AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್

Ipl 2022: ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ.

TV9 Web
| Edited By: |

Updated on: May 25, 2022 | 5:10 PM

Share
ಐಪಿಎಲ್​ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಮಂಗಳವಾರ ರಾತ್ರಿ ನಡೆದ ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಗುಜರಾತ್ ಫೈನಲ್​ಗೆ ಎಂಟ್ರಿಕೊಟ್ಟಿತು. ವಿಶೇಷ ಎಂದರೆ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲೂ ಗೆದ್ದಿರುವುದು ಕೊನೆಯ ಓವರ್​ನಲ್ಲಿ. ಈ ಮೂಲಕ ಇದೀಗ ಐಪಿಎಲ್ ಇತಿಹಾಸದಲ್ಲೇ ಹಾರ್ದಿಕ್ ಪಾಂಡ್ಯ ಪಡೆ ಹೊಸ ದಾಖಲೆ ಬರೆದಿದೆ.

ಐಪಿಎಲ್​ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಮಂಗಳವಾರ ರಾತ್ರಿ ನಡೆದ ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಗುಜರಾತ್ ಫೈನಲ್​ಗೆ ಎಂಟ್ರಿಕೊಟ್ಟಿತು. ವಿಶೇಷ ಎಂದರೆ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲೂ ಗೆದ್ದಿರುವುದು ಕೊನೆಯ ಓವರ್​ನಲ್ಲಿ. ಈ ಮೂಲಕ ಇದೀಗ ಐಪಿಎಲ್ ಇತಿಹಾಸದಲ್ಲೇ ಹಾರ್ದಿಕ್ ಪಾಂಡ್ಯ ಪಡೆ ಹೊಸ ದಾಖಲೆ ಬರೆದಿದೆ.

1 / 5
 ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ ಗುಜರಾತ್ ತಂಡಕ್ಕೆ 6 ಎಸೆತಗಳಲ್ಲಿ 16 ರನ್​ ಬೇಕಿತ್ತು. ಈ ವೇಳೆ ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಸತತ ಮೂರು ಸಿಕ್ಸ್ ಸಿಡಿಸುವ ಮೂಲಕ ಡೇವಿಡ್ ಮಿಲ್ಲರ್ ಟೈಟಾನ್ಸ್ ತಂಡಕ್ಕೆ ಜಯ ತಂದುಕೊಟ್ಟರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಕೊನೆಯ ಓವರ್​ನಲ್ಲಿ ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಗುಜರಾತ್ ಟೈಟಾನ್ಸ್ ಪಾಲಾಗಿದೆ. ಈ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಏಳು ಪಂದ್ಯಗಳನ್ನು ಕೊನೆಯ ಓವರ್​ನಲ್ಲಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಬಾರಿ ಅಂತಿಮ ಓವರ್​ನಲ್ಲಿ ಗುರಿ ಬೆನ್ನಟ್ಟಿ ಗೆದ್ದ ತಂಡ ಎಂಬ ದಾಖಲೆ ಹಾರ್ದಿಕ್ ಪಾಂಡ್ಯಪಡೆಯ ಪಾಲಾಗಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ ಗುಜರಾತ್ ತಂಡಕ್ಕೆ 6 ಎಸೆತಗಳಲ್ಲಿ 16 ರನ್​ ಬೇಕಿತ್ತು. ಈ ವೇಳೆ ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಸತತ ಮೂರು ಸಿಕ್ಸ್ ಸಿಡಿಸುವ ಮೂಲಕ ಡೇವಿಡ್ ಮಿಲ್ಲರ್ ಟೈಟಾನ್ಸ್ ತಂಡಕ್ಕೆ ಜಯ ತಂದುಕೊಟ್ಟರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಕೊನೆಯ ಓವರ್​ನಲ್ಲಿ ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಗುಜರಾತ್ ಟೈಟಾನ್ಸ್ ಪಾಲಾಗಿದೆ. ಈ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಏಳು ಪಂದ್ಯಗಳನ್ನು ಕೊನೆಯ ಓವರ್​ನಲ್ಲಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಬಾರಿ ಅಂತಿಮ ಓವರ್​ನಲ್ಲಿ ಗುರಿ ಬೆನ್ನಟ್ಟಿ ಗೆದ್ದ ತಂಡ ಎಂಬ ದಾಖಲೆ ಹಾರ್ದಿಕ್ ಪಾಂಡ್ಯಪಡೆಯ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿತ್ತು. ಚೆನ್ನೈ ಸೂಪರ್ ಕಿಂಗ್ಸ್ 2018 ರ ಸೀಸನ್​ನಲ್ಲಿ ಐದು ಬಾರಿ ಕೊನೆಯ ಓವರ್​ನಲ್ಲಿ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಇದೀಗ ಸಿಎಸ್​ಕೆ ದಾಖಲೆಯನ್ನು ಮುರಿದು ಗುಜರಾತ್ ಟೈಟಾನ್ಸ್​ ಚೊಚ್ಚಲ ಸೀಸನ್​ನಲ್ಲೇ ಹೊಸ ಇತಿಹಾಸ ಬರೆದಿದೆ.

ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿತ್ತು. ಚೆನ್ನೈ ಸೂಪರ್ ಕಿಂಗ್ಸ್ 2018 ರ ಸೀಸನ್​ನಲ್ಲಿ ಐದು ಬಾರಿ ಕೊನೆಯ ಓವರ್​ನಲ್ಲಿ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಇದೀಗ ಸಿಎಸ್​ಕೆ ದಾಖಲೆಯನ್ನು ಮುರಿದು ಗುಜರಾತ್ ಟೈಟಾನ್ಸ್​ ಚೊಚ್ಚಲ ಸೀಸನ್​ನಲ್ಲೇ ಹೊಸ ಇತಿಹಾಸ ಬರೆದಿದೆ.

3 / 5
ಇನ್ನು ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೂರನೇ ಸ್ಥಾನದಲ್ಲಿದ್ದು, 2019 ರ ಸೀಸನ್​ನಲ್ಲಿ ರಾಜಸ್ಥಾನ ಐದು ಬಾರಿ  ಕೊನೆಯ ಓವರ್‌ನಲ್ಲಿ ಜಯ ಸಾಧಿಸಿತ್ತು.

ಇನ್ನು ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೂರನೇ ಸ್ಥಾನದಲ್ಲಿದ್ದು, 2019 ರ ಸೀಸನ್​ನಲ್ಲಿ ರಾಜಸ್ಥಾನ ಐದು ಬಾರಿ ಕೊನೆಯ ಓವರ್‌ನಲ್ಲಿ ಜಯ ಸಾಧಿಸಿತ್ತು.

4 / 5
ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್​ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್​ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ