AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂದಿನ ಗುರಿ ಬಗ್ಗೆ ಮನಬಿಚ್ಚಿ ಮಾತನಾಡಿದ DK

IPL 2022: ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ.

IPL 2022: ಮುಂದಿನ ಗುರಿ ಬಗ್ಗೆ ಮನಬಿಚ್ಚಿ ಮಾತನಾಡಿದ DK
Dinesh Karthik
TV9 Web
| Edited By: |

Updated on:Apr 18, 2022 | 3:01 PM

Share

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ಗೆಲ್ಲುವ ಮೂಲಕ ಆರ್​ಸಿಬಿ ಮತ್ತೊಂದು ಗೆಲುವನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವಿನ ರೂವಾರಿ ದಿನೇಶ್ ಕಾರ್ತಿಕ್. ಏಕೆಂದರೆ ಕೇವಲ 34 ಎಸೆತಗಳಲ್ಲಿ 5 ಸಿಕ್ಸ್ 5 ಫೋರ್​ನೊಂದಿಗೆ ಡಿಕೆ 66 ರನ್ ಬಾರಿಸಿದ್ದರು. ಅಂತಿಮ ಹಂತದಲ್ಲಿ ಮೂಡಿಬಂದ ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದಾಗಿ ಆರ್​ಸಿಬಿ ಡೆಲ್ಲಿ ವಿರುದ್ದ 16 ರನ್​ಗಳಿಂದ ಜಯ ಸಾಧಿಸಿತು. ಈ ಬಗ್ಗೆ ಮಾತನಾಡಿದ ಡಿಕೆ, ತಂಡದ ಪ್ರದರ್ಶನಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾನು ತುಂಬಾ ಕಠಿಣ ಅಭ್ಯಾಸ ಮಾಡುತ್ತಿದ್ದೇನೆ. ಅದರ ಪ್ರತಿಫಲ ಜಯ ರೂಪದಲ್ಲಿ ಸಿಗುತ್ತಿದೆ ಎಂದಿದ್ದಾರೆ.

ಆದರೆ ನನ್ನ ಗುರಿ ಇರುವುದು ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವುದು. ನಾನು ಭಾರತ ತಂಡದಲ್ಲಿ ಮತ್ತೆ ಆಡ ಬೇಕೆಂದು ಬಯಸಿದ್ದೇನೆ. ಅದಕ್ಕಾಗಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇನೆ. ಏಕೆಂದರೆ ಟೀಮ್ ಇಂಡಿಯಾದಲ್ಲಿ ನಾನು ಇದುವರೆಗೆ ಏನೂ ಮಾಡಿಲ್ಲ. ಹೀಗಾಗಿ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಬೇಕೆಂದು ಬಯಸುತ್ತಿದ್ದೇನೆ. ಇದಕ್ಕಾಗಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದೇನೆ. ಇದರಿಂದ ನನ್ನ ಬ್ಯಾಟಿಂಗ್ ಕೂಡ ಉತ್ತಮಗೊಂಡಿದೆ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಈ ಮೂಲಕ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ ಡಿಕೆ. 36 ವರ್ಷದ ದಿನೇಶ್ ಕಾರ್ತಿಕ್​ಗೆ ಟೀಮ್ ಇಂಡಿಯಾದಲ್ಲಿ ಮತ್ತೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅನೂಜ್ ರಾವತ್ ಶೂನ್ಯಕ್ಕೆ ಔಟಾದರೆ, ಫಾಫ್ ಡುಪ್ಲೆಸಿಸ್​ 8 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ರನೌಟ್ ಆಗಿ ಹೊರನಡೆದಿದ್ದರು. ಈ ಹಂತದಲ್ಲಿ ಅಬ್ಬರಿಸಿದ ಗ್ಲೆನ್ ಮ್ಯಾಕ್ಸ್​ವೆಲ್ 34 ಎಸೆತಗಳಲ್ಲಿ 55 ರನ್ ಬಾರಿಸಿ ನಿರ್ಗಮಿಸಿದರು.

ತಂಡದ ಮೊತ್ತ 95 ಕ್ಕೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್​ಸಿಬಿಗೆ ಈ ಹಂತದಲ್ಲಿ ಆಸರೆಯಾಗಿದ್ದು ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅಹ್ಮದ್. 6ನೇ ವಿಕೆಟ್​ಗೆ ಅತ್ಯುತ್ತಮ ಜೊತೆಯಾಟವಾಡಿದ ಈ ಜೋಡಿ ತಂಡದ ರನ್​ಗತಿಯನ್ನು ಹೆಚ್ಚಿಸಿದರು. ಅದರಲ್ಲೂ ದಿನೇಶ್ ಕಾರ್ತಿಕ್ ಅಕ್ಷರಶಃ ಅಬ್ಬರಿಸಿದರು. ಮುಸ್ತಫಿಜುರ್ ರೆಹಮಾನ್ ಎಸೆದ 18ನೇ ಓವರ್​ನಲ್ಲಿ 28 ರನ್​ ಬಾರಿಸುವ ಮೂಲಕ ಡಿಕೆ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಅಂತಿಮ ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಶಹಬಾಜ್ ಹಾಗೂ ದಿನೇಶ್ ಕಾರ್ತಿಕ್ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 189 ಕ್ಕೆ ತಂದು ನಿಲ್ಲಿಸಿದರು.

190 ರನ್​ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 38 ಎಸೆತಗಳಲ್ಲಿ 66 ರನ್ ಬಾರಿಸಿ ಅಬ್ಬರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ 17 ಎಸೆತಗಳಲ್ಲಿ 34 ರನ್ ಬಾರಿಸಿ ರಿಷಭ್ ಪಂತ್ ಪಂದ್ಯ ಗೆಲ್ಲಿಸುವ ಭರವಸೆಯನ್ನು ಹುಟ್ಟುಹಾಕಿದ್ದರು. ಆದರೆ ಪಂತ್ ಔಟ್ ಆಗುತ್ತಿದ್ದಂತೆ ಡೆಲ್ಲಿ ತಂಡವು ದಿಢೀರ್ ಕುಸಿತಕ್ಕೊಳಗಾಯಿತು. ತಂಡದ ಪರ ಪೃಥ್ವಿ ಶಾ 16, ಮಿಚೆಲ್ ಮಾರ್ಷ್ 14, ರೋವ್ಮನ್ ಪೊವೆಲ್ 0, ಲಲಿತ್ ಯಾದವ್ 1 ವಿಫಲರಾಗಿದ್ದರು. ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ 173 ರನ್​ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 16 ರನ್​ಗಳಿಂದ ಸೋಲೋಪ್ಪಿಕೊಂಡಿತು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 2:59 pm, Mon, 18 April 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?