AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ನೋ ಬಾಲ್ ವಿವಾದದ ನಡುವೆ, ಕುಲ್ಚಾ ಜೋಡಿಯದ್ದು ಬೇರೆಯದ್ದೇ ಜಗಳ

IPL 2022: ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಕೂಡ ಮೈದಾನಕ್ಕೆ ಬಂದು ಅಂಪೈರ್‌ಗಳ ಜೊತೆ ಮಾತನಾಡಿದ್ದರು. ಮೈದಾನದಲ್ಲಿ ಕಂಡು ಬಂದ ಈ ಅಹಿತಕರ ಘಟನೆಗಾಗಿ ರಿಷಭ್ ಪಂತ್​ಗೆ ಪಂದ್ಯದ ಶುಲ್ಕದ 100% ದಂಡವನ್ನು ವಿಧಿಸಲಾಗಿದೆ.

IPL 2022: ನೋ ಬಾಲ್ ವಿವಾದದ ನಡುವೆ, ಕುಲ್ಚಾ ಜೋಡಿಯದ್ದು ಬೇರೆಯದ್ದೇ ಜಗಳ
IPL 2022
TV9 Web
| Edited By: |

Updated on:Apr 23, 2022 | 4:35 PM

Share

ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಐಪಿಎಲ್ 2022 ರ 34 ನೇ ಪಂದ್ಯದ ಕೊನೆಯ ಓವರ್‌ನಲ್ಲಿ ನಾಟಕೀಯ ತಿರುವುಗಳಿಗೆ ಸಾಕ್ಷಿಯಾಗಿತ್ತು.ಕೊನೆಯ ಓವರ್‌ನ ಮೂರನೇ ಎಸೆತವನ್ನು ಅಂಪೈರ್ ನೋ ಬಾಲ್ ಎಂದು ಘೋಷಿಸದಿರುವುದಕ್ಕೆ ಡಗೌಟ್‌ನಲ್ಲಿದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಕೋಪಗೊಂಡಿದ್ದರು. ಅಲ್ಲದೆ ತಮ್ಮ ಬ್ಯಾಟ್ಸ್‌ಮನ್‌ಗಳಾದ ರೋವ್‌ಮನ್ ಪೊವೆಲ್ ಮತ್ತು ಕುಲ್ದೀಪ್ ಯಾದವ್ ಅವರನ್ನು ಪಂದ್ಯ ನಿಲ್ಲಿಸಿ ಹಿಂತಿರುಗಲು ಮನವಿ ಮಾಡಿದ್ದರು. ಆದರೆ ಅತ್ತ ಕುಲ್ದೀಪ್ ಯಾದವ್ ಮಾತ್ರ ಮೈದಾನದಲ್ಲೇ ಮೈಮರೆತಿದ್ದರು.

ಹೌದು, ಅಂಪೈರ್ ನೋಬಾಲ್ ನೀಡದಿರುವುದರಿಂದ ಕುಪಿತಗೊಂಡಿದ್ದ ಕುಲ್ದೀಪ್ ಯಾದವ್ ಲೆಗ್ ಅಂಪೈರ್ ವಿರುದ್ದ ವಾದಕ್ಕಿಳಿದಿದ್ದರು. ಈ ವೇಳೆ ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ಯುಜ್ವೇಂದ್ರ ಚಹಲ್ ಕುಲ್ದೀಪ್​ರನ್ನು ಸಮಾಧಾನಪಡಿಸಲು ಮುಂದಾದರು. ಆದರೆ ಕಲ್ದೀಪ್ ಮಾತು ಕೇಳದಿದ್ದಾಗ, ಚಹಲ್ ಕೂಡ ಜಗಳಕ್ಕಿಳಿದರು. ಇಬ್ಬರು ಗೆಳೆಯರಾಗಿರುವ ಕಾರಣ ಇಬ್ಬರ ನಡುವಣ ಈ ಸ್ನೇಹದ ಕಿತ್ತಾಟ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದ ಕೊನೆಯ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಗೆಲುವಿಗೆ 36 ರನ್‌ಗಳ ಅಗತ್ಯವಿತ್ತು. ಪೊವೆಲ್ ಮೊದಲ 3 ಎಸೆತಗಳಲ್ಲಿ ಸತತ 3 ಸಿಕ್ಸರ್ ಬಾರಿಸಿ ಡೆಲ್ಲಿಯ ಭರವಸೆಯನ್ನು ಹೆಚ್ಚಿಸಿದ್ದರು. ಆದರೆ ಮೂರನೇ ಎಸೆತವನ್ನು ನೋಬಾಲ್​ಗೆ ಅಪೀಲ್ ಮಾಡಲಾಯಿತು. ಚೆಂಡು ಸೊಂಟದ ಮೇಲಿದ್ದರೂ ಅಂಪೈರ್ ಅದನ್ನು ನೋ ಬಾಲ್ ನೀಡಿರಲಿಲ್ಲ. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆಕ್ರೋಶಗೊಂಡಿದ್ದರು.

ಅದೇ ಸಮಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಸಹಾಯಕ ಕೋಚ್ ಪ್ರವೀಣ್ ಆಮ್ರೆ ಕೂಡ ಮೈದಾನಕ್ಕೆ ಬಂದು ಅಂಪೈರ್‌ಗಳ ಜೊತೆ ಮಾತನಾಡಿದ್ದರು. ಮೈದಾನದಲ್ಲಿ ಕಂಡು ಬಂದ ಈ ಅಹಿತಕರ ಘಟನೆಗಾಗಿ ರಿಷಭ್ ಪಂತ್​ಗೆ ಪಂದ್ಯದ ಶುಲ್ಕದ 100% ದಂಡವನ್ನು ವಿಧಿಸಲಾಗಿದೆ. ಹಾಗೆಯೇ ಆಮ್ರೆಯನ್ನು ಒಂದು ಪಂದ್ಯಕ್ಕೆ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Published On - 3:56 pm, Sat, 23 April 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?