AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ RCB ಮಾಜಿ ನಾಯಕ

IPL 2022: ಕಳೆದ 8 ಪಂದ್ಯಗಳಿಂದ ವಿರಾಟ್ ಕೊಹ್ಲಿ ಕಲೆಹಾಕಿದ್ದು ಕೇವಲ 119 ರನ್ ಮಾತ್ರ. ಅಂದರೆ ಎರಡು ಇನಿಂಗ್ಸ್​ಗಳಲ್ಲಿ 40 ಕ್ಕಿಂತ ಅಧಿಕ ರನ್​ಗಳಿಸಿದ ಬಳಿಕ ಕೊಹ್ಲಿ ಸತತವಾಗಿ ವಿಫಲರಾಗಿದ್ದಾರೆ. ಅಲ್ಲದೆ ಎರಡು ಇನಿಂಗ್ಸ್​ನಲ್ಲಿ ಬ್ಯಾಕ್ ಟು ಬ್ಯಾಕ್ ಗೋಲ್ಡನ್ ಡಕ್ ಔಟ್ ಆಗಿದ್ದಾರೆ.

Virat Kohli: ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ RCB ಮಾಜಿ ನಾಯಕ
Virat Kohli
TV9 Web
| Edited By: |

Updated on: Apr 24, 2022 | 3:50 PM

Share

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್‌ ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ಈ ಬಾರಿಯ ಐಪಿಎಲ್​ನಲ್ಲಿ ಕೇವಲ ಆಟಗಾರನಾಗಿ ಮಾತ್ರ ಕಾಣಿಸಿಕೊಂಡಿರುವ ಕೊಹ್ಲಿ ರನ್​ಗಳಿಸಲು ಪರದಾಡುತ್ತಿರುವುದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತಿದೆ. ಏಕೆಂದರೆ ಕಳೆದ 8 ಪಂದ್ಯಗಳಿಂದ ವಿರಾಟ್ ಕೊಹ್ಲಿ ಕಲೆಹಾಕಿದ್ದು ಕೇವಲ 119 ರನ್ ಮಾತ್ರ. ಅಂದರೆ ಎರಡು ಇನಿಂಗ್ಸ್​ಗಳಲ್ಲಿ 40 ಕ್ಕಿಂತ ಅಧಿಕ ರನ್​ಗಳಿಸಿದ ಬಳಿಕ ಕೊಹ್ಲಿ ಸತತವಾಗಿ ವಿಫಲರಾಗಿದ್ದಾರೆ. ಅಲ್ಲದೆ ಎರಡು ಇನಿಂಗ್ಸ್​ನಲ್ಲಿ ಬ್ಯಾಕ್ ಟು ಬ್ಯಾಕ್ ಗೋಲ್ಡನ್ ಡಕ್ ಔಟ್ ಆಗಿದ್ದಾರೆ. ಹೀಗಾಗಿಯೇ ವಿರಾಟ್ ಕೊಹ್ಲಿಯ ಫಾರ್ಮ್​ ಇದೀಗ ಭಾರೀ ಚರ್ಚಗೆ ಗ್ರಾಸವಾಗಿದೆ. ಆದರೆ ಕೊಹ್ಲಿಯ ಕೆಟ್ಟ ಪ್ರದರ್ಶನದ ಬಗ್ಗೆ ಆರ್​ಸಿಬಿ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

ವಿರಾಟ್ ಕೊಹ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ ನಿಜ. ಆದರೆ ಅವರಿಗೆ ಆರ್​ಸಿಬಿ ಟೀಮ್ ಮ್ಯಾನೇಜ್‌ಮೆಂಟ್ ಯಾವುದೇ ಸಲಹೆ ನೀಡಬಾರದು. ಅವರ ಫಾರ್ಮ್​ ಬಗ್ಗೆ ಅವರೇ ಯೋಚಿಸಲಿ. ಈ ಮೂಲಕ ಖುದ್ದು ಕೊಹ್ಲಿಯೇ ತಮ್ಮ ತಪ್ಪುಗಳನ್ನು ತಿದ್ದಿ ಕಂಬ್ಯಾಕ್ ಮಾಡಲಿ ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಕಳಪೆ ಫಾರ್ಮ್‌ನಿಂದ ಹೊರಬರಲು ವಿರಾಟ್ ಕೊಹ್ಲಿ ತಮ್ಮದೇ ಆದ ಮಾರ್ಗವನ್ನು ಕಂಡುಕೊಳ್ಳಬೇಕು. ಏಕೆಂದರೆ ಕೊಹ್ಲಿಗೆ ಯಾರ ಸಲಹೆಯೂ ಬೇಕಾಗಿಲ್ಲ. ಅವರು ಕೂಡ ಅನುಭವಿ ಆಟಗಾರ. ಹೀಗಾಗಿ ಅವರ ತಪ್ಪುಗಳು ಅವರಿಗೂ ಕೂಡ ಗೊತ್ತಿರುತ್ತದೆ. ಅದರಂತೆ ಅವರು ಮುಂದಿನ ಪಂದ್ಯಗಳಲ್ಲಿ ತಮ್ಮ ತಪ್ಪುಗಳನ್ನು ಸರಿಪಡಿಸಲಿದ್ದಾರೆ ಎಂಬುದರ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ವೆಟ್ಟೋರಿ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕೊಹ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ ಎಂದು ಅವರಿಗೆ ಸಲಹೆಗಳನ್ನು ನೀಡಲು ಹೋದರೆ ಅದು ದೊಡ್ಡ ತಪ್ಪಾಗುತ್ತದೆ. ಇದರಿಂದ ಅವರ ಬ್ಯಾಟಿಂಗ್ ಮೇಲೆ ಮತ್ತಷ್ಟು ಪರಿಣಾಮ ಬೀರಬಹುದು. ಹೀಗಾಗಿ ಅವರ ತಪ್ಪುಗಳನ್ನು ಅವರೇ ತಿದ್ದಿಕೊಳ್ಳುವುದು ಉತ್ತಮ. ಹಾಗಾಗಿ ಆರ್​ಸಿಬಿ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಆಗಲಿ ಅಥವಾ ಇನ್ನಿತರರಾಗಲಿ ಯಾರು ಕೂಡ ಸಲಹೆ ನೀಡಬೇಡಿ ಎಂದು ವೆಟ್ಟೋರಿ ಇದೇ ವೇಳೆ ತಿಳಿಸಿದರು.

ಅಲ್ಲದೆ ನಿಮ್ಮ ಮೇಲೆ ನಮಗೆ ಸಂಪೂರ್ಣ ನಂಬಿಕೆಯಿದೆ. ನೀವು ಪಂದ್ಯಗಳನ್ನು ಗೆಲ್ಲುವಂತೆ ಮಾಡುತ್ತೀರಿ ಎಂದು ಈ ಸಮಯದಲ್ಲಿ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಹೇಳಬೇಕಿದೆ. ಈ ಮೂಲಕ ಅವರರಲ್ಲಿ ಆತ್ಮವಿಶ್ವಾಸ ಮೂಡುವಂತೆ ಮಾಡಬೇಕಿದೆ ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಇದನ್ನೂ ಓದಿ: Virat Kohli: IPL ನಲ್ಲಿ ವಿರಾಟ್ ಕೊಹ್ಲಿ ಎಷ್ಟು ಬಾರಿ ಝೀರೊಗೆ ಔಟಾಗಿದ್ದಾರೆ ಗೊತ್ತಾ?

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು