AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಗ್ರೀನ್ ಜೆರ್ಸಿ RCB ಪಾಲಿಗೆ ಅನ್​ಲಕ್ಕಿ, ಯಾಕೆ ಗೊತ್ತಾ?

IPL 2022: RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್

IPL 2022: ಗ್ರೀನ್ ಜೆರ್ಸಿ RCB ಪಾಲಿಗೆ ಅನ್​ಲಕ್ಕಿ, ಯಾಕೆ ಗೊತ್ತಾ?
RCB
TV9 Web
| Updated By: ಝಾಹಿರ್ ಯೂಸುಫ್|

Updated on: May 07, 2022 | 3:11 PM

Share

IPL 2022: ಐಪಿಎಲ್​ನ 54ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಎಸ್​ಆರ್​ಹೆಚ್ (RCB vs SRH)​ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಆರ್​ಸಿಬಿ ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದೆ. ಇತ್ತ ಆರ್​ಸಿಬಿ ತಂಡವು ಹಸಿರು ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೀಗ ಅಭಿಮಾನಿಗಳ ಚಿಂತೆಗೆ ಕಾರಣವಾಗಿದೆ. ಏಕೆಂದರೆ ಆರ್​ಸಿಬಿಗೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇದೀಗ ಗ್ರೀನ್ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿಯುತ್ತಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಏಕೆಂದರೆ ಆರ್​ಸಿಬಿ ಪಾಲಿಗೆ ಗ್ರೀನ್ ಜೆರ್ಸಿ ಅದೃಷ್ಟವಲ್ಲ ಎಂಬ ಮಾತಿದೆ. ಇದಕ್ಕೆ ಮುಖ್ಯ ಕಾರಣ ವಿಶೇಷ ಜೆರ್ಸಿಯಲ್ಲಿ ಆರ್​ಸಿಬಿ ಕಣಕ್ಕಿಳಿದಾಗ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಅಂದರೆ 2011 ರಿಂದ ಆರ್​ಸಿಬಿ ತಂಡವು ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಇದುವರೆಗೆ ಆರ್​ಸಿಬಿ ತಂಡವು 10 ಪಂದ್ಯಗಳನ್ನಾಡಿದ್ದು, ಈ ವೇಳೆ ಬಾರಿ ಗೆದ್ದಿದೆ. ಇನ್ನು ಏಳು ಪಂದ್ಯಗಳಲ್ಲಿ ಸೋತಿದೆ. ಇನ್ನು ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ.

ಆರ್​ಸಿಬಿ ತಂಡದ ಹಸಿರು ಜೆರ್ಸಿ ಪಂದ್ಯಗಳ ಫಲಿತಾಂಶಗಳು ಹೀಗಿವೆ:

2011 – ಗೆಲುವು

2012 – ಸೋಲು

2013 – ಸೋಲು

2014 – ಸೋಲು

2015 – ಫಲಿತಾಂಶವಿಲ್ಲ

2016 – ಗೆಲುವು

2017 – ಸೋಲು

2018 – ಸೋಲು

2019 – ಸೋಲು

2020 – ಸೋಲು

2021 – (ನೀಲಿ ಜೆರ್ಸಿ) ಸೋಲು

ಅಂದರೆ ಆರ್​ಸಿಬಿ ತಂಡವು ವಿಶೇಷ ಜೆರ್ಸಿಯಲ್ಲಿ ಕಣಕ್ಕಿಳಿದ ಕಳೆದ 5 ಪಂದ್ಯಗಳಲ್ಲೂ ಸೋತಿದೆ. ಹೀಗಾಗಿಯೇ ಗ್ರೀನ್ ಜೆರ್ಸಿ ಆರ್​ಸಿಬಿ ಪಾಲಿಗೆ ಅದೃಷ್ಟವಲ್ಲ ಎಂಬ ಮಾತಿದೆ. ಇದಾಗ್ಯೂ ಈ ಬಾರಿ ಆರ್​ಸಿಬಿ ಫಾಫ್ ಡುಪ್ಲೆಸಿಸ್​ ನಾಯಕತ್ವದಲ್ಲಿ ಆಡುತ್ತಿದ್ದು, ಹೀಗಾಗಿ ಸೋಲಿನ ಸರಪಳಿಯಿಂದ ಆರ್​ಸಿಬಿ ಹೊರಬರಲಿದೆಯಾ ಕಾದು ನೋಡಬೇಕಿದೆ.

RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ