AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ನಾಯಕನಾಗಿ ಹಾರ್ದಿಕ್ ಪಾಂಡ್ಯ ಅದ್ಭುತ ಸೃಷ್ಟಿಸಲಿದ್ದಾರೆ ಎಂದ ಗ್ಯಾರಿ ಕರ್ಸ್ಟನ್

ರಶೀದ್ ಪ್ರಪಂಚದಾದ್ಯಂತ ಆಡಿದ ಅನುಭವ ಹೊಂದಿದ್ದಾರೆ. ಈ ಇಬ್ಬರೊಂದಿಗೆ ಕೆಲಸ ಮಾಡುವುದು ಖುಷಿಯ ವಿಚಾರ. ನಾನು ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.

IPL 2022: ನಾಯಕನಾಗಿ ಹಾರ್ದಿಕ್ ಪಾಂಡ್ಯ ಅದ್ಭುತ ಸೃಷ್ಟಿಸಲಿದ್ದಾರೆ ಎಂದ ಗ್ಯಾರಿ ಕರ್ಸ್ಟನ್
IPL 2022
TV9 Web
| Updated By: ಝಾಹಿರ್ ಯೂಸುಫ್|

Updated on: Jan 22, 2022 | 6:51 PM

Share

IPL 2022 ರ ಮೆಗಾ ಹರಾಜಿಗೂ ಅಹಮದಾಬಾದ್ ಫ್ರಾಂಚೈಸಿ 3 ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಹಾರ್ದಿಕ್ ಪಾಂಡ್ಯ, ರಶೀದ್ ಖಾನ್ ಹಾಗೂ ಶುಭ್​​ಮನ್ ಗಿಲ್ ಅಹಮದಾಬಾದ್ ತಂಡದ ಪಾಲಾಗಿದ್ದಾರೆ. ಇನ್ನು ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರು ಆಯ್ಕೆಯಾಗಿದ್ದು, ಇದಕ್ಕೂ ಮೊದಲು ತಂಡದ ಮೆಂಟರ್ ಆಗಿ ಮಾಜಿ ಟೀಮ್ ಇಂಡಿಯಾ ಕೋಚ್ ಗ್ಯಾರಿ ಕರ್ಸ್ಟನ್ ಅವರು ನೇಮಕವಾಗಿದ್ದರು. ಇದೀಗ ತಂಡದ ಆಯ್ಕೆ ಬಗ್ಗೆ ಖುದ್ದು ಗ್ಯಾರಿ ಕರ್ಸ್ಟನ್ ಮಾತನಾಡಿದ್ದಾರೆ. “ಹಾರ್ದಿಕ್ ಯುವಕ, ನಾಯಕತ್ವಕ್ಕೆ ಹೊಸಬ. ಅವರೊಂದಿಗೆ ಕೆಲಸ ಮಾಡುವುದು ಖುಷಿಯಾಗುತ್ತದೆ. ಅವರು ತಂಡವನ್ನು ಪ್ರೇರೇಪಿಸಲು ಕೆಲಸ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದರು.

ಹಾರ್ದಿಕ್ ಪಾಂಡ್ಯ ನಾಯಕನಾಗಿ ಕೆಲವು ಪ್ಲ್ಯಾನ್​ಗಳನ್ನು ಹೊಂದಿರಲಿದ್ದಾರೆ. ಅಂತಹ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದು ಅವರಿಗೆ ತಂಡದ ನಾಯಕನಾಗಿ ಹೊಸ ಗುರುತನ್ನು ನೀಡಲಿದೆ ಎಂದು ಕರ್ಸ್ಟನ್ ತಿಳಿಸಿದರು. ಇದೀಗ ಪಾಂಡ್ಯ ದೊಡ್ಡ ಆಟಗಾರ ಮತ್ತು ನಾನು ಕೇಳಿದಷ್ಟು ವಿಷಯಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುತ್ತಾರೆ. ಅವರು ಈ ಪಂದ್ಯಾವಳಿಯ ಮಹತ್ವವನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾಯಕತ್ವದಲ್ಲಿ ಅದ್ಭುತಗಳನ್ನು ಮಾಡಲು ಅವರು ಉತ್ಸುಕರಾಗಿದ್ದಾರೆ ಎಂದು ನಾನು ಕೇಳಿದ್ದೇನೆ. ಇದು ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಸಹಾಯ ಮಾಡುತ್ತದೆ. ಹಾಗೆಯೇ ಇದರಿಂದ ತಂಡಕ್ಕೂ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಗ್ಯಾರಿ ಕರ್ಸ್ಟನ್ ತಿಳಿಸಿದರು.

ಇನ್ನು ರಶೀದ್ ಖಾನ್ ಮತ್ತು ಶುಭಮನ್ ಗಿಲ್ ಬಗ್ಗೆಯೂ ಮಾತನಾಡಿದ ಕರ್ಸ್ಟನ್, ಈ ಇಬ್ಬರ ಆಟವನ್ನು ನೋಡಲು ಕಾತರದಿಂದ ಕಾಯುತ್ತಿದ್ದೇನೆ ಎಂದರು. ಇಬ್ಬರೂ ಅದ್ಭುತ ಸಾಧಕರು. ರಶೀದ್ ಪ್ರಪಂಚದಾದ್ಯಂತ ಆಡಿದ ಅನುಭವ ಹೊಂದಿದ್ದಾರೆ. ಈ ಇಬ್ಬರೊಂದಿಗೆ ಕೆಲಸ ಮಾಡುವುದು ಖುಷಿಯಾಗುತ್ತದೆ. ನಾನು ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.

ನಾವು ವಿಶ್ವದ ಅತ್ಯುತ್ತಮ ಲೀಗ್‌ನಲ್ಲಿ ಆಡುತ್ತಿದ್ದೇವೆ. ಅಂತಹ ಪರಿಸ್ಥಿತಿಯಲ್ಲಿ, ಈ ಆಟಗಾರರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಾರೆ. ಇದರಿಂದ ತಂಡಕ್ಕೆ ಗೆಲುವು ತಂದುಕೊಡಬಹುದು. ಪ್ರಸ್ತುತ ಸೀಸನ್ ಅಹಮದಾಬಾದ್ ಫ್ರಾಂಚೈಸಿಗೆ ಮಹತ್ವದ್ದಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಆಟಗಾರರ ಪಾತ್ರವೂ ಹೆಚ್ಚಾಗುತ್ತದೆ ಎಂದು ಗ್ಯಾರಿ ಕರ್ಸ್ಟನ್ ಹೇಳಿದರು.

ಇದನ್ನೂ ಓದಿ: ICC Mens ODI Team: ಐಸಿಸಿ ಏಕದಿನ ತಂಡ ಪ್ರಕಟ: ಟೀಮ್ ಇಂಡಿಯಾದ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: IPL 2022: ಹೊಸ ಎರಡು ತಂಡಗಳು ಆಯ್ಕೆ ಮಾಡಿದ 6 ಆಟಗಾರರು ಇವರೇ..!

(IPL 2022: Gary Kirsten on what Ahmedabad expects from Hardik Pandya, Rashid Khan and Shubman Gill)

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?