AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು…ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್

IPL 2022: 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

IPL 2022: ಸಿಕ್ತು..ಸಿಕ್ತು..ವಿಕೆಟ್ ಸಿಕ್ಕೇ ಬಿಡ್ತು...ಚಹಲ್ ಹೆಂಡ್ತಿ ಕುಣಿದು ಕುಪ್ಪಳಿಸಿದ ವಿಡಿಯೋ ಫುಲ್ ವೈರಲ್
Dhanashree Verma
TV9 Web
| Edited By: |

Updated on: Apr 06, 2022 | 6:18 PM

Share

ಐಪಿಎಲ್​ನ 13ನೇ (IPL 2022) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಜಯ ಸಾಧಿಸಿದೆ. ಆರ್​ಆರ್ ತಂಡ ನೀಡಿದ 170 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಆರ್​ಸಿಬಿ 19.1 ಓವರ್​ನಲ್ಲಿ ಗುರಿ ಮುಟ್ಟುವ ಮೂಲಕ 4 ವಿಕೆಟ್​ಗಳ ಗೆಲುವು ತನ್ನದಾಗಿಸಿಕೊಂಡಿತು. ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೂ ಆರ್​ಸಿಬಿ ತಂಡದ ಮಾಜಿ ಸ್ಪಿನ್ನರ್ ಯಜುವೇಂದ್ರ ಚಹಲ್ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. 4 ಓವರ್​ ಬೌಲಿಂಗ್ ಮಾಡಿದ್ದ ಚಹಲ್ ಕೇವಲ 15 ರನ್​ ನೀಡಿ 2 ವಿಕೆಟ್ ಪಡೆದಿದ್ದರು. ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿ ಮಿಂಚಿದ್ದರು.

ಇತ್ತ ಚಹಲ್ ವಿಕೆಟ್​ ಪಡೆಯುತ್ತಿದ್ದಂತೆ ಅತ್ತ ಪತ್ನ ಧನಶ್ರೀ ವರ್ಮಾ ಮೈಮರೆತು ಸಂಭ್ರಮಿಸಿದ್ದರು. ವಿರಾಟ್ ಕೊಹ್ಲಿಯನ್ನು ರನೌಟ್ ಮಾಡಿದ್ದ ಚಹಲ್ ಮರು ಎಸೆತದಲ್ಲೇ ಡೇವಿಡ್ ವಿಲ್ಲಿಯನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ಈ ಖುಷಿಯಲ್ಲಿ ಗ್ಯಾಲರಿಯಲ್ಲಿ ಚಹಲ್ ಅವರ ಪತ್ನಿ ಧನಶ್ರೀ ವರ್ಮಾ ಕುಣಿದು ಕುಪ್ಪಳಿಸುತ್ತಿರುವ ವಿಡಿಯೋವನ್ನು ಕ್ಯಾಮೆರಾಮ್ಯಾನ್ ಸೆರೆಹಿಡಿದಿದ್ದರು.

ಇದೀಗ ಧನಶ್ರೀ ವರ್ಮಾ ಅವರ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ನಾನಾ ಕಾಮೆಂಟ್​ಗಳು ಮೂಡಿಬಂದಿದ್ದು, ಅನೇಕರು ಹೆಂಡತಿ ಅಂದರೆ ಹಿಂಗಿರಬೇಕು ಎಂದಿದ್ದಾರೆ. ಇನ್ನೊಬ್ಬರು ಆರ್​ಸಿಬಿ ಕೈಬಿಟ್ಟಿದ್ದಕ್ಕೆ ಚಹಲ್​ಗಿಂತ ಕೋಪ ಧನಶ್ರೀ ವರ್ಮಾಗೆ ಇರುವಂತಿದೆ. ಅದಕ್ಕೆ ಈ ಸಂಭ್ರಮ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಆರ್​ಸಿಬಿ ವಿರುದ್ದವೇ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಯುಜುವೇಂದ್ರ ಚಹಲ್ ಮಿಂಚಿದ್ದಾರೆ. ಅತ್ತ ಚಹಲ್​ ಅವರನ್ನು ಗ್ಯಾಲರಿಯಲ್ಲಿ ಕೂತು, ಕುಣಿದು ಕುಪ್ಪಳಿಸಿ ಬೆಂಬಲಿಸುವ ಮೂಲಕ ಧನಶ್ರೀ ವರ್ಮಾ ಕೂಡ ಎಲ್ಲರ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: IPL 2022: ಐಪಿಎಲ್​ನ ಮೊದಲ ವಾರದಲ್ಲಿ ನಿರ್ಮಾಣವಾದ ದಾಖಲೆಗಳಿವು..!

ಇದನ್ನೂ ಓದಿ: KL Rahul: ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಸಾಧನೆ ಮಾಡಿದ ಕೆಎಲ್ ರಾಹುಲ್

(IPL 2022: Dhanashree Verma’s crazy celebration goes VIRAL)

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ