AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು…ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್

IPL 2022: 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು...ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್
Dhanashree Verma
TV9 Web
| Edited By: |

Updated on: Apr 06, 2022 | 6:18 PM

Share

ಐಪಿಎಲ್​ನ 13ನೇ (IPL 2022) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಜಯ ಸಾಧಿಸಿದೆ. ಆರ್​ಆರ್ ತಂಡ ನೀಡಿದ 170 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ 19.1 ಓವರ್​ನಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಗೆಲುವು ತನ್ನದಾಗಿಸಿಕೊಂಡಿತು. ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೂ ಆರ್​ಸಿಬಿ ತಂಡದ ಮಾಜಿ ಸ್ಪಿನ್ನರ್ ಯಜುವೇಂದ್ರ ಚಹಲ್ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

ಇತ್ತ ಚಹಲ್ ವಿಕೆಟ್​ ಪಡೆಯುತ್ತಿದ್ದಂತೆ ಅತ್ತ ಪತ್ನ ಧನಶ್ರೀ ವರ್ಮಾ ಮೈಮರೆತು ಸಂಭ್ರಮಿಸಿದ್ದರು. ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿದ್ದ ಚಹಲ್ ಮರು ಎಸೆತದಲ್ಲೇ ಡೇವಿಡ್ ವಿಲ್ಲಿಯನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ಈ ಖುಷಿಯಲ್ಲಿ ಗ್ಯಾಲರಿಯಲ್ಲಿ ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಕುಣಿದು ಕುಪ್ಪಳಿಸುತ್ತಿರುವ ವಿಡಿಯೋವನ್ನು ಕ್ಯಾಮೆರಾಮ್ಯಾನ್ ಸೆರೆಹಿಡಿದಿದ್ದರು.

ಇದೀಗ ಧನಶ್ರೀ ವರ್ಮಾ ಅವರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ನಾನಾ ಕಾಮೆಂಟ್​ಗಳು ಮೂಡಿಬಂದಿದ್ದು, ಅನೇಕರು ಹೆಂಡತಿ ಅಂದರೆ ಹಿಂಗಿರಬೇಕು ಎಂದಿದ್ದಾರೆ. ಇನ್ನೊಬ್ಬರು ಆರ್​ಸಿಬಿ ಕೈಬಿಟ್ಟಿದ್ದಕ್ಕೆ ಚಹಲ್​ಗಿಂತ ಕೋಪ ಧನಶ್ರೀ ವರ್ಮಾಗೆ ಇರುವಂತಿದೆ. ಅದಕ್ಕೆ ಈ ಸಂಭ್ರಮ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಆರ್​ಸಿಬಿ ವಿರುದ್ದವೇ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಯುಜುವೇಂದ್ರ ಚಹಲ್ ಮಿಂಚಿದ್ದಾರೆ. ಅತ್ತ ಚಹಲ್​ ಅವರನ್ನು ಗ್ಯಾಲರಿಯಲ್ಲಿ ಕೂತು, ಕುಣಿದು ಕುಪ್ಪಳಿಸಿ ಬೆಂಬಲಿಸುವ ಮೂಲಕ ಧನಶ್ರೀ ವರ್ಮಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

(IPL 2022: Dhanashree Verma’s crazy celebration goes VIRAL)

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'