AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 15ನೇ ಆವೃತ್ತಿಯ ಐಪಿಎಲ್​ಗೂ ಕೊರೊನಾ ಕಾಟ; ದೆಹಲಿ ತಂಡದಲ್ಲಿ ಸೋಂಕಿನ ಪ್ರಕರಣ ಪತ್ತೆ!

IPL 2022: ಕೊರೊನಾ ವೈರಸ್ ಸೋಂಕಿನಿಂದ ಐಪಿಎಲ್​ನ ಸತತ ಎರಡು ಸೀಸನ್‌ಗಳನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ಎಲ್ಲಾ ಸುರಕ್ಷತೆಗಳೊಂದಿಗೆ ಐಪಿಎಲ್ ಭಾರತಕ್ಕೆ ಮರಳಿತ್ತು.

IPL 2022: 15ನೇ ಆವೃತ್ತಿಯ ಐಪಿಎಲ್​ಗೂ ಕೊರೊನಾ ಕಾಟ; ದೆಹಲಿ ತಂಡದಲ್ಲಿ ಸೋಂಕಿನ ಪ್ರಕರಣ ಪತ್ತೆ!
ಡೆಲ್ಲಿ ತಂಡ
TV9 Web
| Updated By: ಪೃಥ್ವಿಶಂಕರ|

Updated on:Apr 15, 2022 | 5:45 PM

Share

15ನೇ ಆವೃತ್ತಿಯ ಐಪಿಎಲ್​ಗೂ (IPL 2022) ಕೊರೊನಾ ಕಾಲಿಟ್ಟಿರುವ ಶಾಕಿಂಗ್ ಸಮಾಚಾರ ಹೊರಬಿದ್ದಿದೆ. ಮುಂಬೈನಲ್ಲಿ ಬಯೋ-ಸೇಫ್ ಬಬಲ್‌ನಲ್ಲಿ (bio-safe bubble in Mumbai) ನಡೆಯುತ್ತಿರುವ ಲೀಗ್‌ನ 15 ನೇ ಸೀಸನ್‌ನಲ್ಲಿ ಕೊರೊನಾ ಸೋಂಕಿನ ಮೊದಲ ಪ್ರಕರಣ ಕಂಡುಬಂದಿದೆ. ಇದು ಸಂಘಟಕರು ಮತ್ತು ಬಿಸಿಸಿಐ (BCCI) ಅನ್ನು ಮತ್ತೆ ಚಿಂತೆಗೀಡು ಮಾಡಿದೆ. ಶುಕ್ರವಾರ, ಏಪ್ರಿಲ್ 15 ರಂದು ಐಪಿಎಲ್ ನೀಡಿದ ಹೇಳಿಕೆಯ ಪ್ರಕಾರ, ದೆಹಲಿ ಕ್ಯಾಪಿಟಲ್ಸ್ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸೋಂಕು ಪತ್ತೆಯಾದ ನಂತರ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ ದೆಹಲಿಯ ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ.

ಕೊರೊನಾ ವೈರಸ್ ಸೋಂಕಿನಿಂದ ಐಪಿಎಲ್​ನ ಸತತ ಎರಡು ಸೀಸನ್‌ಗಳನ್ನು ಯುಎಇಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ಎಲ್ಲಾ ಸುರಕ್ಷತೆಗಳೊಂದಿಗೆ ಐಪಿಎಲ್ ಭಾರತಕ್ಕೆ ಮರಳಿತ್ತು. ಆದಾಗ್ಯೂ, ಕಳೆದ ಸೀಸನ್ ಭಾರತದಲ್ಲಿಯೇ ಪ್ರಾರಂಭವಾಯಿತು. ಆದರೆ ನಂತರ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದ ನಂತರ ಅದನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ನಂತರ ಉಳಿದ ಸೀಸನ್ ಅನ್ನು ಯುಎಇಯಲ್ಲಿ ಆಯೋಜಿಸಲಾಯಿತು. ಈ ಬಾರಿ ದೇಶದಲ್ಲಿ ಪರಿಸ್ಥಿತಿ ಬಹುತೇಕ ಸಹಜವಾಗಿರುವ ಕಾರಣ ಸಂಪೂರ್ಣವಾಗಿ ಭಾರತದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಟೂರ್ನಿಯ ಗುಂಪು ಹಂತದ ಪಂದ್ಯಗಳು ಮುಂಬೈನ ಮೂರು ಮತ್ತು ಪುಣೆಯ ಒಂದು ಮೈದಾನದಲ್ಲಿ ನಡೆಯುತ್ತಿವೆ. ಆದರೆ, ಇತ್ತೀಚಿನ ಪ್ರಕರಣದಿಂದಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆತಂಕ ಕೊಂಚ ಹೆಚ್ಚಿದೆ.

ಆರ್​ಸಿಬಿ ವಿರುದ್ಧದ ಪಂದ್ಯ ರದ್ದಾಗುತ್ತಾ? ಡೆಲ್ಲಿ ಕ್ಯಾಪಿಟಲ್ಸ್ ತಂಡ ಶನಿವಾರ ತನ್ನ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಆದರೆ, ಸದ್ಯಕ್ಕೆ ಆ ಪಂದ್ಯದ ಮೇಲೆ ಯಾವುದೇ ಪರಿಣಾಮ ಬೀರುವಂತೆ ಕಾಣುತ್ತಿಲ್ಲ. ಹೇಗಾದರೂ, ಈ ಬಾರಿ ಐಪಿಎಲ್‌ನಲ್ಲಿ ಕೊರೊನಾ ಸೋಂಕಿನ ಸಂದರ್ಭದಲ್ಲಿ, ಪಂದ್ಯಗಳ ನಡವಳಿಕೆಯ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ, ತಂಡದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಂಡುಬಂದರೆ, ಇದರಿಂದಾಗಿ 12 ಆಟಗಾರರೊಂದಿಗೆ ಪಂದ್ಯಕ್ಕೆ ತಯಾರಿ ನಡೆಸಲು ಸಾಧ್ಯವಾಗದಿದ್ದರೆ, ಆ ಸಂದರ್ಭದಲ್ಲಿ ಪಂದ್ಯವನ್ನು ಮುಂದೂಡಲಾಗುತ್ತದೆ.

ಆದಾಗ್ಯೂ, ಪಂದ್ಯವನ್ನು ಮುಂದೂಡಿದ ನಂತರ ಐಪಿಎಲ್ ಸಮಿತಿಯು ಮುಂದಿನ ದಿನಾಂಕದಂದು ಮತ್ತೊಮ್ಮೆ ಪಂದ್ಯವನ್ನು ಆಯೋಜಿಸಲು ಪ್ರಯತ್ನಿಸುತ್ತದೆ. ಇದು ಸಾಧ್ಯವಾಗದಿದ್ದರೆ, ಈ ವಿಷಯವನ್ನು ತಾಂತ್ರಿಕ ಸಮಿತಿಗೆ ಹಸ್ತಾಂತರಿಸುತ್ತದೆ. ಅದು ಪಂದ್ಯದ ಮರುಸಂಘಟನೆಯ ಬಗ್ಗೆ ಅಂತಿಮ ನಿರ್ಧಾರವನ್ನು ನೀಡುತ್ತದೆ. ಇದು ಪ್ರತಿ ತಂಡಕ್ಕೂ ಮಾನ್ಯವಾಗಿರುತ್ತದೆ. ಸದ್ಯ ಪರಿಸ್ಥಿತಿ ಯಥಾಸ್ಥಿತಿಯಲ್ಲಿದ್ದು, ಒಂದೊಂದು ಪ್ರಕರಣ ಕಂಡು ಬಂದ ಬಳಿಕ ಆಡಳಿತ ಮಂಡಳಿ ಹೆಚ್ಚು ಎಚ್ಚರಿಕೆ ವಹಿಸಲಿದೆ.

ಇದನ್ನೂ ಓದಿ:IPL 2022: ಹೈದರಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೆಕೆಆರ್ ತಂಡಕ್ಕೆ ಆಘಾತ; ಐಪಿಎಲ್​ನಿಂದ ತಂಡದ ಸ್ಟಾರ್ ಬೌಲರ್ ಔಟ್!

Published On - 5:37 pm, Fri, 15 April 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!