AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್

Ipl 2022: ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ.

TV9 Web
| Edited By: |

Updated on: May 25, 2022 | 5:10 PM

Share
ಐಪಿಎಲ್​ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಮಂಗಳವಾರ ರಾತ್ರಿ ನಡೆದ ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಗುಜರಾತ್ ಫೈನಲ್​ಗೆ ಎಂಟ್ರಿಕೊಟ್ಟಿತು. ವಿಶೇಷ ಎಂದರೆ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲೂ ಗೆದ್ದಿರುವುದು ಕೊನೆಯ ಓವರ್​ನಲ್ಲಿ. ಈ ಮೂಲಕ ಇದೀಗ ಐಪಿಎಲ್ ಇತಿಹಾಸದಲ್ಲೇ ಹಾರ್ದಿಕ್ ಪಾಂಡ್ಯ ಪಡೆ ಹೊಸ ದಾಖಲೆ ಬರೆದಿದೆ.

ಐಪಿಎಲ್​ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಮಂಗಳವಾರ ರಾತ್ರಿ ನಡೆದ ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಗುಜರಾತ್ ಫೈನಲ್​ಗೆ ಎಂಟ್ರಿಕೊಟ್ಟಿತು. ವಿಶೇಷ ಎಂದರೆ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲೂ ಗೆದ್ದಿರುವುದು ಕೊನೆಯ ಓವರ್​ನಲ್ಲಿ. ಈ ಮೂಲಕ ಇದೀಗ ಐಪಿಎಲ್ ಇತಿಹಾಸದಲ್ಲೇ ಹಾರ್ದಿಕ್ ಪಾಂಡ್ಯ ಪಡೆ ಹೊಸ ದಾಖಲೆ ಬರೆದಿದೆ.

1 / 5
 ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ ಗುಜರಾತ್ ತಂಡಕ್ಕೆ 6 ಎಸೆತಗಳಲ್ಲಿ 16 ರನ್​ ಬೇಕಿತ್ತು. ಈ ವೇಳೆ ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಸತತ ಮೂರು ಸಿಕ್ಸ್ ಸಿಡಿಸುವ ಮೂಲಕ ಡೇವಿಡ್ ಮಿಲ್ಲರ್ ಟೈಟಾನ್ಸ್ ತಂಡಕ್ಕೆ ಜಯ ತಂದುಕೊಟ್ಟರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಕೊನೆಯ ಓವರ್​ನಲ್ಲಿ ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಗುಜರಾತ್ ಟೈಟಾನ್ಸ್ ಪಾಲಾಗಿದೆ. ಈ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಏಳು ಪಂದ್ಯಗಳನ್ನು ಕೊನೆಯ ಓವರ್​ನಲ್ಲಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಬಾರಿ ಅಂತಿಮ ಓವರ್​ನಲ್ಲಿ ಗುರಿ ಬೆನ್ನಟ್ಟಿ ಗೆದ್ದ ತಂಡ ಎಂಬ ದಾಖಲೆ ಹಾರ್ದಿಕ್ ಪಾಂಡ್ಯಪಡೆಯ ಪಾಲಾಗಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ ಗುಜರಾತ್ ತಂಡಕ್ಕೆ 6 ಎಸೆತಗಳಲ್ಲಿ 16 ರನ್​ ಬೇಕಿತ್ತು. ಈ ವೇಳೆ ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಸತತ ಮೂರು ಸಿಕ್ಸ್ ಸಿಡಿಸುವ ಮೂಲಕ ಡೇವಿಡ್ ಮಿಲ್ಲರ್ ಟೈಟಾನ್ಸ್ ತಂಡಕ್ಕೆ ಜಯ ತಂದುಕೊಟ್ಟರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಕೊನೆಯ ಓವರ್​ನಲ್ಲಿ ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಗುಜರಾತ್ ಟೈಟಾನ್ಸ್ ಪಾಲಾಗಿದೆ. ಈ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಏಳು ಪಂದ್ಯಗಳನ್ನು ಕೊನೆಯ ಓವರ್​ನಲ್ಲಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಬಾರಿ ಅಂತಿಮ ಓವರ್​ನಲ್ಲಿ ಗುರಿ ಬೆನ್ನಟ್ಟಿ ಗೆದ್ದ ತಂಡ ಎಂಬ ದಾಖಲೆ ಹಾರ್ದಿಕ್ ಪಾಂಡ್ಯಪಡೆಯ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿತ್ತು. ಚೆನ್ನೈ ಸೂಪರ್ ಕಿಂಗ್ಸ್ 2018 ರ ಸೀಸನ್​ನಲ್ಲಿ ಐದು ಬಾರಿ ಕೊನೆಯ ಓವರ್​ನಲ್ಲಿ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಇದೀಗ ಸಿಎಸ್​ಕೆ ದಾಖಲೆಯನ್ನು ಮುರಿದು ಗುಜರಾತ್ ಟೈಟಾನ್ಸ್​ ಚೊಚ್ಚಲ ಸೀಸನ್​ನಲ್ಲೇ ಹೊಸ ಇತಿಹಾಸ ಬರೆದಿದೆ.

ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿತ್ತು. ಚೆನ್ನೈ ಸೂಪರ್ ಕಿಂಗ್ಸ್ 2018 ರ ಸೀಸನ್​ನಲ್ಲಿ ಐದು ಬಾರಿ ಕೊನೆಯ ಓವರ್​ನಲ್ಲಿ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಇದೀಗ ಸಿಎಸ್​ಕೆ ದಾಖಲೆಯನ್ನು ಮುರಿದು ಗುಜರಾತ್ ಟೈಟಾನ್ಸ್​ ಚೊಚ್ಚಲ ಸೀಸನ್​ನಲ್ಲೇ ಹೊಸ ಇತಿಹಾಸ ಬರೆದಿದೆ.

3 / 5
ಇನ್ನು ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೂರನೇ ಸ್ಥಾನದಲ್ಲಿದ್ದು, 2019 ರ ಸೀಸನ್​ನಲ್ಲಿ ರಾಜಸ್ಥಾನ ಐದು ಬಾರಿ  ಕೊನೆಯ ಓವರ್‌ನಲ್ಲಿ ಜಯ ಸಾಧಿಸಿತ್ತು.

ಇನ್ನು ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೂರನೇ ಸ್ಥಾನದಲ್ಲಿದ್ದು, 2019 ರ ಸೀಸನ್​ನಲ್ಲಿ ರಾಜಸ್ಥಾನ ಐದು ಬಾರಿ ಕೊನೆಯ ಓವರ್‌ನಲ್ಲಿ ಜಯ ಸಾಧಿಸಿತ್ತು.

4 / 5
ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್​ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್​ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

5 / 5
Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ