AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು…ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್

IPL 2022: 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು...ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್
Dhanashree Verma
TV9 Web
| Edited By: |

Updated on: Apr 06, 2022 | 6:18 PM

Share

ಐಪಿಎಲ್​ನ 13ನೇ (IPL 2022) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಜಯ ಸಾಧಿಸಿದೆ. ಆರ್​ಆರ್ ತಂಡ ನೀಡಿದ 170 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ 19.1 ಓವರ್​ನಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಗೆಲುವು ತನ್ನದಾಗಿಸಿಕೊಂಡಿತು. ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೂ ಆರ್​ಸಿಬಿ ತಂಡದ ಮಾಜಿ ಸ್ಪಿನ್ನರ್ ಯಜುವೇಂದ್ರ ಚಹಲ್ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

ಇತ್ತ ಚಹಲ್ ವಿಕೆಟ್​ ಪಡೆಯುತ್ತಿದ್ದಂತೆ ಅತ್ತ ಪತ್ನ ಧನಶ್ರೀ ವರ್ಮಾ ಮೈಮರೆತು ಸಂಭ್ರಮಿಸಿದ್ದರು. ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿದ್ದ ಚಹಲ್ ಮರು ಎಸೆತದಲ್ಲೇ ಡೇವಿಡ್ ವಿಲ್ಲಿಯನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ಈ ಖುಷಿಯಲ್ಲಿ ಗ್ಯಾಲರಿಯಲ್ಲಿ ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಕುಣಿದು ಕುಪ್ಪಳಿಸುತ್ತಿರುವ ವಿಡಿಯೋವನ್ನು ಕ್ಯಾಮೆರಾಮ್ಯಾನ್ ಸೆರೆಹಿಡಿದಿದ್ದರು.

ಇದೀಗ ಧನಶ್ರೀ ವರ್ಮಾ ಅವರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ನಾನಾ ಕಾಮೆಂಟ್​ಗಳು ಮೂಡಿಬಂದಿದ್ದು, ಅನೇಕರು ಹೆಂಡತಿ ಅಂದರೆ ಹಿಂಗಿರಬೇಕು ಎಂದಿದ್ದಾರೆ. ಇನ್ನೊಬ್ಬರು ಆರ್​ಸಿಬಿ ಕೈಬಿಟ್ಟಿದ್ದಕ್ಕೆ ಚಹಲ್​ಗಿಂತ ಕೋಪ ಧನಶ್ರೀ ವರ್ಮಾಗೆ ಇರುವಂತಿದೆ. ಅದಕ್ಕೆ ಈ ಸಂಭ್ರಮ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಆರ್​ಸಿಬಿ ವಿರುದ್ದವೇ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಯುಜುವೇಂದ್ರ ಚಹಲ್ ಮಿಂಚಿದ್ದಾರೆ. ಅತ್ತ ಚಹಲ್​ ಅವರನ್ನು ಗ್ಯಾಲರಿಯಲ್ಲಿ ಕೂತು, ಕುಣಿದು ಕುಪ್ಪಳಿಸಿ ಬೆಂಬಲಿಸುವ ಮೂಲಕ ಧನಶ್ರೀ ವರ್ಮಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

(IPL 2022: Dhanashree Verma’s crazy celebration goes VIRAL)

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ