AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Final: ಫೈನಲ್ ಪಂದ್ಯದಲ್ಲಿ ಕೈಕೊಡುವ ಹಾರ್ದಿಕ್ ಪಾಂಡ್ಯ..!

IPL 2022 Final: ಉಭಯ ತಂಡಗಳು ಈ ಬಾರಿ ಎರಡು ಪಂದ್ಯಗಳನ್ನು ಆಡಿದ್ದು, ಈ ವೇಳೆ ರಾಜಸ್ಥಾನ್ ರಾಯಲ್ಸ್ ವಿರುದ್ದ ಗುಜರಾತ್ ಟೈಟಾನ್ಸ್ ಮೇಲುಗೈ ಸಾಧಿಸಿದೆ. ಲೀಗ್ ಹಂತದಲ್ಲಿ ಆಡಿದ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ದ ಗುಜರಾತ್ ಟೈಟಾನ್ಸ್ 37 ರನ್​ಗಳಿಂದ ಜಯ ಸಾಧಿಸಿತ್ತು. ಇನ್ನು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಗೆಲುವು ದಾಖಲಿಸಿತ್ತು.

IPL 2022 Final: ಫೈನಲ್ ಪಂದ್ಯದಲ್ಲಿ ಕೈಕೊಡುವ ಹಾರ್ದಿಕ್ ಪಾಂಡ್ಯ..!
Hardik Pandya
TV9 Web
| Edited By: |

Updated on: May 29, 2022 | 5:04 PM

Share

IPL 2022 Final: ಐಪಿಎಲ್ ಸೀಸನ್ 15 ಫೈನಲ್ ಪಂದ್ಯದಲ್ಲಿ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜಾಗಿ ನಿಂತಿದೆ. ತವರಿನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಗುಜರಾತ್ ಟೈಟಾನ್ಸ್​ ಪರ ನಾಯಕನಾಗಿ ಆಡಲು ಹಾರ್ದಿಕ್ ಪಾಂಡ್ಯ ಸಿದ್ಧರಾಗಿದ್ದಾರೆ. ಪ್ರಸಕ್ತ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್​ ನಡುವೆ 2 ಪಂದ್ಯಗಳು ನಡೆದಿದ್ದು, ಎರಡರಲ್ಲೂ ಗುಜರಾತ್ ಗೆದ್ದಿದೆ. ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಗುಜರಾತ್ ಟೈಟಾನ್ಸ್ ಗುರುತಿಸಿಕೊಂಡಿದೆ. ವಿಶೇಷ ಎಂದರೆ ಇದು ಹಾರ್ದಿಕ್ ಪಾಂಡ್ಯ ಅವರಿಗೆ 5ನೇ ಫೈನಲ್ ಪಂದ್ಯ.

ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಪರ 4 ಬಾರಿ ಪ್ರಶಸ್ತಿ ಸುತ್ತಿನಲ್ಲಿ ಆಡಿ ಗೆಲುವಿನ ರುಚಿ ನೋಡಿದ್ದರು. ಅಂದರೆ ಫೈನಲ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸೋಲನ್ನು ನೋಡಿಲ್ಲ. ಆದರೆ ಈ ವೇಳೆ ಪಾಂಡ್ಯ ಮಿಂಚಿಲ್ಲ ಎಂಬುದು ವಿಶೇಷ. ಒಟ್ಟಾರೆ ಐಪಿಎಲ್‌ನಲ್ಲಿ ಪಾಂಡ್ಯ 1929 ರನ್ ಗಳಿಸಿದ್ದಾರೆ. ಅಂದರೆ ಇಂದು 71 ರನ್ ಗಳಿಸಿದರೆ ಅವರ 2 ಸಾವಿರ ರನ್ ಕೂಡ ಪೂರ್ಣಗೊಳ್ಳುತ್ತದೆ. ಇನ್ನು ಪ್ರಸಕ್ತ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಅತಿ ಹೆಚ್ಚು ರನ್ ಗಳಿಸಿದ್ದು ಹಾರ್ದಿಕ್ ಪಾಂಡ್ಯ. ಇದಾಗ್ಯೂ ಗುಜರಾತ್ ಟೈಟಾನ್ಸ್‌ಗೆ ಇದೀಗ ಆತಂಕ ಎದುರಾಗಿದೆ.

ಏಕೆಂದರೆ ಹಾರ್ದಿಕ್ ಪಾಂಡ್ಯ ಆಡಿರುವ 4 ಫೈನಲ್ ಪಂದ್ಯದಲ್ಲೂ ವಿಫಲರಾಗಿದ್ದಾರೆ. ಈ ಬಾರಿ ಗುಜರಾತ್ ಟೈಟಾನ್ಸ್ ತಂಡದ ಪರ 453 ರನ್​ ಬಾರಿಸಿರುವ ಪಾಂಡ್ಯ ತಂಡದ ಬ್ಯಾಟಿಂಗ್​ ವಿಭಾಗದ ಆಧಾರಸ್ತಂಭ. ಆದರೆ ಪಾಂಡ್ಯ ನಿರ್ಣಾಯಕ ಪಂದ್ಯದಲ್ಲಿ ಎಡವಿರುವುದಕ್ಕೆ ಇತಿಹಾಸವೇ ಸಾಕ್ಷಿ. ಏಕೆಂದರೆ ಮುಂಬೈ ಇಂಡಿಯನ್ಸ್ ಪರ ಆಡಿದ 4 ಫೈನಲ್​ ಪಂದ್ಯಗಳಲ್ಲೂ ಮಹತ್ವದ ಕೊಡುಗೆ ನೀಡುವಲ್ಲಿ ಪಾಂಡ್ಯ ವಿಫಲರಾಗಿದ್ದರು.

ಹಾರ್ದಿಕ್ ಪಾಂಡ್ಯ 2015ರಲ್ಲಿ ಮೊದಲ ಐಪಿಎಲ್ ಫೈನಲ್ ಪಂದ್ಯ ಆಡಿದ್ದರು. ಆ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ 5 ವಿಕೆಟ್‌ಗೆ 202 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಆದರೆ, ಪಾಂಡ್ಯ 2 ಎಸೆತಗಳಲ್ಲಿ ಶೂನ್ಯಕ್ಕೆ ಔಟಾಗಿದ್ದರು. ಇನ್ನು 2017 ರಲ್ಲಿ ಪಾಂಡ್ಯ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಫೈನಲ್ ಪಂದ್ಯ ಆಡಿದ್ದರು. ಈ ಪಂದ್ಯದಲ್ಲಿ ಅವರು 9 ಎಸೆತಗಳಲ್ಲಿ 10 ರನ್ ಗಳಿಸಲಷ್ಟೇ ಶಕ್ತರಾಗಿದ್ದರು.

ಐಪಿಎಲ್ 2019 ರ ಫೈನಲ್ ಪಂದ್ಯ ಮತ್ತೊಮ್ಮೆ ಮುಂಬೈ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿ ಮುಂಬೈ 8 ವಿಕೆಟ್‌ಗೆ 149 ರನ್ ಗಳಿಸಿತು. ಈ ಪಂದ್ಯದಲ್ಲೂ ಪಾಂಡ್ಯ 10 ಎಸೆತಗಳಲ್ಲಿ 16 ರನ್ ಗಳಿಸಿ ಔಟಾಗಿದ್ದರು. ಇದಾದ ಬಳಿಕ 2020 ರಲ್ಲಿ ಹಾರ್ದಿಕ್ ಪಾಂಡ್ಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಫೈನಲ್ ಪಂದ್ಯವಾಡಿದ್ದರು. ಆ ಪಂದ್ಯದಲ್ಲಿ ಪಾಂಡ್ಯ ಗಳಿಸಿದ್ದು ಕೇವಲ 3 ರನ್​ ಮಾತ್ರ.

ಅಂದರೆ ಮುಂಬೈ ಇಂಡಿಯನ್ಸ್ ಪರ 4 ಫೈನಲ್ ಪಂದ್ಯವಾಡಿರುವ ಹಾರ್ದಿಕ್ ಪಾಂಡ್ಯ ಒಟ್ಟು ಕಲೆಹಾಕಿರುವ ಮೊತ್ತ ಕೇವಲ 23 ರನ್​ಗಳು ಮಾತ್ರ. ಹೀಗಾಗಿಯೇ ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದದ ಫೈನಲ್​ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಒತ್ತಡವನ್ನು ಮೆಟ್ಟಿ ನಿಂತು ಮಿಂಚಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು