AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದ ಹೊಸ ನಾಯಕ ಇವರೇ..!

RCB's new captain: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹ್ಯಾಝಲ್​ವುಡ್.

IPL 2022: RCB ತಂಡದ ಹೊಸ ನಾಯಕ ಇವರೇ..!
RCB's new captain
TV9 Web
| Edited By: |

Updated on:Mar 12, 2022 | 4:49 PM

Share

ಐಪಿಎಲ್ ಸೀಸನ್​ 15 ಗಾಗಿ (IPL 2022) ರಾಯಲ್ ಚಾಲೆಂಜರ್ಸ್ ಬೆಂಗಳೂರು (IPL 2022 RCB Captain) ತಂಡದ ಹೊಸ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆರ್​ಸಿಬಿ ನಾಯಕರುಗಳ ಪಟ್ಟಿಯಲ್ಲಿ ನಾಲ್ವರು ಆಟಗಾರರ ಹೆಸರುಗಳಿದ್ದವು. ಈ ನಾಲ್ವರು ಕೂಡ ಈ ಹಿಂದೆ ನಾಯಕರಾಗಿ ತಂಡಗಳನ್ನು ಮುನ್ನಡೆಸಿದ ಅನುಭವ ಕೂಡ ಹೊಂದಿದ್ದರು. ಆರ್​ಸಿಬಿ ಕ್ಯಾಪ್ಟನ್ಸ್​ ಪಟ್ಟಿಯಲ್ಲಿದ್ದ ಹೆಸರೆಂದರೆ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್ ಹಾಗೂ ವಿರಾಟ್ ಕೊಹ್ಲಿ. ಇದೀಗ ಅಂತಿಮವಾಗಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ (Faf du Plessis) ಅವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಅದರಂತೆ ಐಪಿಎಲ್​ ಸೀಸನ್ 15 ನಲ್ಲಿ ಆರ್​ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಲಿದ್ದಾರೆ.

ಈ ಹಿಂದೆಯೇ ಫಾಫ್ ಡುಪ್ಲೆಸಿಸ್ ಹೆಸರು ಜೋರಾಗಿ ಕೇಳಿ ಬಂದಿತ್ತು. ಏಕೆಂದರೆ ವಿರಾಟ್ ಕೊಹ್ಲಿ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಾಯಕತ್ವದ ಅನುಭವ ಹೊಂದಿರುವ ಏಕೈಕ ಆಯ್ಕೆ ಫಾಫ್ ಡುಪ್ಲೆಸಿಸ್ ಮಾತ್ರ. ಇನ್-ಫಾರ್ಮ್ ಓಪನರ್ ಕೂಡ ಆಗಿರುವ ಫಾಫ್ ಡು ಪ್ಲೆಸಿಸ್ ಆರ್​ಸಿಬಿ ಮುಂದಿರುವ ಅತ್ಯುತ್ತಮ ಆಯ್ಕೆಯಾಗಿತ್ತು. ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರುವ ಡುಪ್ಲೆಸಿಸ್ ಐಪಿಎಲ್ 2022 ರ ಸಂಪೂರ್ಣ ಅವಧಿಗೆ ಲಭ್ಯವಿರುತ್ತಾರೆ.

ಅಷ್ಟೇ ಅಲ್ಲದೆ ಡು ಪ್ಲೆಸಿಸ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವದ ಅನುಭವವನ್ನು ಹೊಂದಿರುವ ಬಗ್ಗೆ ಇತರಿಗೆ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ನಿರ್ದೇಶಕ ಮೈಕ್ ಹೆಸನ್ ವಿವರಿಸಿದ್ದರು. ಹೀಗಾಗಿ ನಾವು ಅವರನ್ನು ಹರಾಜಿನಲ್ಲಿ ಖರೀದಿಸಬೇಕಾಗಿದೆ. ಇದಕ್ಕಾಗಿ ದೊಡ್ಡ ಮೊತ್ತವೊಂದನ್ನು ಫಾಫ್ ಡುಪ್ಲೆಸಿಸ್​ಗಾಗಿ ತೆಗೆದಿಡಬೇಕಾಗುತ್ತದೆ ಎಂದು ಮೈಕ್ ಹೆಸನ್ ಮೆಗಾ ಹರಾಜಿಗೂ ಮುನ್ನ ನಡೆದ ಚರ್ಚೆಯಲ್ಲಿ ತಮ್ಮ ಪ್ಲ್ಯಾನ್ ಅನ್ನು ಮುಂದಿಟ್ಟಿದ್ದರು. ಅದರಂತೆ ಮೆಗಾ ಹರಾಜು ಮೂಲಕ ಫಾಫ್ ಡುಪ್ಲೆಸಿಸ್​ ಅವರನ್ನು ಆರ್​ಸಿಬಿ ಬರೋಬ್ಬರಿ 7 ಕೋಟಿ ರೂ. ನೀಡಿ ಖರೀದಿಸಿತು. ಅದರಂತೆ ಇದೀಗ ಫಾಫ್ ಡುಪ್ಲೆಸಿಸ್​ ಅವರಿಗೆ ಆರ್​ಸಿಬಿ ನಾಯಕ ಪಟ್ಟ ಒಲಿದಿದೆ ಎಂದು ತಿಳಿದು ಬಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹ್ಯಾಝಲ್​ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್ ಪ್ರಭುದೇಸ್, ಚಮಾ ಮಿಲಿಂದ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಲವ್​ನೀತ್ ಸಿಸೋಡಿಯಾ, ಡೇವಿಡ್ ವಿಲ್ಲಿ

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: Faf du Plessis is likely to be named as RCB’s new captain)

Published On - 4:38 pm, Sat, 12 March 22

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?