AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಇಬ್ಬರು ಆಟಗಾರರಿಗೆ ಕೊರೋನಾ: ಮತ್ತೆ ಡೆಲ್ಲಿ​ ಪಂದ್ಯ ಸ್ಥಳಾಂತರ

IPL 2022: ಕಳೆದ ಕೆಲವು ತಿಂಗಳುಗಳಲ್ಲಿ ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳಲ್ಲಿ ಇಳಿಮುಖವಾಗಿದ್ದ ಕಾರಣ ದೇಶದಲ್ಲಿಯೇ ಪಂದ್ಯಾವಳಿಯನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿತು.

IPL 2022: ಇಬ್ಬರು ಆಟಗಾರರಿಗೆ ಕೊರೋನಾ: ಮತ್ತೆ ಡೆಲ್ಲಿ​ ಪಂದ್ಯ ಸ್ಥಳಾಂತರ
DC vs RR
TV9 Web
| Updated By: ಝಾಹಿರ್ ಯೂಸುಫ್|

Updated on:Apr 20, 2022 | 10:18 PM

Share

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಇಬ್ಬರು ಆಟಗಾರರು ಕೊರೋನಾ ಪಾಸಿಟಿವ್ ಆಗಿದ್ದಾರೆ. ಈ ಹಿಂದೆ ತಂಡದಲ್ಲಿದ್ದ ಮಿಚೆಲ್ ಮಾರ್ಷ್ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಇದೀಗ ಮತ್ತೋರ್ವ ಆಟಗಾರ ಟಿಮ್ ಸೈಫರ್ಟ್​ ಅವರಲ್ಲೂ ಕೊರೋನಾ ಸೋಂಕು ಕಂಡು ಬಂದಿದೆ. ಇದಕ್ಕೂ ಮುನ್ನ ಡೆಲ್ಲಿ ತಂಡದ ನಾಲ್ವರು ಸಿಬ್ಬಂದಿಯಲ್ಲೂ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಅಂದರೆ ಒಟ್ಟು 6 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕೊರೋನಾ ಸೋಂಕು ಕಂಡು ಬಂದಿರುವುದು ಇದೀಗ ಬಿಸಿಸಿಐ ಚಿಂತೆಯನ್ನು ಹೆಚ್ಚಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಶಿಬಿರದಲ್ಲಿ ಹಲವಾರು ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ , ಇದೀಗ ಬಿಸಿಸಿಐ ಟೂರ್ನಿಯನ್ನು ಮುಂದುವರಿಸಲು ನಿರಂತರವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದಕ್ಕಾಗಿ ಪಂದ್ಯಗಳ ಸ್ಥಳವನ್ನು ಸಹ ಬದಲಾಯಿಸಲಾಗುತ್ತಿದೆ. ಡೆಲ್ಲಿ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯಗಳ ಸ್ಥಳವನ್ನು ಬದಲಾಯಿಸಿದ ನಂತರ ಇದೀಗ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಮತ್ತೊಂದು ಪಂದ್ಯವನ್ನು ಸಹ ಸ್ಥಳಾಂತರ ಮಾಡಲಾಗಿದೆ. ಶುಕ್ರವಾರ ಏಪ್ರಿಲ್ 22 ರಂದು ಪುಣೆಯಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (DC vs RR) ನಡುವಿನ ಪಂದ್ಯವನ್ನು ಮುಂಬೈನಲ್ಲಿ ಆಡಲಾಗುವುದು ಎಂದು BCCI ತಿಳಿಸಿದೆ.

ಕೊರೊನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಬಿಸಿಸಿಐ ಡೆಲ್ಲಿ ತಂಡದ ಮುಂದಿನ ಪಂದ್ಯವನ್ನು ಪುಣೆ ಬದಲಿಗೆ ಮುಂಬೈನಲ್ಲಿ ಆಯೋಜಿಸಲು ನಿರ್ಧರಿಸಿದೆ. ಬಿಸಿಸಿಐ ಬುಧವಾರ ಹೇಳಿಕೆ ನೀಡಿದ್ದು, ಲೀಗ್‌ನ 34 ನೇ ಪಂದ್ಯವಾದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಈಗ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಬದಲಿಗೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.

ಕಳೆದ ಕೆಲವು ತಿಂಗಳುಗಳಲ್ಲಿ ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳಲ್ಲಿ ಇಳಿಮುಖವಾಗಿದ್ದ ಕಾರಣ ದೇಶದಲ್ಲಿಯೇ ಪಂದ್ಯಾವಳಿಯನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿತು. ಕಳೆದ ವರ್ಷವೂ ಇದೇ ಸಮಯದಲ್ಲಿ ಭಾರತದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಆದರೆ ನಂತರ ಇದ್ದಕ್ಕಿದ್ದಂತೆ ಕೊರೋನಾ ಎರಡನೇ ಅಲೆ ಶುರುವಾದ ಕಾರಣ, ಆಟಗಾರರಲ್ಲೂ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಟೂರ್ನಿಯನ್ನು ನಿಲ್ಲಿಸಬೇಕಾಯಿತು. ಅಲ್ಲದೆ ಯುಎಇನಲ್ಲಿ ಎರಡನೇ ಹಂತವಾಗಿ ಉಳಿದ ಪಂದ್ಯಗಳನ್ನು ನಡೆಸಲಾಗಿತ್ತು. ಇದೀಗ ಮತ್ತೆ ಕೊರೋನಾತಂಕ ಎದುರಾಗಿದ್ದು, ಹೀಗಾಗಿ ಸಂಪೂರ್ಣ ಸುರಕ್ಷತೆಯೊಂದಿಗೆ ಪಂದ್ಯಾವಳಿಯನ್ನು ನಡೆಸಲು ಬಿಸಿಸಿಐ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 10:17 pm, Wed, 20 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?