎಲ್​ನಿಂದ ಹಿಂದೆ ಸರಿಯುವುದು ಬಹುತೇಕ ಖಚಿತವಾಗಿದೆ.

ಹೌದು, ಸಿಎಸ್​ಕೆ ತಂಡದ ಪ್ರಮುಖ ಬೌಲರ್ ಆ್ಯಡಂ ಮಿಲ್ನ್ ಕೂಡ ಐಪಿಎಲ್​ನಿಂದ ಹಿಂದೆ ಸರಿಯಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ ಕೆಕೆಆರ್​ ವಿರುದ್ದದ ಪಂದ್ಯದ ವೇಳೆ ಗಾಯಗೊಂಡಿದ್ದ ಮಿಲ್ನ್ ಆ ಬಳಿಕ ಯಾವುದೇ ಪಂದ್ಯ ಆಡಿರಲಿಲ್ಲ. ಇದೀಗ ಸಿಎಸ್​ಕೆ ತಂಡದಲ್ಲಿದ್ದರೂ ನ್ಯೂಜಿಲೆಂಡ್ ವೇಗಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತ ಸಿಎಸ್​ಕೆ ತಂಡಕ್ಕೆ ಉಳಿದಿರುವುದು ಕೇವಲ 8 ಪಂದ್ಯಗಳು ಮಾತ್ರ.

ಒಂದು ವೇಳೆ ಆ್ಯಡಂ ಮಿಲ್ನ್ ಗಾಯದಿಂದ ಚೇತರಿಸಿಕೊಂಡರೂ ಸಂಪೂರ್ಣವಾಗಿ ಫಿಟ್ ಆಗಲಿದ್ದಾರೆ ಎಂಬುದು ಖಚಿತವಾಗಿಲ್ಲ. ಇದಕ್ಕೆ ಒಂದೆರೆಡು ವಾರಗಳನ್ನು ತೆಗೆದುಕೊಳ್ಳಬಹುದು. ಅಷ್ಟರಲ್ಲಾಗಲೇ ಸಿಎಸ್​ಕೆ ತಂಡವು ತನ್ನ ಬಹುತೇಕ ಪಂದ್ಯಗಳನ್ನು ಆಡಲಿದೆ. ಹೀಗಾಗಿ ಆ್ಯಡಂ ಮಿಲ್ನ್ ಕೂಡ ತಂಡದಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಸಿಎಸ್​ಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತ ಪ್ರಮುಖ ಬೌಲರ್​ಗಳ ಕೊರತೆಯಿಂದಾಗಿ ಸಿಎಸ್​ಕೆ ತಂಡದ ಬೌಲಿಂಗ್ ಲೈನಪ್ ಹಳಿ ತಪ್ಪಿದೆ. ಅದರಲ್ಲೂ ವಿದೇಶಿ ವೇಗಿಯಾಗಿ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಕ್ರಿಸ್ ಜೋರ್ಡನ್ 3.5 ಓವರ್​ಗಳಲ್ಲಿ ನೀಡಿದ್ದು ಬರೋಬ್ಬರಿ 58 ರನ್​ಗಳು. ಒಂದಾರ್ಥದಲ್ಲಿ ಜೋರ್ಡನ್ ಅವರ ಕಳಪೆ ಬೌಲಿಂಗ್​ನಿಂದಾಗಿ ಗುಜರಾತ್ ಟೈಟನ್ಸ್ ವಿರುದ್ದ ಸಿಎಸ್​ಕೆ ಸೋಲುವಂತಾಯಿತು ಎಂದರೂ ತಪ್ಪಾಗಲಾರದು.

ಹಾಗೆಯೇ ಸಿಎಸ್​ಕೆ ತಂಡದಲ್ಲಿರುವ ಮತ್ತೋರ್ವ ವೇಗಿ ಸೌತ್ ಆಫ್ರಿಕಾದ ಡ್ವೈನ್ ಪ್ರಿಟೋರಿಯಸ್ 2 ಪಂದ್ಯಗಳಲ್ಲಿ 61 ರನ್ ನೀಡಿದ್ದರು. ಹೀಗಾಗಿ ಕ್ರಿಸ್ ಜೋರ್ಡನ್​ಗೆ ಅವಕಾಶ ನೀಡಲಾಗಿತ್ತು. ಇದೀಗ ಜೋರ್ಡನ್ ಕೂಡ ದುಬಾರಿಯಾಗಿದ್ದಾರೆ. ಮತ್ತೊಂದೆಡೆ ಉತ್ತಮ ಫಾರ್ಮ್​ನಲ್ಲಿದ್ದ ಆ್ಯಡಂ ಮಿಲ್ನ್ ಗಾಯಗೊಂಡು ಆಡುವ ಪರಿಸ್ಥಿತಿಯಲ್ಲಿಲ್ಲ. ಒಟ್ಟಿನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಸಿಎಸ್​ಕೆಗೆ ಇದೀಗ ಆಟಗಾರರ ಗಾಯದ ಸಮಸ್ಯೆಯೇ ದೊಡ್ಡ ಚಿಂತೆಯನ್ನುಂಟು ಮಾಡಿದೆ.

ಚೆನ್ನೈ ಸೂಪರ್ ಕಿಂಗ್ಸ್ (CSK): ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ, ಶಿವಂ ದುಬೆ, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನ್, ಮಿಚೆಲ್ ಸ್ಯಾಂಟ್ನರ್.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?